ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ

ಜಿಲ್ಲೆಯ ಕನ್ನಡಿಗರು ಸೇರಿ ಈ ವೇದಿಕೆಯನ್ನು ಉಪಯೋಗಿಸಬಹುದು. ಜಿಲ್ಲೆಯ ವಿಷಯಗಳನ್ನು ಸೇರಿಸಬಹುದು

Latest Activity

AMRUTHA KIRANA BM is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
on Thursday
P.V.Raghuram Prasad is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 4
BELLARY added 2 photos
October 31
manjubhargavi is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 29
Sitaram is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 28
E KAVI ಈ-ಕವಿ BELLARY
October 14
Ravikiran B Chikkamath is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 14
nagaraj b.shantappanavar, ಶಿವಶಂಕರ ಬಣಗಾರ and PRADEEP M joined ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 10
ranjith d k added a photo
October 4
ranjith d k is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 4
H.Anjaneyalu joined BELLARY's group
EKAVI ಈಕವಿ KAMPLI, Bellary
September 23
H.Anjaneyalu is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
September 23
mallesha vandiler and BELLARY are now friends
September 19
mallesha vandiler was featured
September 17
bharath r azad and mallesha vandiler joined ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
September 16
Arun Kumar uggannanavara is now a member of ಬೆಳ್ಳಾರಿ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
September 13

RSS

ಬಾಲಿವುಡ್ಡಿನ ಪ್ಲಾಸ್ಟಿಕ್ಕು ಮುಖಗಳು ಮತ್ತು ವಿವೇಕ..!

“ಗುಜರಿ ಅಂಗಡಿಯಲ್ಲಿ ಸಿಗುವ ಪ್ಲಾಸ್ಟಿಕ್ಕುಗಳಿಗಿಂತ ಹೆಚ್ಚು ನಮ್ಮ ಬಾಲಿವುಡ್ಡಿನಲ್ಲಿ ಸಿಗುತ್ತದೆ.. ಪ್ಲಾಸ್ಟಿಕ್ ನಗು, ಪ್ಲಾಸ್ಟಿಕ್ ಅಳು.. ಏನು ಬೇಕು, ಎಲ್ಲಾ ಪ್ಲಾಸ್ಟಿಕ್ ಮಯ!” ಅನ್ನುತ್ತಾ ವಿಷಣ್ಣನಾಗಿ ನಗುತ್ತಾರೆ ಬಾಲಿವುಡ್ಡಿನ ಪ್ರತಿಭಾನ್ವಿತ ನಟನಲ್ಲಿ ಓರ್ವನಾದ ವಿವೇಕ್ ಓಬರಾಯ್! ಕೆಲ ವರುಷಗಳ ಹಿಂದೆ ತನಗೊಂದು ಚಾನ್ಸ್ ಕೊಡಿ ಅಂತ ವಿವೇಕ್, ರಾಮ್ ಗೋಪಾಲ್ ವರ್ಮಾನ ಬಳಿ ಬಂದಾಗ ಈತನ ವೇಷ ಭೂಷಣ ನೋಡಿ ವರ್ಮಾ ತನ್ನ ಕಥೆಯಲ್ಲಿನ ಪಾತ್ರಕ್ಕೆ ಈತ ಒಗ್ಗುವನಾ ಎಂದು ಸ್ವಲ್ಪ ಅನುಮಾನಿತನಾಗಿದ್ದ. ಸ್ಲಮ್ಮಿನ ಹುಡುಗನೊಬ್ಬ ಭೂಗತಲೋಕದ ಡಾನ್ [...]

ಹೆಸರಿನ ಹಂಗಿಲ್ಲದ ಹನಿಗಳು

ಅಂಗಳದ ಉದ್ದಕ್ಕೂ ತಾರೆಗಳ ಪ್ರಣತಿ ಸಾಲು..  ಇದ್ದರೂ ಸಹ ಅಂಗಳದ ತುಂಬಾ ಚೆಲ್ಲಿಹನು ಚಂದಿರ ತನ್ನ ಬೆಳಕಿನ ಹಾಲು…     ******   ನೋವುಗಳ ಕತ್ತಲನು ಹೊಡೆದೋಡಿಸಲಿ ನಗುವಿನ ಬಿಸಿಲುಕೋಲು..  ಎದೆಯ ಗಾಯಗಳನ್ನೆಲ್ಲಾ ನಯವಾಗಿ ಹೊಲಿದುಬಿಡಲಿ ಪ್ರೀತಿಯ ಒಂದು ಎಳೆ ನೂಲು..   *******     ಈ ಖಾಲಿ ನಟ್ಟಿರುಳಲಿ ನಾನು ಮತ್ತು ಬಾನು ಎರಡೂ ಚುಕ್ಕಿ ಜೋಡಿಸಲು ಬರುವ ಹುಡುಗಿಗಾಗಿ ಕಾಯುತಿರುವ ಅಂಗಳ   *******   ನೇಸರನು ಎಲ್ಲೋ ಮರೆಯಲ್ಲಿ ಕೂತು.. ಕತ್ತಲ ಕಾವಲಿಗೆ ಹುಯ್ದ ರಾತ್ರಿಯ ದೋಸೆಗೆ ನೂರೆಂಟು ತೂತು!   *****     ಮುಂದಿನ ದಾರಿಗೆ ಬೆಳಕೆಲ್ಲಾ ಮುಗಿದು ಹೋದರೂ ಎದೆಯೊಳಗೆ ಉರಿಯುತಿರಲಿ ಸದಾ ಭರವಸೆಯ ಮಿಣುಕು ದೀಪ..   ****   ಈ ಹನಿಗಳು ಇವತ್ತಿನ (೨-೧೧-೦೯) ವಿಜಯ ಕರ್ನಾಟಕ ದ ಸಿಂಪ್ಲಿಸಿಟಿ ಪೇಜ್ ನಲ್ಲಿ ಪ್ರಕಟವಾಗಿವೆ.    

ಕವಿತೆಯೆಂದರೆ..!

  ಕವಿತೆಯೆಂದರೆ ನಾನು ನೀನಾಗುವ ಅದ್ಭುತ ಅವಕಾಶ ಆದ್ದರಿಂದಲೇ ನಾನು ಕವಿತೆಯಾಗುವುದನು ಪ್ರೀತಿಸುತ್ತೇನೆ.. ಕವಿತೆಯೆಂದರೆ ನಾನು ನೀನು ಇಬ್ಬರೂ ಕಲೆತು ನಾನ್ಯಾರು ನೀನ್ಯಾರು ಅಂತ ಗೊತ್ತಾಗದ ಮಬ್ಬು. ಅದಕ್ಕೇ ಕೆಲವೊಮ್ಮೆ ಕವಿತೆಯಾಗಲು ಭಯಪಡುತ್ತೇನೆ. ಕವಿತೆಯೆಂದರೆ ಕತ್ತಲೆಯಲಿ ಮೆದು ದೇಹವೊಂದು ಡಿಕ್ಕಿ ಹೊಡೆದಂತೆ, ಸ್ಪರ್ಶಿಸಿದ್ದು ಹೆಣ್ಣೆಂದು ಖುಷಿಪಡಬೇಕೋ ಗಂಡೆಂದು ಸಿಟ್ಟಾಗಬೇಕೋ ಎಂದು ಅರಿವಾಗದ ಗೊಂದಲ. ಅದಕ್ಕೆ ಕವಿತೆಯಾಗಲು ತುಂಬ ಸಲ ಸಂದೇಹಿಸುತ್ತೇನೆ!

ನಿಮಗುಂಟೇ ಅರಿವು?

ಪಕ್ಕದಮನೆಯಲ್ಲೇ ಕುಟುಂಬದ ಹಿರಿಯನೊಬ್ಬನ ಸಾವು ಇದ್ದಿದ್ದರೂ ನಿಮ್ಮ ಮನೆಯ ಸಡಗರದ ಕೇವಲ ಒಂದು ಪಾಲೂ ಬಿಟ್ಟುಕೊಡದೇ ಹೋದಿರಾ ಒಂದೇ ಒಂದು ಕ್ಷಣದ ಮೌನಪ್ರಾರ್ಥನೆ ನಿಮ್ಮನ್ನು ಮನುಷ್ಯನಾಗಿಸುತ್ತಿತ್ತಲ್ಲ ಎಂಥಾ ಅವಕಾಶ ತಪ್ಪಿಸಿಕೊಂಡಿರಲ್ಲಾ ಅಕೋ ಅಲ್ಲಿ ರೋಗಿಷ್ಟ ಕೈಯ್ಯನ್ನು ಪ್ರೀತಿಯಿಂದ ನೇವರಿಸಿದ ಹೃದಯದ ಬಿಸಿ ನಿಮ್ಮವರೆಗೂ ಯಾಕೆ ಬರದೇಹೋಯಿತು ಆತ್ಮಸಾಕ್ಷಿಯ ಪ್ರಶ್ನೆಗಳಿಗೆ ತಡವಿ ಆತಂಕಿತರಾಗಿ ಬೆವರಿಳಿಸಿದಾಗ ನಿಮ್ಮನು ನೇವರಿಸಿದ ತಂಗಾಳಿಗಾಗಿ ನೀವೇನು ನೀಡಿದಿರಿ ಅಲೆಮಾರಿಗಳ ಊರಿನಲ್ಲಿ ಜಾರಿದವರಿಗೆ ಆಸರೆಯಾಗಲಿಲ್ಲವೇಕೆ ನೀವು ಅದರ ಅರಿವೇ ಇರಲಿಲ್ಲವಲ್ಲವೇ ನಿಮ್ಮದೇ ಊರುಗೋಲು ಎಡವಿದವರೆಗೂ ನಿಜಾ ಹೇಳಿ, ನಿಮಗುಂಟೇ ಅರಿವು ದಿಗ್ದಿಗಂತದ ಮೂಲೆಯಲ್ಲೆಲ್ಲೋ ಇದ್ದರೂ ನಿಮ್ಮ ಹಾದಿಯುದ್ದಕ್ಕೂ ಖುಷಿ ನೀಡಿದ, ಗೌಜುಗದ್ದಲದ ಬೇಲಿಯೊಳಗೇ ಮೌನವಾಗಿ ನಸುನಗುತ್ತಿದ್ದ, ನಿಮ್ಮ ಒಂದು ಪ್ಚ್ ನ್ನು ಎಂದೂ ಬಯಸದ ನೀಲಿಹೂವಿನ ಮರಣ? [...]

ಇತ್ತೀಚೆಗೆ

ಬಾಲ್ಯದ ತುಂಬಾ ಚಂದಮಾಮನನು ತೋರಿಸಿಯೇ ಉಣ್ಣಿಸಿದ್ದ ಅವ್ವನಿಗೆ ಕಲೆಯಿರದ ಚಂದಿರನ ಕಲ್ಪನೆಯೇ ಇರಲಿಲ್ಲವಂತೆ   ರೂಮಿನಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ವಸ್ತುಗಳಂತಿದ್ದ ಬದುಕಿಗೆ ಒಪ್ಪ ಓರಣಗಳ ಕಲಿಸುವ ಟೀಚರಿನ ಅವಶ್ಯಕತೆಯಿದೆಯೆಂದು ನನಗೂ ಅರಿವಿರಲಿಲ್ಲ. ಬೇಲಿ ಹಾರಿ ಲೂಟಿ ಮಾಡುವ ಜೋಡಿ ಹೋರಿಗಳಂತಿದ್ದ ಕಣ್ಣುಗಳನು ನೊಗ ಕಟ್ಟುವಂಥ ಮೊಗ ಇದೆಯೆಂಬುದರ ತಿಳಿವೂ ಇದ್ದಿರಲಿಲ್ಲ ಅವಳು ಸಿಕ್ಕಿದ್ದು ತೀರಾ ಇತ್ತೀಚೆಗೆ.   - ಅಕ್ಟೋಬರ್ ಮಾಸದ “ಮಯೂರ” ದಲ್ಲಿ ಪ್ರಕಟಿತ.

Members

  • AMRUTHA KIRANA BM
  • AVINASHA C M
  • suresha hm
  • Kotresh Munavalli matt
  • karunakarn B B
  • arun joladakudligi
  • satish patil
  • veeruayli
  • Lakshmishruthi
  • Besthara
  • SACHIN B M
  • Ramakrishna
  • mallesha vandiler
  • Ravikiran B Chikkamath
  • Sitaram
  • Arun Kumar uggannanavara

RSS

ಭರವಸೆಯ ಭಾವಗಳು...!

ಎಷ್ಟು ಬಗೆದರೂ ತೀರದ
ತಾತ್ಸಾರ, ಸಿಟ್ಟು-ಸೆಡವುಗಳನ್ನು
ನಿರುಮ್ಮಳವಾಗಿ ಸ್ವಚ್ಛಗೊಳಿಸಿದ
ಪ್ರೀತಿಯ ಒದ್ದೆ ಕಣ್ಣುಗಳು,
ಎಷ್ಟೇ ಅಡಗಿಸಿಟ್ಟರೂ ಮತ್ತೆಲ್ಲೋ
ಗಕ್ಕನೆ ಎಲ್ಲವನ್ನೂ ಆವಾಹಿಸಿಕೊಂಡು
ಭಾವುಕತೆಗೊಡ್ಡಿ ಯಾವುದೋ
ಸಂಜೆಗಳಲ್ಲಿ ಆವರಿಸಿಬಿಡುವ ನಿನ್ನ ಮೌನ,
ಎಲ್ಲವನ್ನು ಮೌನದಲ್ಲಿ ಪಿಸುಗುಟ್ಟಿ...
ಮಗುವಿನಂತ ನಿಷ್ಕಲ್ಮಶ ನಗೆ ನಕ್ಕು,
ನನ್ನ ಕೆನೆಹಳದಿ ಹಾಳೆಯಲ್ಲಿ ಬರೆದ ಕವಿತೆ
ನೀ ಕೂಡಿಟ್ಟು ಹಸನುಗೊಳಿಸಿದ
ಭರವಸೆಯ ಭಾವಗಳೇ ...!!

ಶರಧಿಗೆ ಎರಡು ವರ್ಷ. ನಿಮ್ಮ ಹಾರೈಕೆ ಹೀಗೇ ಇರಲಿ...


ಪ್ರೀತಿಯ ಸ್ನೇಹಿತರೇ,

ನಿಮಗಿದೋ ಪ್ರೀತಿಯ ನಮನಗಳು.

ನಿಮಗೊಂದು ಶುಭಸುದ್ದಿ ತಿಳಿಸಬೇಕಿದೆ. ನನಗೆ ಖುಷಿ, ಮನದಳೊಗೆ ಸಂಭ್ರಮ. ಏಕೆ ಗೊತ್ತೆ ನನ್ನ ಶರಧಿಗೆ ನವೆಂಬರ್ 3ನೇ ತಾರೀಕಿಗೆ ಭರ್ತಿ ಎರಡು ವರ್ಷ. ಶರಧಿ ಎರಡು ವರ್ಷ ನಿರಂತರವಾಗಿ ಹರಿದಿದ್ದಾಳೆ. ಇದೀಗ ಮೂರನೇ ವರ್ಷಕ್ಕೆ ಕಾಲಿಡುತ್ತಿದ್ದಾಳೆ. ಅವಳು ದೊಡ್ಡವಳಾಗಿದ್ದಾಳೆ. ಜೊತೆಗೆ ನನ್ನನ್ನು ಸಾಕಷ್ಟು ಬೆಳೆಸಿದ್ದಾಳೆ. ಅಪಾರ ಸ್ನೇಹಿತರನ್ನು ನೀಡಿದ್ದಾಳೆ. ಬೆನ್ನು ತಟ್ಟೋರು, ತಪ್ಪಾಗ ತಿದ್ದಿ ತಿಡೋರು ಎಲ್ಲಾರೂ ಸಿಕ್ಕಿದ್ದಾರೆ. ನಂಗದು ಖುಷಿ. ಎರಡು ವರ್ಷದಲ್ಲಿ ಶರಧಿ ಕಂಡಿದ್ದು 146 ಬರಹಗಳನ್ನು. ಆಫೀಸ್ ಕೆಲಸ, ನಿತ್ಯ ಕಾಡುವ ಅನಗತ್ಯ ಕಿರಿಕಿರಿ ನಡುವೆ 200 ಬರಹಗಳನ್ನು ದಾಟುವ ಕನಸು ನನಸಾಗಲಿಲ್ಲ. ಆದರೂ ಬರಹಪ್ರೀತಿ ಕುಂದಿಲ್ಲ. ನನ್ನೊಳಗಿನ ಕನಸುಗಳು ಆಗಾಗ ಮೂರ್ತ ರೂಪ ಪಡೆಯುತ್ತಲೇ ಇವೆ.
ನನ್ನ ಪ್ರೋತ್ಸಾಹಿಸಿದ ಎಲ್ಲಾ ಸ್ನೇಹಿತರಿಗೂ ಕೃತಜ್ಞತೆಗಳು. ಇನ್ನು ಮುಂದೆಯೂ ನನ್ನ ಶರಧಿ ನಿರಂತರವಾಗಿ ಹರಿಯುತ್ತಾಳೆ ಅನ್ನೋ ಪುಟ್ಟ ನಂಬಿಕೆ. ನಿಮ್ಮ ಪ್ರೀತಿ, ಪ್ರೋತ್ಸಾಹ ಇದ್ದೇ ಇರುತ್ತೆ ಅನ್ನೋ ಅಚಲ ನಂಬಿಕೆ ನನ್ನದು. ನಿಮ್ಮ ಪ್ರೋತ್ಸಾಹಕ್ಕೆ ನನ್ನ ಪ್ರೀತಿಯ ಸಲಾಂ.

ಈ ನಡುವೆ ಇನ್ನೊಂದು ಸತ್ಯ ಹೇಳಲೇಬೇಕಿದೆ. ಬಹುಶಃ ಬಹುತೇಕರಿಗೆ ಗೊತ್ತೇ ಇದೆ. ಕಳೆದ ಮಾರ್ಚ್ ನಲ್ಲಿ 'ಧರಿತ್ರಿ' ಅನ್ನೋ ಹೆಸರಲ್ಲಿ ಬ್ಲಾಗ್ ಆರಂಭಿಸಿದ್ದೆ. ಅದೇಕೆ ಅನಾಮಧೇಯ ಹೆಸರು? ಅಂದುಕೊಳ್ಳಬಹುದು. ವೃತ್ತಿಯಲ್ಲಿರುವಾಗ ಕೆಲವೊಂದು ನಿಯಮಗಳಿಗೆ ನಾವು ನಿಷ್ಠರಾಗಿರಬೇಕಾಗುತ್ತೆ. ಹಾಗಾಗಿ, ಅನಿವಾರ್ಯವಾಗಿ ಶರಧಿ ಜೊತೆಗೆ ಧರಿತ್ರಿಯನ್ನೂ ಆರಂಭಿಸಿದ್ದೆ. ಧರಿತ್ರಿನೂ 33 ಬರಹಗಳನ್ನು ಕಂಡಿದ್ದಾಳೆ. ಶರಧಿಯಂತೆ ಅವಳನ್ನೂ ಪ್ರೀತಿಯಿಂದ ಸಲಹುತ್ತಿದ್ದೇನೆ. ನೀವೆಲ್ಲರೂ ಪ್ರೋತ್ಸಾಹಿಸುತ್ತಲೇ ಇದ್ದೀರಿ. ಇದು ನನ್ನ ಅದೃಷ್ಟ ಎಂದುಕೊಳ್ಳುತ್ತೇನೆ. ಇವತ್ತು ಈ ವಿಚಾರವನ್ನು ಅಧಿಕೃತವಾಗಿ ಹೇಳಿಬಿಟ್ಟಿದ್ದೀನಿ. ಇನ್ನು ಮುಂದೆನೂ ಧರಿತ್ರಿ ಧರಿತ್ರಿಯಾಗೇ, ಶರಧಿ ಶರಧಿಯಾಗೇ ಮುಂದುವರಿಯುತ್ತಿದ್ದಾರೆ. ಶರಧಿಗೆ ಅಣ್ಣ ರೋಹಿ ಚೆಂದದ ವಿನ್ಯಾಸ ಮಾಡಿಕೊಟ್ಟರೆ, ಧರಿತ್ರಿಗೆ ನನ್ನ ಸೀನಿಯರ್ ಹಾಗೂ ಗೆಳೆಯ ಲಕ್ಷ್ಮಿಕಾಂತ್ ವಿನ್ಯಾಸ ಮಾಡಿದ್ದಾರೆ. ಅವರಿಗೆ ತುಂಬಾ ಥ್ಯಾಂಕ್ಸ್. ಯಾರಿಗೂ ನೋವು ಕೊಡದ ರೀತಿಯಲ್ಲಿ ಭಾವನೆಗಳನ್ನು ಬಿಚ್ಚುತ್ತಾ ಹೋಗುವುದು ನನ್ನ ಇಷ್ಟ. ಎಲ್ಲೋ ನೋಡಿದ್ದು, ಹೃದಯವನ್ನು ತಟ್ಟಿದ್ದು ಎಲ್ಲವೂ ಬರಹಗಳಾಗಿವೆ. ಮುಂದೆಯೂ ಹೊಸ ಕೆಲಸದೊತ್ತಡ, ನಿತ್ಯ ಕಾಡುವ ಸಮಸ್ಯೆಗಳು, ಚಿಂತೆಗಳು ಅಥವಾ ಒಂಟಿಯಾಗಿದ್ದ ನಾನು ಜಂಟಿಯಾದರೂ ಧರಿತ್ರಿ ಮತ್ತು ಶರಧಿ ಎರಡೂ ಬ್ಲಾಗ್ ಗಳನ್ನು ಅಷ್ಟೇ ಪ್ರೀತಿಯಿಂದ ಸಲಹುತ್ತೇನೆ. ನಿಮ್ಮ ಪ್ರೋತ್ಸಾಹ ಇದ್ದೇ ಇರುತ್ತದೆ ಎಂದುಕೊಂಡಿದ್ದೀನಿ. ನಿಮ್ಮ ಪ್ರೀತಿ, ಪ್ರೋತ್ಸಾಹಕ್ಕೆ ನಾ ಋಣಿ.

ಪ್ರೀತಿಯಿಂದ,
ಚಿತ್ರಾ ಕರ್ಕೇರಾ

ಮೌನದಲ್ಲೇ ಮಾತಾಡ್ತೀನಿ, ಕವನ ಬರಿ...!

ಯಾಕೋ ಪತ್ರ ಬರೀಬೇಕು ಅನಿಸುತ್ತೆ ಕಣೋ..ಅದು ನಿನ್ನ ಪತ್ರ ನೋಡಿದ ಮೇಲೆ. ಇದೇ ಮೊದಲ ಪತ್ರ, ಬಹುಶಃ ಇದೇ ಕೊನೆಯ ಪತ್ರ ಆಗಿರಬಹುದು. ತುಂಬಾ ಜನ ಹೇಳ್ತಾರೆ ಪ್ರೀತಿಯ ಪತ್ರ ತುಂಬಾ ಮಾತಾಡುತ್ತೆ ಅಂತ. ಹೌದು ಕೂಡ, ನಿನ್ನ ಮಾತುಗಳಿಂದ ನೀ ಬರೆದ ಪತ್ರಾನೇ ಇಷ್ಟ ಆಯಿತು. ಆದರೆ, ನಿನ್ ಥರ ಚೆನ್ನಾಗಿ ಪತ್ರ ಬರೆಯೋಕೆ, ನಿನ್ ಥರ ಭಾವನೆಗಳನ್ನು ಪದಗಳಲ್ಲಿ ಪೋಣಿಸೋಕೆ, ನಿನ್ ಥರ ಸುಂದರ ಭಾವಗೀತೆಗಳನ್ನು ಬರೆಯೋಕೆ, ನಿನ್ ಥರ ಪ್ರಕೃತಿ ಮಧ್ಯೆ ಕುಳಿತು ಕತೆ-ಕವನ, ಲೇಖನ ಗೀಚೋಕೆ ಬರೊಲ್ಲ ಕಣೋ. ಅದಕ್ಕೆ ನೋಡು ನೀನು ಇಷ್ಟು ದಿನ ಬಚ್ಚಿಟ್ಟ ಪ್ರೀತಿ, ನೀ ಗೀಚಿದ ಕವನ, ನೀ ಮೂಡಿಸಿದ ಸುಂದರ ಕಲೆ..ಎಲ್ಲವನ್ನೂ ಮೌನವಾಗೇ ನೋಡುತ್ತಾ ಕಣ್ಣಲ್ಲೇ ಸವಿದೆ, ವಿನಃ ಅಕ್ಷರಗಳಲ್ಲಿ ಪೋಣಿಸಲು ಸಾಧ್ಯವಾಗಲಿಲ್ಲ. ಮಾತಿನಲ್ಲಿ ಹೇಳಲೂ ಆಗಲಿಲ್ಲ. ಬಹುಶಃ ನನ್ನ ಮೌನವನ್ನೂ ಅರ್ಥಮಾಡಿಕೊಳ್ಳೋ ಅಗಾಧ ಕಲೆಯನ್ನು ದೇವರು ನಿಂಗೆ ನೀಡಿದ್ದನಲ್ಲಾ ಅದಕ್ಕೆ ದೇವರಿಗೇ ಥ್ಯಾಂಕ್ಸ್ ಹೇಳಿದ್ದೀನಿ ಕಣೋ.

ಹೌದು, ನೀನಂದ್ರೆ ನಂಗಿಷ್ಟ, ಆದ್ರೆ ನಾ ಹೇಳಲ್ಲಿಲ್ಲ..ನೀನಿಷ್ಟ, ನಿನ್ನ ನಗು ಇಷ್ಟ, ನಿನ್ನ ಪ್ರೀತಿ ಇಷ್ಟ ಅಂತ! ನೀನೇ ಹೇಳಿಬಿಟ್ಟಿಯಲ್ಲಾ...ಅದು ನಂಗೆ ಖುಷಿ, ನಿನ್ನ ಧೈರ್ಯಕ್ಕೆ ನನ್ನ ಪುಟ್ಟ ಸಲಾಂ.

ಎಷ್ಟು ಕೆಟ್ಟದ್ದಾಗಿ ಪತ್ರ ಬರೆದಿದ್ದಾಳೆ ಅಂತ ಬೈಕೋಬೇಡ. ಮುಖ ಊದಿಸಿಕೋಬೇಡ. ನಿನ್ನ ಸುಂದರ ಮೂಗಿನ ಮೇಲೆ ಸಿಟ್ಟನ್ನು ನೋಡೋದು ನಂಗೆ ಇಷ್ಟವಿಲ್ಲ. ನಿನ್ನ ಸುಂದರ ಕಣ್ಣುಗಳ ದುರುಗುಟ್ಟುವಿಕೆಯನ್ನು, ಸಿಟ್ಟಿನಿಂದ ನೀನು ಬಡಬಡಿಸೋದನ್ನು ನನ್ನ ಕಣ್ಣಿಂದ ನೋಡಕ್ಕಾಗಲ್ಲ ಕಣೋ. ಅದಕ್ಕೆ ಯಾವತ್ತೂ ಸಿಟ್ ಮಾತ್ರ ಮಾಡಿಕೊಳ್ಳಬೇಡ.

ತುಂಬಾ ಹೇಳಬೇಕನಿಸುತ್ತೆ..ಆದರೆ ಬರೆಯೋಕ್ಕಾಗಲ್ಲ. ನಿನ್ನ ಥರ ನೀ ಬಿತ್ತಿದ ಬೀಜಗಳಿಗೆ ನಾ ರೈತ ಆಗ್ತೀನಿ ಅನ್ನೋಕೆ ಬರಲ್ಲ. ಜೀವನವಿಡೀ ನಿನಗೆ ಮೊಗೆದಷ್ಟು ಬತ್ತದ ಪ್ರೀತಿ ನೀಡ್ತೀನಿ. ನಿನ್ನ ಕನಸು, ನಿರೀಕ್ಷೆಗಳಿಗೆ ನೀರೆರೆದು ಪೋಷಿಸ್ತೀನಿ. ನನ್ನ ಹೃದಯ ತುಂಬಾನು ಕನಸುಗಳಿದೆ ಕಣೋ...ಪುಟ್ಟ ಪುಟ್ಟ ಕನಸುಗಳು. ಅದಕ್ಕೆ ಜೀವ ತುಂಬ್ತೀಯಾ ಅಂತ ಗೊತ್ತು ನಂಗೆ. ಜೀವನವನ್ನು ಪ್ರೀತಿ, ಖುಷಿ, ನೆಮ್ಮದಿಗಳಿಂದ ಸಿಂಗರಿಸಿಬಿಡು..ಅದಕ್ಕೆ ನನ್ನದೂ ಸಾಥ್ ಇದೆ.ಅಷ್ಟೇ ಸಾಕಲ್ವಾ? ನಮ್ಮ ಬದುಕಿಗೆ.....? ಇನ್ನೇನು ಹೇಳಕ್ಕೆ ಬರಲ್ಲ...ಮೌನದಲ್ಲೇ ಮಾತಾಡ್ತೀನಿ. ನೀನು ಕವನ ಬರೆ...!
ಅದಿರಲಿ, ಯಾವಾಗ ನನ್ನನ್ನು ನಿನ್ನೂರಿಗೆ ಕರೆದುಕೊಂಡು ಹೋಗ್ತಿಯಾ? ನಿಮ್ಮಮ್ಮನಿಗೆ ನಿಮ್ಮಪ್ಪನಿಗೆ ಪರಿಚಯ ಮಾಡಿಸ್ತೀಯಾ ಹೇಳು.

ಪ್ರಾಮೀಸ್ ಮಾಡು..ಖುಷಿಯಾಗಿರ್ತಿ ಅಲ್ವಾ?

ಮುನ್ನಿ....

ಬಹಾರೋ ಫೂಲ್ ಬರ್ಸಾ ಹೋ

ಮೇರಾ ಮೆಹಬೂಬ್ ಆಯಾ ಹೇ...

ರಫೀ ಹಾಡಿದ ಹಾಡನ್ನು ಕೇಳುತ್ತಾ ಪತ್ರ ಬರೀತಾ ಇದ್ದೀನಿ ಮುನ್ನಿ.


ಹೇಗಿದ್ಯಾ? ಇಂದು ನಮ್ಮೂರಲ್ಲಿ ಮಳೆ ಬಂದಿದೆ ಕಣೇ. ನಿಮ್ ಕಡೆ ಹೊಲ, ಗದ್ದೆ, ಕೆರೆ-ತೊರೆಗಳು ತುಂಬಿ ಹರಿಯುತ್ತಿದ್ದರೂ ನಮ್ಮೂರಲ್ಲಿ ಅದೇಕೋ ವರುಣನಿಗೆ ನಮ್ ಮೇಲೆ ಮುನಿಸು. ಆದರೆ ಇಂದು ಮಳೆ ಬಂದಿದೆ. ಮನೆಯಂಗಳ ದೊಡ್ಡ ತೊರೆಯಾಗಿದೆ. ತುಂಬಿ ಹರಿಯೋ ಕೆರೆ-ತೊರೆಗಳನ್ನು ನೋಡುವಾಗ ತುಂಬಾ ಖುಷಿಯಾಗುತ್ತಿದೆ. ನಮ್ಮೂರ ತೋಟಗಳಲ್ಲಿ ಹಸಿರು ಮೈ ತುಂಬಿ ನಿಂತಿದೆ. ಬಾಲ್ಯದ ತುಂಟಾಟಗಳು ನೆನಪಾಗುತ್ತಿವೆ. ಸಣ್ಣವನಿರುವಾಗ ಜೋರು ಮಳೆಗೆ ಆಲಿಕಲ್ಲು ಹೆಕ್ಕಕೆ ಹೋಗಿ ಜಾರಿ ಬಿದ್ದಿದ್ದು ನೆನಪಾಗಿ ನಗು ಬಂತು ಕಣೇ. ಆವಾಗ ನೀನಿನ್ನೂ ಚಡ್ಡಿ ಹಾಕದೆ ಮನೆತುಂಬಾ ಓಡಾಡಿ ಬೊಕ್ಕು ಬಾಯಿ ಅಗಲಿಸಿ ಎಲ್ಲರನ್ನೂ ನಗಿಸುತ್ತಿದ್ದೆ!!

ಮಳೆ ಬಂದಾಗ ಅದೇಕೆ ನಿನಗೆ ಪತ್ರ ಬರೆದೆ ಅಂತ ಅಚ್ಚರಿಯಾಯಿತೇ? ಅಮ್ಮ ಮಾಡಿಟ್ಟ ಹಪ್ಪಳ ಸಂಡಿಗೆ ಮೆಲ್ಲುತ್ತಾ ನಿನ್ನದೇ ನೆನಪಿನ ಮಳೆಯಲ್ಲಿ ತೋಯ್ತಾ ಇದ್ದೀನಿ ಕಣೇ ಮುನ್ನಿ. ನಿಂಗೆ ನೆನಪಿದೆಯಾ ನಾನು-ನೀನು ಭೇಟಿಯಾದ ಮೊದಲ ದಿನ ಧಾರಾಕಾರ ಮಳೆ ಸುರಿದು, ನಾನೂ ನಿನ್ನ ಛತ್ರಿಯೊಳಗೆ ಹುದುಗಿಹೋಗಿದ್ದು! ಅಷ್ಟೇ ಅಲ್ಲ, ಮಳೆಯಲ್ಲಿಯೇ ನಿನ್ನದೆಯಲ್ಲಿ ನಾನು ಕರಗಿಹೋಗಿದ್ದು, ನಿನ್ನ ಹೆಗಲ ಮೇಲೆ ಕೈಹಾಕಿದಾಗ ನಾಚಿಕೆಯಿಂದ ನನ್ನ ಕೈಯನ್ನು ಸರಿಸಿದ್ದು..! ಕೊನೆಗೂ ಮಳೆ ಎಡಬಿಡದೆ ಸುರಿದಾಗ ನೆನೆಯುತ್ತಲೇ ಮನೆ ಸೇರಿಕೊಂಡಿದ್ದು. ಮತ್ತೆ ಸುಂದರ ನೆನಪುಗಳೊಂದಿಗೆ ನಿದ್ದೆಯ ಮಂಪರಿಗೆ ಜಾರಿದ್ದು..ಎಲ್ಲವೂ ನೆನಪಾಗುತ್ತಿದೆ ಕಣೇ. ಅಮ್ಮನ ಕೈತುತ್ತ ಮೆಲ್ಲುವಾಗ ನಿನ್ನದೇ ನೆನಪಾಗುತ್ತೆ ಮುನ್ನಿ. ಅಮ್ಮನ ಬಿಟ್ಟರೆ ನಾನು ಕೈತುತ್ತು ಉಂಡಿದ್ದು ನಿನ್ನ ಕೈಯಿಂದ ಕಣೇ.

ಮುನ್ನಿ...

ಜೋರು ಮಳೆಗೆ ನಮ್ಮೂರ ಜೋಗವನ್ನು ನಿಂಗೆ ತೋರಿಸಬೇಕು...ಮುಂಗಾರು ಮಳೆಯಂತೆ ಪ್ರೀತಿಯ ಮಳೆಯಲ್ಲಿ ನೆನೆಯಬೇಕು. ಮನತುಂಬಾ ಪ್ರೀತಿಯ ಕಚಗುಳಿಯಲ್ಲಿ ಖುಷಿಪಡಬೇಕು. ಹಸಿರು ಜರತಾರಿ ಉಟ್ಟ ಸಹ್ಯಾದ್ರಿಯನ್ನು ನಿಂಗೆ ತೋರಿಸಿ, ನಿನ್ನ ಕಣ್ಮನ ಖುಷಿಗೊಳಿಸಬೇಕು. ಪ್ರಕೃತಿಯನ್ನು ಪ್ರೀತಿಸುವ ನನ್ ಮುನ್ನಿಗೆ ನಮ್ಮೂರ ಮಳೆ, ಇಳೆ, ಹಸಿರು...ಎಲ್ಲವನ್ನೂ ತೋರಿಸಬೇಕು. ನನ್ನಮ್ಮನಿಗೆ ನೋಡು ಮುನ್ನೀನ ತಂದಿದ್ದೀನಿ ಅಂತ ಪರಿಚಯ ಮಾಡಿಸಬೇಕು. ಅಮ್ಮನಿಂದ ಭಲೇ ಅಂತ ಬೆನ್ನು ತಟ್ಟಿಸಿಕೊಳ್ಳಬೇಕು. ಹೀಗೇ ಏನೇನೋ ಅಂದುಕೊಳ್ತಾ ಮನೆಯೊಳಗೆ ನಿನ್ನ ಬೆಚ್ಚನೆಯ ನೆನಪುಗಳ ಜೊತೆ ಕುಳಿತಿದ್ದೀನಿ ಕಣೇ ಮುನ್ನಿ.

ಹೌದು ಮುನ್ನಿ, ಊರಿಗೆ ಹಬ್ಬಕ್ಕೆ ಹೋದವನು ಫೋನ್ ಮಾಡಿಲ್ಲ, ಮೆಸೇಜ್ ಮಾಡಿಲ್ಲ ಅಂತ ಮುನಿಸಿಕೋಬೇಡ್ವೇ? ಮಳೆ ನೋಡುತ್ತಾ ಬೆಚ್ಚಗೆ ಹಪ್ಪಳ ತಿಂದು ಕಾಲ ಕಳೆಯುತ್ತಿದ್ದಾನೆ ಅಂತ ಬೈಕೋಬೇಡ್ವೆ. ಇಲ್ಲ ಕಣೇ, ನಿನ್ ನೆನಪು, ನಿನ್ನ ಪ್ರೀತಿ, ಒಂದು ಬಿಂದು ಪ್ರೀತಿಯ ಹನಿ...ಎಲ್ಲವನ್ನೂ ಹೃದಯತುಂಬಾ ಹರಡಿಕೊಂಡು ಖುಷಿಪಡ್ತಾ ಇದ್ದೀನಿ ಕಣೇ. ಕನಸುಗಳಿಗೆ ಜೀವ ಕೊಟ್ಟು ಪೋಷಿಸ್ತಾ ಇದ್ದೀನಿ ಕಣೇ. ರಾತ್ರಿ ಒಬ್ಬನೇ ನಿದ್ದೆಗೆ ಜಾರಿದಾಗ ಕತ್ತಲೂ ಕವಿದ ನನ್ನ ಕೋಣೆಯಲ್ಲಿ ಪುಟ್ಟ ಹಣತೆ ಹಚ್ಚಿ ನಿನ್ನ ನೆನಪುಗಳನ್ನು ಗಟ್ಟಿಯಾಗಿ ತಬ್ಬಿಕೊಂಡು ನಿನ್ನ ಮಡಿಲ ನೆನಪಲ್ಲಿ ನಿದ್ದೆಹೋಗುತ್ತಿದ್ದೇನೆ ಮುನ್ನಿ.

ಮುನ್ನಿ,

ಇನ್ನೆರಡು ದಿನ. ಮಳೆ ನಿಲ್ಲಲ್ಲಿ. ಊರೆಲ್ಲ ಪ್ರವಾಹ ಬಂದುಬಿಟ್ಟಿದೆ. ತಕ್ಷಣ ನಿನ್ನ ಹತ್ತಿರ ಬಂದುಬಿಡ್ತೀನಿ ಕಣೇ. ಪ್ಲೀಸ್ ಮುನಿಸಿಕೋಬೇಡ್ವೇ ಮಳೇ ಥರ...! ಪ್ರಾಮೀಸ್ ಮಾಡು..ಖುಷಿಯಾಗಿರ್ತಿ ಅಲ್ವಾ?


ನಿನ್ನವನೇ

ಮುನ್ನಾ...Continue

ಬದುಕಿಗೆ ಪರಿಧಿ ಹಾಕೋಳ್ತಾ ಇದ್ದೀವಿ ಅನಿಸ್ತಾ ಇದೆ...

ಹಂಚಿ ಉಂಡರೆ ಹಸಿವಿಲ್ಲ...!! ಹತ್ತನೇ ತರಗತಿಯಲ್ಲಿ ನಾನು ಓದುತ್ತಿದ್ದಾಗ ಬಾಗೇವಾಡಿ ಅನ್ನೋ ಹೆಸರಿನ ಮೇಷ್ಟ್ರು ಇದ್ದರು. ತುಂಬಾ ಒಳ್ಳೆಯ ಮೇಷ್ಟ್ರು.ಮೂರು ವರ್ಷ ನಮ್ಮ ಜೊತೆಗಿದ್ದ ಆ ಮೇಷ್ಟ್ರು ಆಗಾಗ ಹೇಳುತ್ತಿದ್ದ ಮಾತು ಹಂಚಿ ಉಂಡರೆ ಹಸಿವಿಲ್ಲ. ಈಗಲೂ ಆ ಮಾತು ಆಗಾಗ ನೆನಪಾಗುತ್ತಿದೆ. ಮಾಮೂಲಿ ನಮ್ಮನೆಯಲ್ಲಿ ನಾನು-ತಮ್ಮ ಇಬ್ಬರೇ ಇರ್ತೀವಿ. ಆಗ ಒಂದು ಥರ ಬೋರ್. ನನಗೆ ರಜೆ ಇದ್ದ ದಿನ ಅವನಿಗರಲ್ಲ, ಅವನಿಗೆ ರಜೆ ಇದ್ದ ದಿನ ನಂಗೆ ರಜೆ ಇರೊಲ್ಲ. ಅದಕ್ಕೆ ಅವನಿಗೆ ರಜೆ ಇದ್ದ ನಾನು ಆಫೀಸ್ ನಿಂದ ಬೇಗ ಹೊರಡೋದು, ನಂಗೆ ರಜೆ ಇದ್ದ ದಿನ ಅವನು ಆಫೀಸ್ ನಿಂದ ಬೇಗ ಹೊರಟುಬರೋದು. ನಮಗೆ ರಜೆ ಇದ್ದ ದಿನ ಮಾವ, ಅಣ್ಣ ಬೇಗನೆ ಮನೆಮುಂದೆ ಹಾಜರಾಗೋದು. ಏನಾದ್ರೂ ಸ್ಪೆಷಲ್ ಅಡುಗೆ ಮಾಡೋದು, ದೇವಸ್ಥಾನಕ್ಕೆ ಹೋಗೋದು...ಅದೊಂದು ಥರಾ ನಮಗೆ ತುಂಬಾ ಖುಷಿಕೊಡೋದು. ನಂಗೆ ಎಲ್ಲಕ್ಕಿಂತ ಖುಷಿಕೊಡೋದು ಎಲ್ಲರೂ ಜೊತೆಗೆ ಊಟ ಮಾಡೋದು. ನಾವೇನದ್ರೂ ಮಾಡಿದ್ರೆ ಪಕ್ಕದ್ಮನೆ ಅಡುಗೆ ತಜ್ಞೆ ಆಂಟಿ ಅಲ್ಲಿ ಹಾಜರಾಗಿ..ನಾವು ಮಾಡೋ ಡಬ್ಬ ಅಡುಗೇನ ಇನ್ನಷ್ಟು ರುಚಿಯಾಗಿಸ್ತಾರೆ. ಆಮೇಲೆ ಅವರ ಮನೆ ಸಾರು ನಮ್ಮನೆಗೆ, ನಮ್ಮನೆ ಸಾರು ಅವರ ಮನೆಗೆ ಹೋಗುತ್ತೆ. ಒಟ್ಟಿನಲ್ಲಿ ಮನೆತುಂಬಾ ಜನರು ಓಡಾಡ್ತಾ ಇದ್ರೆ ಸಕತ್ ಖುಷಿ ಆಗೋದು.

ಪಕ್ಕದ್ಮನೆ ತಾತನೂ ಚಿತ್ರಾನಿಗೆ ಸಾರು ಕೊಟ್ಟೆಯೇನು? ಅಂತ ರಾತ್ರಿ ಮಲಗೋಕೆ ಮುಂಚೆ ಮೊಮ್ಮಕ್ಕಳನ್ನು ಗದರಿಸಿ ಅವರ ಕೈಯಲ್ಲಿ ಕೊಟ್ಟು ಕಳಿಸ್ತಾರೆ. ಸ್ವಲ್ಪನೇ ಆಗಲೀ ಮತ್ತೊಬ್ಬರಿಗೆ ಕೊಟ್ಟು ತಿನ್ನೋದ್ರಲ್ಲಿ ತುಂಬಾ ಖುಷಿ ಇರುತ್ತೆ ಅಲ್ವಾ? ಊರಲ್ಲಿ ಆದ್ರೆ ಮನೆಗೆ ಯಾರಾದ್ರೂ ನೆಂಟರು ಬರ್ತಾರೆ, ಖುಷಿ-ಖುಷಿಯಾಗಿ ಸಂಭ್ರಮಿಸೋ ಅವಕಾಶಗಳಿರ್ತವೆ. ಆದರೆ, ಬೆಂಗಳೂರಿನಲ್ಲಿದ್ರೆ ನೆಂಟರಿಲ್ಲ, ತುಂಬಾ ಆಪ್ತರಿಲ್ಲ, ಆಪ್ತರಿದ್ರೂ ಅವರಿಗೆ ಅವರದೇ ಆಗ ಕೆಲಸಗಳಿರ್ತವೆ. ನಮ್ಮನೆಯಲ್ಲಿ ಬಂದು ಅವರಿಗೆ ಹರಟೆ ಹೊಡೆಯೋಕೆ ಸಮಯವೆಲ್ಲಿ ಇರುತ್ತೆ?

ಒಂದು ಕಾಲದಲ್ಲಿ ಎಲ್ಲರೂ ಜೊತೆಯಾಗೇ ಬಾಳೋ ಅವಿಭಕ್ತ ಕುಟುಂಬ ಪರಂಪರೆ ಇತ್ತು. ಕುಟುಂಬದ ಹತ್ತು-ಹದಿನೈದು ಮಂದಿ ಜೊತೆಗೆ ಬಾಳೋ ಸುಂದರ ಕುಟುಂಬ. ನನ್ನ ಗೆಳತಿ ಯೊಬ್ಬಳು ಗೌರಿ ಅಂತ ಬಳ್ಳಾರಿಯವಳು, ಅವರ ಮನೆಯಲ್ಲಿ ಈಗಲೂ 32 ಮಂದಿ ಇದ್ದಾರೆ. ಇನ್ನೂ ಆ ಕುಟುಂಬದಲ್ಲಿ ಜಮೀನಿಗೆ ಕಿರಿಕಿರಿ ಇಲ್ಲ. ತಾತ-ಮುತ್ತಾತರ ಕಾಲದಿಂದಲೂ ಆಸ್ತಿ ಪಾಲಾಗಿಲ್ಲ. ದೊಡ್ಡ ಮನೆಯಲ್ಲಿ ಮನೆ ತುಂಬಾ ಓಡಾಡುವ ಮಕ್ಕಳು, ಅಜ್ಜಿ, ತಾತಂದಿರು, ಹೆಂಗಳೆಯರು. ದಿನಾ ಮನೆಯೇ ಹಬ್ಬದಂತಿರುತ್ತೆ. ಇಂಥ ಕುಟುಂಬಗಳು ಹಳ್ಳಿ ಕಡೆ ಇದ್ರೂ ಕ್ರಮೇಣ ಮರೆಯಾಗುತ್ತವೆ. ಆರತಿಗೊಂದು ಕೀರುತಿಗೊಂದು ಮಗು. ಅವರಿಗೆ ಮದುವೆಯಾಗೋ ಸಮಯದಲ್ಲಿ ಆಸ್ತಿಯನ್ನು ಪಾಲು ಮಾಡಿ ಕೊಟ್ಟುಬಿಡುತ್ತಾರೆ. ಅದರ ಜೊತೆ ಅವರ ಮನಸ್ಸು ಕೂಡ ಇಬ್ಭಾಗ ಆಗಿ ಬಿಡುತ್ತೆ.

ನಂಗನಿಸೋದು ಅಂಥ ಸುಂದರ ಕುಟುಂಬ ಇರಬೇಕಿತ್ತು ಅಂತ. ಈ ಆಧುನಿಕತೆ, ವೇಗದ ಬದುಕು, ಒಂಜಾಟದ ನಡುವೆ ನಮ್ಮ ಆ ಸುಂದರ ಬದುಕಿನ ಕಲ್ಪನೆ ಮರೆಯಾಗುತ್ತಿದೆಯಲ್ಲಾ ಎಂದನಿಸುತ್ತೆ. ಅತ್ತೆ, ಮಾವ ಜೊತೆಗಿರುವ ಬದಲು ತಾನು ತನ್ನ ಗಂಡ ಮಾತ್ರ ಆರಾಮವಾಗಿ ಇದ್ದುಬಿಡಬೇಕು ಅನ್ನೋ ಸೊಸೆ, ಅಮ್ಮ-ಅಪ್ಪನಿಗೆ ವಯಸ್ಸಾದ ಹಾಗೇ ವೃದ್ಧಾಶ್ರಮದ ಬೇಲಿಯೊಳಗೆ ಅವರ ಕನಸನ್ನೇ ಕೊಲ್ಲುವ ಮಗ ಅಥವಾ ಮಗಳು,...ಥತ್! ಹೀಗೇ ಆಗಬಾರದಿತ್ತು ಅನಿಸುತ್ತೆ. ಜೊತೆಯಾಗಿ ಕಲೆದು, ಜೊತೆಯಾಗಿ ಖುಷಿಪಟ್ಟು, ಜೊತೆಯಾಗಿ ಬದುಕು ನಡೆಸುವ ಆ ಸುಂದರ ಜೀವನ ಯಾಕೆ ಮರೆಯಾಗುತ್ತಿದೆ? ಅಲ್ವಾ?

ಹಂಚಿ ಉಂಡರೆ ಹಸಿವಿಲ್ಲ ಅಂದ ಹುಡುಗಿ ಏನೋನೋ ಬರೀತಾ ಹೋದ್ಳು ಅನಿಸಿಬಿಡ್ತಾ? ಹೌದು, ಒಮ್ಮೊಮ್ಮೆ ಹೀಗೇ ಈ ಯೋಚನೆಗಳು...ಆಫಿಸ್ನಲ್ಲಿ ಕೂತಿರ್ತೀನಿ..ಹಂಗೆ ನೆಟ್ಟಗೆ ಮನೆಯ ಅಡುಗೆ ಮನೆಗೆ ಹೋಗಿ ಬರ್ತೀನಿ. .ಲಂಗು ಲಗಾಮಿಲ್ಲದ ಕುದುರೆಯಂತೆ ಯೋಚನೆಗಳು ಅಲ್ವಾ?

ಯಾಕೋ ಬದುಕಿಗೆ ಒಂದು ಪರಿಧಿ ಹಾಕ್ಕೊಂಡು ಮನುಷ್ಯ ಜೀವಿಸ್ತಾ ಇದ್ದಾನೆ ಅನಿಸ್ತಾ ಇದೆ..ಬದುಕು ಹರಿದು ಹಂಚಿ ಹೋಗುತ್ತಿದೆಯೇ ಎಂದನಿಸ್ತಾ ಇದೆ...
 

Photos

Loading…

Blog Posts

parasuram

ಜೀವಂತ ಪರಂಪರೆಯ ಹಂಪಿಗೆ ಮೈ ತುಂಬಾ ಕಥನಗಳು

ಹಂಪಿ ಎಂದೊಡನೆ ಪೇರಿಸಿಟ್ಟಂತೆ ಕಾಣುವ ಕಲ್ಲುಬಂಡೆಗಳ ಬೆಟ್ಟಗಳು, ಜುಳು ಜುಳು ಹರಿಯುವ ತುಂಗಾಭದ್ರೆ, ಎಲ್ಲಿ ನೋಡಿದರಲ್ಲಿ ಕಾಣುವ ಮಂಟಪಗಳು, ಹಾಳು ಬಿದ್ದ ದೇವಸ್ಥಾನಗಳು, ವಿರೂಪಾಕ್ಷ ಗೋಪುರ, ಕಮಲ್ ಮಹಲ್, ಬಡವಿಲಿಂಗ, ಉಗ್ರ ನರಸಿಂಹ, ಕಲ್ಲಿನ ತೇರು ಹೀಗೆ ಅನೇಕ ಸ್ಮಾರಕಗಳೇ ಕಣ್ಣು ಮುಂದೆ ಬರುತ್ತಿವೆ. ಜೊತೆಗೆ ಮೂಗು, ಮುಖ ಕೆತ್ತಿಸಿಕೊಂಡು ಊನವಾಗಿರುವ ಅಸಂಖ್ಯಾತ ವಿಗ್ರಹಗಳು ಎಲ್ಲಿ ಬೇಕಾದಲ್ಲಿ ಕಾಣಿಸಿಕೊಂಡು ಇಡೀ ಹಂಪಿಯೇ ಒಂದು ಮಹಾಭಾರತದ ಯುದ್ಧಭೂಮಿಯಂತೆ ಕಾಣಿಸುತ್ತದೆ.
ಮೂರ್ತರೂಪದಲ್ಲಿ ನಮ್ಮ ಕಣ್ಣು ಮುಂದೆ ಹಂಪಿ ತನ್ನದೇ ಆದ ಕಥೆಯನ್ನು ನಮಗೆ ಹೇಳಲು ಪ್ರಯತ್ನಿಸುತ್ತದೆ.
ಹಂಪಿಯ ಅಮೂರ್ತತೆಯನ್ನು ಕಣ್ಣಿಗೆ ಕಾಣಲ… Continue

Posted by parasuram on August 6, 2009 at 7:01am

BELLARY

HAMPI UTSAV

Pampa AADI KAVI of Kannada literature has thus portrayed Karnataka and it is the homeland to art, culture, literature, dance and drama from the time immemorial. It is here that the culture of Kannada has blossomed and spread allover. Art, culture and literary festivals have become an integral part of life of its people. Starting from the time of Kadambas the very first and independent Kannada dynasty until the rule of Wodeyars of Mysore and then on under the auspice of the Government these festi… Continue

Posted by BELLARY on July 12, 2009 at 6:40am

BELLARY

About Bellary

About Bellary

Bellary district takes its name from the word Balari which refers to goddess Durugamma as this goddess had manifested herself in the town. Some of the events in the great epic Ramayana are related to this historical place. It is said that Rama while searching for Sita met Sugreeva and Hanuman at a place which is very near to Hampi, the celebrated capital of Vijayanagara kingdom. The history speaks volumes about significant role it acquired during Satavahanas, Kadambas, Chalukyas o… Continue

Posted by BELLARY on July 12, 2009 at 6:37am

BELLARY

Sandur - Places of Interest

Sandur - Places of Interest
(a) Bommagatta:

This village is situated at a distance of 48 kms from Sandur town.It is famous because of an old temple of Hulikuntaraya (Anjeneyaswamy).

(b) Daroji Tank:

This tank built by Tipu at Daroji village whicj is 48 kms from Sandur town.This tank is said to be one of the biggest tanks in the district.When this tank breached in 1851,the old village of Daroji destroyed under its impact.Susequently a new village was built (new Daroji).

(c) Donimalai Hill Ran… Continue

Posted by BELLARY on July 12, 2009 at 6:35am

BELLARY

Welcome to Daroji Sloth Bear Sanctuary.

Welcome to Daroji Sloth Bear Sanctuary. Locally known as KARADI, the Sloth Bear (Melursus Ursinus) lives in open scrub forests having outcrop of rocks, tumbled boulders and caves as shelter. Being more of vegetarian, it has choice food habits like consuming fruits, tubers, honey, insects and termites. But if it happens to live near human settlements, will not hesitate to add sugarcane and maize crops to its regular diet. It has a fond taste for Ber fruits and Mahuva (Madhuka latifolia) flowers.… Continue

Posted by BELLARY on July 12, 2009 at 6:34am

RSS

ekaviNadeduBandaDaari

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI    ಈಕವಿ ನೆಡೆದು ಬಂದ ಹಾದಿ ಆತ್ಮೀಯ ಕನ್ನಡಿಗರೆ, ಕರ್ನಾಟಕ ಮತ್ತು ಕನ್ನಡದ ಇಂದಿನ ದುಃಸ್ಥಿತಿಯ ಅರಿವು ತಮಗೆ ಇದ್ದೇ ಇದೆ. ಅನ್ಯ ರಾಜ್ಯಗಳ ಜನಗಳು ವಲಸೆ ಬಂದು ಇಲ್ಲಿ ತಮ್ಮದೇ ಭಾಷೆ [...]

PRESS RELEASE of ekavi of Inaguration October 4th 2003

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ  ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI   For your information: Press Release FOR IMMEDIATE RELEASE IRVINE, CALIFORNIA, USA – Kannadigas are extremely happy and proud that celebrated famous author and dramatist, Former [...]

EKAVI is a Total Kannada Organization

EKAVI is a Total Kannada Organization   EKAVI NETWORK  of KANNADIGAS all over the world ಎಲ್ಲಾದರು ಇರು ಎಂತಾದರು ಇರು ಎಂದೆಂದಿಗು ನೀ ಕನ್ನಡವಾಗಿರು ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ…   Make your friends to join EKAVI for KANNADA cause. Become a Committee person to handle issues. Take your friends to the EKAVI meeting. EKAVI is an International Kannada Vedike [...]

ekavi Meeting and Directions

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI     ಈಕವಿ ಸಭೆ, ಬೆಂಗಳೂರು ನಲ್ಲಿ , ರವಿವಾರ , ಅಕ್ಟೋಬರ್ ೪ ೨೦೦೯ , ೪ ಗಂಟೆಗೆ ಇದೆ.   ಸಭೆ ನಡೆಯುವ ವಿಳಾಸ: 12, ಸುಮೇರು, ಸರ್ ಎಂ. ಏನ್. ಕೃಷ್ಣರಾವ್ ರಸ್ತೆ. ಬಸವನಗುಡಿ, ಬೆಂಗಳೂರು 560004. __________________   EKAVI [...]

NIMMA JILLEGE ekavi jothe serikondu SAHAYA maadi

ಈಕವಿ ಸಂಸ್ಥೆ ಯು ಇದುವರೆಗೂ ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ೨೦೦೩ ರರಿಂದ ಇಂದಿನವರೆಗೂ ಕನ್ನಡಕ್ಕಾಗಿ ಸೇವೆ , ಕನ್ನಡಿಗರಿಗೆ ಸಹಾಯ, ಮಾಡುತ್ತಾ ಬಂದಿದೆ. ಆದ್ದರಿಂದ ಆಸಕ್ತಿ ಇರುವ ವಿದ್ಯಾವಂತ ಯುವಕ ಯುವತಿಯರಿಗೆ ತಮ್ಮ  ತಮ್ಮ ಜಿಲ್ಲೆ, ತಾಲ್ಲೂಕು, ಹಳ್ಳಿ, ಹೋಬಳಿಗಳಿಗೆ ಏನಾದರು ಸೇವೆ ಸಲ್ಲಿಸುವ ಆಸಕ್ತಿ ಇರುವವರನ್ನು ಪ್ರೋತ್ಸಾಹಿಸಲು ಈ-ಕವಿ ವೇದಿಕೆಯು ಸಜ್ಜಿಸಲಾಗಿದೆ.   ಬೆಂಗಳೂರಿನಲ್ಲಿ, ಹೊರರಾಜ್ಯದಲ್ಲಿ ಮತ್ತು ಹೊರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರಿಗೆ ತಮ್ಮ ತಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿಗಳ ಬಗ್ಗೆ ಚಿಂತಿಸಿ, ತನ್ನನ್ನು ಬೆಳೆಸಿದ ಊರಿಗೆ ಸಹಾ [...]

RSS

ಆತ್ಮೀಯರೇ,
ಸಂವಹನ ಮಾಧ್ಯಮವಾಗಿ, ಶಾಸ್ತ್ರೀಯ ಪರಿಭಾಷೆಯಾಗಿ ಹಸ್ತಮುದ್ರೆಗಳ ಪಾತ್ರ ಹಿರಿದಿದ್ದರೂ, ಇವುಗಳ ಕುರಿತಂತೆ ನಡೆದ ಅಧ್ಯಯನಗಳು ಬಹಳ ವಿರಳ. ಅದರಲ್ಲೂ ಸಂಹವನ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಕುರಿತಂತೆ ಆಳವಾದ ಪರಿಶೋಧನೆಗಳು ಜರುಗಿಲ್ಲ. ಸಾಮಾನ್ಯವಾಗಿ ಈ ಮುದ್ರೆಗಳನ್ನು ಸೌಂದರ್ಯ ಸೂಚಕಗಳಾಗಿ ಪರಿಗಣಿಸುತ್ತಾರೆಯೇ ವಿನಃ, ಸಾಮಾಜಿಕ ಅಥವಾ ಸಂವಹನದ ದೃಷ್ಟಿಯಲ್ಲಿ ಚಿಂತಿಸಲ್ಪಡುವುದಿಲ್ಲ. ಹಸ್ತವಿನ್ಯಾಸಗಳ ಬಗೆಗೆ ವಿವರಣೆಯಿರುವ ಪುಸ್ತಕಗಳಿವೆಯೇ ಹೊರತು ಸಂಶೋಧನಾತ್ಮಕ ಅಧ್ಯಯನಗಳು ನಡೆದಿಲ್ಲ. ಹಾಗಾಗಿ ಒಂದು ನೆಲೆಗಟ್ಟಿನಿಂದ ನೋಡಿದಾಗ `ಸಂವಹನ ಮಾಧ್ಯಮವಾಗಿ ಹಸ್ತಮುದ್ರೆಗಳು' ಎಂಬ ವಿಷಯ ಸಂಶೋಧಕರ ಗಮನ ಸೆಳೆದಿಲ್ಲವೆಂದೇ ಹೇಳಬೇಕು. (ಈ ನಿಟ್ಟಿನಲ್ಲಿ ಪತ್ರಿಕೆಯೂ 'ಹಸ್ತಮಯೂರಿ' ಯ ಮೂಲಕ ಗಮನಾರ್ಹ ರೀತಿಯಿಂದ ಪ್ರಯತ್ನ ಮಾಡುತ್ತಿರುವುದು ನಿಮಗೆ ತಿಳಿದ ವಿಷಯವೇ !) ಆದ್ದರಿಂದ ಹಸ್ತ ಮುದ್ರೆಗಳ ಭಾವ, ಉಪಯೋಗ, ಸಂವಹನದ ಸಾಧ್ಯತೆಗಳನ್ನು ಗಮನದಲ್ಲಿರಿಸಿ ಅವುಗಳ ಬಗೆಗೆ ವಿಸ್ತೃತ ಅಧ್ಯಯನ ಮಾಡಿದ ಫಲ ;
ಇದೇ ಬರುವ ನವೆಂಬರ್ ೨೨ ಆದಿತ್ಯವಾರದಂದು, ಸಂಜೆ ೪ ಗಂಟೆಗೆ ಧರ್ಮಸ್ಥಳದ ಬಳಿ ಇರುವ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನ ರಾಮಕೃಷ್ಣ ಸಭಾ ಮಂಟಪದಲ್ಲಿ, ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ಪ್ರಕಾಶನದೊಂದಿಗೆ ಯಕ್ಷಸಪ್ತಾಹದ ಜೊತೆಗೆ ಭವ್ಯವೇದಿಕೆಯಲ್ಲಿ ಲೋಕಾರ್ಪಣಗೊಳ್ಳುತ್ತಿದೆ.

ಅಧ್ಯಕ್ಷತೆ : ಶ್ರೀ ಟಿ. ಶಾಮ ಭಟ್, ಭಾ.ಸೇ.ಆ,
ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಕೆ.ಐ.ಡಿ.ಬಿ., ಕರ್ನಾಟಕ
ಗ್ರಂಥ ಲೋಕಾರ್ಪಣೆ : ಡಾ. ಡಿ. ಬಿ. ಯಶೋವರ್ಮ, ಕಾರ್ಯದರ್ಶಿಗಳು, ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು
ಗ್ರಂಥ ಪರಿಚಯ : ಡಾ. ಎಂ. ಪ್ರಭಾಕರ ಜೋಷಿ, ಬಹುಶ್ರುತ ವಿದ್ವಾಂಸರು
ಮುಖ್ಯ ಅಭ್ಯಾಗತ : ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು, ಪೂರ್ವಾಧ್ಯಕ್ಷರು, ಕ.ಸಾ.ಪ, ಬೆಂಗಳೂರು.

ತಮ್ಮೆಲ್ಲರ ಉಪಸ್ಥಿತಿಯೇ ನಮಗೆ ದೊಡ್ಡ ಸಂತೋಷ ಮತ್ತು ಹೆಮ್ಮೆ.

ಪ್ರೀತಿಯಿಂದ,
-ಮನೋರಮಾ ಬಿ.ಎನ್ ಮತ್ತು ನೂಪರ ಭ್ರಮರಿ ಬಳಗ
ಮೊಬೈಲ್ : +೯೧ ೯೯೬೪೧೪೦೯೨೭

---------------------- ******************
ಪುಸ್ತಕದಲ್ಲಿ ನಿರೂಪಿತವಾದ ಅಂಶಗಳೆಡೆಗೆ ಒಂದು ಕ್ಷ-ಕಿರಣ
  • ಸಂಶೋಧನಾ ಅಧ್ಯಯನ ; ಸುಮಾರು ೪೦೦ ಪುಟಗಳ ಗ್ರಂಥ.
  • ಭರತನಾಟ್ಯದಲ್ಲಿ ಉಪಯೋಗಿಸಲಾಗುತ್ತಿರುವ ಹಸ್ತಗಳನ್ನು ಪ್ರಧಾನವಾಗಿರಿಸಿಕೊಂಡು ಇತರೆ ಮರೆಯಾಗಿರುವ ಹಸ್ತಗಳ ಕುರಿತ ಅವಲೋಕನ ಮತ್ತು ಅವುಗಳ ಸಂವಹನ ಪ್ರಕ್ರಿಯೆ ಎಷ್ಟರ ಪಟ್ಟಿಗೆ ಮಹತ್ವಪೂರ್ಣವಾಗಿದೆ ಎಂಬುದು ಸಂಶೋಧನೆಯ ಮೂಲ ಉದ್ದೇಶ. ಜೊತೆಗೆ ಇತರೆ ನೃತ್ಯಪದ್ಧತಿ (ಉದಾ: ಕಥಕ್ಕಳಿ, ಮಣಿಪುರಿ, ಒಡಿಸ್ಸಿ, ಯಕ್ಷಗಾನ)ಗಳಲ್ಲಿ ಬಳಕೆಯಾಗುತ್ತಿರುವ ಹಸ್ತಗಳು ಮತ್ತು ಅವುಗಳಲ್ಲಿ ಎಷ್ಟು ನಾವು ದಿನನಿತ್ಯದ ಜೀವನದಲ್ಲಿ ಬಳಸಿಕೊಳ್ಳುತ್ತೇವೆ ಎಂಬ ಅವಲೋಕನ. ಮತ್ತು ಅವುಗಳಲ್ಲಿನ ಸಮಾನ ಮತ್ತು ವ್ಯತ್ಯಾಸ ಅಂಶಗಳೆಡೆಗೆ ದೃಷ್ಟಿ.
  • ಅಭಿನಯದರ್ಪಣದ ಅಂಶಗಳನ್ನೇ ಪ್ರಧಾನವಾಗಿ ಬಳಸಿಕೊಂಡು ಅಧ್ಯಯನ ನಡೆದರೂ ಉಳಿದಂತೆ ನಾಟ್ಯಶಾಸ್ತ್ರ, ಹಸ್ತ ಮುಕ್ತಾವಳಿ, ಹಸ್ತ ಲಕ್ಷಣ ದೀಪಿಕಾ, ಭರತಸಾರ, ಭರತಕಲ್ಪಲತಾ ಮಂಜರಿ, ಸಾರಸಂಗ್ರಹ, ಲಾಸ್ಯರಂಜನ, ಸಂಗೀತ ರತ್ನಾಕರ, ನರ್ತನನಿರ್ಣಯ, ಬಾಲರಾಮ ಭರತ, ಪುರಾಣಗಳು, ಸಂಹಿತೆಗಳು, ಪ್ರಣೀತಗಳು, - ಹೀಗೆ ಹಲವಾರು ಗ್ರಂಥಗಳಲ್ಲಿ ಪ್ರಸ್ತಾಪಿಸಿದ ಹಸ್ತಗಳು, ಅವುಗಳ ವಿನಿಯೋಗ, ಮಹತ್ವ, ಪ್ರಚಲಿತದಲ್ಲಿ ಉಪಯೋಗವಾಗುತ್ತಿರುವ ಹಸ್ತಗಳು, ಅವುಗಳ ಮೂಲ, ಧಾರ್ಮಿಕ, ಸಾಮಾಜಿಕ, ರಾಜಕೀಯ, ಗ್ರಾಂಥಿಕ ಹಿನ್ನಲೆಗಳು.
  • ಹಸ್ತ ಮುದ್ರೆಗಳು ಮುದ್ರಾವಿಜ್ಞಾನದಲ್ಲಿ, ಹಠಯೋಗ ಪ್ರದೀಪಿಕಾ ಮುಂತಾಗಿ ಯೋಗಶಾಸ್ತ್ರದಲ್ಲಿ, ಮುದ್ರಾ ಶಾಸ್ತ್ರ, ಧಾರ್ಮಿಕ ಪೂಜಾ ವಿಧಿ, ಪ್ರತಿಮಾಶಾಸ್ತ್ರ, ತಂತ್ರ-ಮಂತ್ರ-ಹಸ್ತಸಾಮುದ್ರಿಕಾಗಳಲಿ ಹೇಗೆ ಬಳಕೆಯಾಗುತ್ತಿವೆ ಮತ್ತು ಅವುಗಳ ಉಪಯೋಗ. ಮುಖ್ಯವಾಗಿ ಮುದ್ರೆಗಳ ಬಳಕೆಯಿಂದಾಗುವ ಆರೋಗ್ಯಕರ ಆಯಾಮಗಳ ತುಲನೆ.
  • ಅಧ್ಯಯನಕ್ಕೆ ಅವಶ್ಯವಿರುವ ಇತಿಹಾಸ, ಗುಣಾತ್ಮಕ ಪರಿಶೀಲನೆ, ವಿದ್ವಾಂಸರಿಂದ ಆಳ ಸಚಿದರ್ಶನ, ಪ್ರದರ್ಶನಗಳ ಸಮೀಕ್ಷೆ, ಗ್ರಂಥ ಅಧ್ಯಯನ.
-ತಮ್ಮ ಪ್ರತಿಗಳನ್ನು ಕಾಯ್ದಿರಿಸಿ-

ಮಾಧ್ಯಮಗಳು ಮಾರಾಟಕ್ಕಿವೆ !
ರಿಯಾಲಿಟಿ ಶೋವಿನ Cruel Reality !


ರಾಮಾ-ಕೃಷ್ಣಾ ಅಂತ ಟಿವಿ ಮುಂದೆ ಕೈಮುಗಿದು ಕುಳಿತಿದ್ದ ಜಮಾನಾ ಚಾವಡಿಯಿಂದೆದ್ದು ಹೋಗಿ ವರ್ಷಾನುಗಟ್ಟಲೆ ಮನೆಯ ಹೆಂಗಸರು ದೇಶದ ತುಂಬೆಲ್ಲಾ ಅತ್ತೆ, ಸೊಸೆಯ ಸರಿ- ತಪ್ಪುಗಳನ್ನ ಮಾತಾಡಿಕೊಳ್ಳುತ್ತಾ, ಮೂಗೊರೆಸಿ ಅತ್ತುಕೊಂಡು ಕುಳಿತಿರುವಾಗಲೆ ಅದೆಲ್ಲೋ ಮೂಲೆಯಲ್ಲಿ ಮುಸಿಮುಸಿ ಅಳುತ್ತಿದ್ದ ಅಮಿತಾಬ್ ಬಚ್ಚನ್ ' ಲಾಕ್ ಕರ್ ದಿಯಾ ಜಾಯ್' ಅಂದಿದ್ದೇ ತಡ ಎಲ್ಲರೂ 'ಲಾಕ್' ಆಗಿದ್ದಂತೂ ಹೌದು ! ಹಾಗೆ ನೋಡಿದರೆ, 'ಕ್ಯೋಂ ಕಿ ಸಾಸ್ ಬಿ ಕಭೀ ಬಹೂ ಥೀ' ಅಂತ ಏಕ್ತಾ ಕಪೂರ್‌ನಂತವರು ಗಂಟೆಗೊಂದಾವರ್ತಿ ಕುಯ್ಯುವಾಗ ; ವನವಾಸ ೧೪ ವರ್ಷ, ಆದರೆ 'ರೀಲ್' ಬಿಡುವ ಸೀರಿಯಲ್‌ಗೆ ಅದರ ದುಪ್ಪಟ್ಟು ವರುಷ (ಹಾವಿನ ದ್ವೇಷ, ಹನ್ನೆರಡು ವರುಷ- ಎಲ್ಲಾ ಔಟ್‌ಡೇಟೆಡ್) ಅಂತೆಲ್ಲಾ ಮಾತಾಡಿಕೊಂಡಿರುವಾಗಲೇ ವಿ ಟಿವಿಯಲ್ಲಿ ಮೇಕಿಂಗ್ ಆಫ್ ದಿ ಬ್ಯಾಂಡ್ ಎಂಬ ರಿಯಾಲಿಟಿ ಷೋ ಮೆಲ್ಲನೆ ಪಡಸಾಲೆಗೆ ಬಂದು ಕುಳಿತಾಗಿತ್ತು. ಯಾವಾಗ ಟಿ ಆರ್ ಪಿ ಏರಿಸುವ ಸೂತ್ರಗಳ ಪೈಕಿ ಇದಕ್ಕೇ ಫಸ್ಟ್ ಪ್ರೈಜ್ ಅಂತ ಗೊತ್ತಾಯಿತೋ, ಪರಮಾತ್ಮ ಎಲ್ಲೆಲ್ಲೂ ಇದ್ದಾನೆ ಎನ್ನುವ ದಾಸ-ಸೂಫಿಗಳ ಮಾತಿನಂತೆ ಚಾನಲ್ ಚಾನಲ್ ಗೂ ರಿಯಾಲಿಟಿ ಶೋ ಸಂಸ್ಥೆಗಳು ಹುಟ್ಟಿಕೊಂದವು! ಬೇರೆ ದೇಶದವರ ಕಾಪಿ ಹೊಡೆದೂ ತೆಗೊಳ್ಳೋದು ಹೇಗೆ ಅನ್ನೋದಕ್ಕೂ ರಿಯಾಲಿಟಿ ಶೋ ಕಾನ್ಸೆಪ್ಟ್ ಮಾದರಿ ಆಯಿತು !
ಮೊದಲೆಲ್ಲಾ ರಿಯಾಲಿಟಿ ಷೋಗಳು ಪ್ರಾಮುಖ್ಯತೆ ಗಳಿಸಿಕೊಂಡಿದ್ದೇ ಸಮಾಜದ ವಾಸ್ತವಗಳನ್ನು ಕಿರುತೆರೆಯ ಮೇಲೆ ನಾಟಕೀಯವಾಗಿ ಅಥವಾ ಅಕರ್ಷಕವಾಗಿ ಪ್ರಸ್ತುತಪಡಿಸುವ ಮೂಲಕ ಜನತೆಗೆ ಸಂದೇಶವನ್ನು ತಲುಪಿಸುವುದಕ್ಕೆ ! ಅದರ ಪಾರದರ್ಶಕ ನಿಲುವಿನಿಂದಲೇ ಅದು ವ್ಯಾಪಕವಾದದ್ದು. ಹಾಗಾಗಿ ಕಥೆ ಆಧರಿತ ರಿಯಾಲಿಟಿ ಷೋಗಳ ಸಂಖ್ಯೆ ಜಾಸ್ತಿಯಿತ್ತು. ಅದೇ ಮಾದರಿಗೆ ಒಳಪಟ್ಟ ಗಾಯನ ನೃತ್ಯ ಕಾರ್ಯಕ್ರಮಗಳು ಸುಪ್ತ ಪ್ರತಿಭೆಗಳನ್ನು ಹೊರಸೂಸುವಲ್ಲಿ ಒಂದು ಪ್ರಯತ್ನ ಎಂದೂ ಭಾವಿಸಲಾಯಿತು. ಆದರೆ ಬರಬರುತ್ತಾ ರಾಯರ ಕುದುರೆ ಕತ್ತೆ ಎಂದು ಗೊತ್ತಾದದ್ದು ತೀರಾ ಇತ್ತೀಚೆಗೆ !


ರೆಹಮಾನ್ ಬರಲಿದ್ದಾರೆ ರಿಯಾಲಿಟಿ ಶೋನಲ್ಲಿ !
ದೇಶದ ಸಂಗೀತ ಪ್ರತಿಭೆಗಳನ್ನು ಹೆಕ್ಕಿ ತೆಗೆಯಲು ಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಕಂಕಣ ತೊಟ್ಟಿರುವಂತೆ ಕಾಣುತ್ತದೆ ! ಡಿಸೆಂಬರ್ ಮೊದಲ ವಾರದಿಂದ ಎ.ಆರ್.ರೆಹಮಾನ್ ರ ರಿಯಾಲಿಟಿ ಷೋ ಪ್ರಸಾರವಾಗಲಿದೆ. ಅದೂ ದೂರದರ್ಶನದಲ್ಲಿ ! ಖಾಸಗಿ ದೂರದರ್ಶನ ಚಾನೆಲ್ ರಿಯಾಲಿಟಿ ಷೋಗಳ ಭರಟೆಯಲ್ಲಿ ಸರಕಾರಿ ದೂರದರ್ಶನದಲ್ಲಿ ಪ್ರಸಾರ ಮಾಡಲಿರುವ ರೆಹಮಾನ್ ರಿಯಾಲಿಟಿ ಷೋ ಪ್ರೇಕ್ಷಕರಲ್ಲಿ ಬಹಳಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವುದಂತೂ ಸುಳ್ಳಲ್ಲ..

ದೂರದರ್ಶನದಲ್ಲಿ ಎ.ಆರ್.ರೆಹಮಾನ್ ನಿರ್ವಹಿಸುವ 'The Big Band' ಷೋಗಾಗಿ ಈಗಾಗಲೇ ಏಳು ದೇಶಗಳ ಬಹಳಷ್ಟು ವಾದ್ಯವೃಂದಗಳು ಆಯ್ಕೆಯಾಗಿವೆ. ವಿಶೇಷವೆಂದರೆ ಭಾರತದ ಸಂಗೀತ ಪ್ರತಿಭೆಗಳನ್ನು ಮಾತ್ರ ಈ ರಿಯಾಲಿಟಿ ಷೋಗಾಗಿ ಹೆಕ್ಕಿತೆಗೆದಿಲ್ಲ. ಭಾರತ ಉಪಖಂಡಕ್ಕೆ ಸೇರಿದ ನೇಪಾಳ, ಮಲೇಷ್ಯಾ, ಪಾಕಿಸ್ತಾನ, ಬಾಂಗ್ಲಾದೇಶ, ಸಿಂಗಪುರ ಮತ್ತ್ತು ಶ್ರೀಲಂಕಾದ ವಾದ್ಯವೃಂದಗಳು ಈಗಾಗಲೇ ಆಯ್ಕೆಯಾಗಿವೆ.
ಈ ರಿಯಾಲಿಟಿ ಷೋವನ್ನು ಪ್ರಸಿದ್ಧ ಮನರಂಜನೆ ಮತ್ತು ಸಂವಹನ ಸಂಸ್ಥೆ ಫಾತ್ ಫಿಶ್ ನಿರ್ಮಿಸುತ್ತಿದೆ. ಸಾಧಾರಣವಾಗಿ ಸಂಗೀತ ಆಧಾರಿತ ರಿಯಾಲಿಟಿ ಷೋಗಳಲ್ಲಿ ಏಕಮಾತ್ರ ಸ್ಪರ್ಧಿಗಳದ್ದೇ ಕಾರುಬಾರು. ಆದರೆ ಬಿಗ್ ಬ್ಯಾಂಡ್‌ನದ್ದು ಉತ್ತಮ ವಾದ್ಯವೃಂದಗಳ ನಡುವಿನ ಸ್ಪರ್ಧೆ. ಕಾರ್ಯಕ್ರಮದಲ್ಲಿ ಸ್ಪರ್ದಿಸುವ ವಾದ್ಯವೃಂದಗಳು ೨ ರಿಂದ ೧೦ ಸದಸ್ಯರನ್ನು ಹೊಂದಿದ್ದು, ಕನಿಷ್ಠ ಓರ್ವ ಪ್ರಧಾನ ಗಾಯಕರಿರುತ್ತಾರೆ. ಗೆದ್ದ ತಂಡ ಫಾತ್ ಫೇರ್ ರೆಕಾರ್ಡಿಂಗ್ ಸಂಸ್ಥೆಯೊಂದಿಗೆ ಮೂರು ವರ್ಷಗಳ ಕಾಲ ರೆಕಾರ್ಡಿಂಗ್ ಗುತ್ತಿಗೆ ಪಡೆಯುತ್ತದೆ. ಇದರಲ್ಲಿ ಮೂರು ಆಲ್ಬಂ ಹಾಗೂ ಆರು ಸಂಗೀತ ವಿಡಿಯೋಗಳನ್ನು ನಿರ್ವಹಿಸುವ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸ, ಸಂಗೀತ ಕಚೇರಿಗಳಲ್ಲಿ ಭಾಗವಹಿಸುವ ಅವಕಾಶಗಳನ್ನು ನೀಡಲಾಗುತ್ತದೆ. ಇದರ ಜೊತೆಗೆ ೧೦ ದಶಲಕ್ಷ ನಗದು ಬಹುಮಾನ ನೀಡಲಾಗುತ್ತದೆ.


ಅಬ್ಬಾ, ನಾವೇ ವಾಸಿ !
ಭಾರತದಲ್ಲಿ 'ಕರೋಡ್ ಪತಿ' ಹಿಟ್ ಆಗಿದ್ದು ನೆನಪಿದೆಯಷ್ಟೇ ! ಈಗ 'ರೋಡ್ ಪತಿ' ಸರದಿ. 'ಬಿಗ್ ಬ್ರದರ್ಸ್' ನ ಜನಕ ಎಂಡಮಲ್ ಇದರ ಸೂತ್ರಧಾರ. ಸಂಬಳ ಕೊಡೋದಿಕ್ಕೆ ಕಾಸಿಲ್ಲ ಅಂತ ಕಂಪೆನಿಗಳ ಮಾಲೀಕರು ಒದ್ದಾಡುವಾಗ ಅಮೆರಿಕಾದ ಫಾಕ್ಸ್ ಟಿವಿ ರೆಸೆಷನ್‌ನನ್ನೇ ಆಧಾರ ಮಾಡಿಕೊಂಡು ರಂಜನೆ, ದುಡ್ಡು, ಜನರ ಸಮಯ ಎಲ್ಲವನ್ನೂ ಬಾಚಿಕೊಳ್ಳಲು ಹೊರಟಿದೆ. ಹೇಗಿದ್ದರೂ ಹಣದ ಮುಗ್ಗಟ್ಟಿನ ಸಮಯ, ನೋಡಿ. ಉದ್ಯೋಗ ಕಡಿತ ಸಾಮಾನ್ಯವಾಗಿ ಹೋಗಿದೆ. ಅದೇ ಕಡಿತವನ್ನ ಜನರೇ ಕೊಂಡಾಡುವಂತೆ ತೋರಿಸಿದರೆ ಹ್ಯಾಗೆ, ಎಂದು ಕಂಡಿದ್ದೇ ತಡ ; ಕಂಪನಿಯಲ್ಲಿರೋ ನೌಕರರೆಲ್ಲಾ ಟಿ ವಿ ಪರದೆಯ ಮೇಲೆ ! 'ಯಾರನ್ನ ಮನೆಗೆ ಕಳಿಸಬೇಕು ಅಂತ ಜನರೇ ಡಿಸೈಡ್ ಮಾಡಲಿ' ಅನ್ನೋದೇ ಷೋ ಹೈಲೈಟ್ ! ಒಂದರ್ಥದಲ್ಲಿ ಕೇರ್ ಆಫ್ ಫುಟ್ ಪಾತ್ ಮಾಡಲಿಕ್ಕೂ ಸ್ಪರ್ಧಾ ಕಾರ್ಯಕ್ರಮ. (ಒಂದುವೇಳೆ ತಾವೆಣಿಸಿದವರೇ ಮನೆಗೆ ಹೋದರೆ ವೀಕ್ಷಕರಿಗೂ ತಾವಂದುಕೊಂಡಂತೆ ಆಗಿದೆ ಎಂಬ ತೃಪ್ತಿ ಎಂಬುದೇ ಅಂದಾಜು!) ಹಾಗಾಗಿ ಮನೆಗೋಗೋವ್ರು ಯಾರು? ಕೆಲಸ ಕಳೆದುಕೊಳ್ಳೋವ್ರ್ಯಾರು ಅನ್ನೋದೂ ಒಂಥರಾ ಎಕ್ಸೈಟಿಂಗ್ ! ಬೆಕ್ಕಿಗೆ ಆಟ, ಇಲಿಗೆ ಪ್ರಾಣ ಸಂಕಟ ಅಂತ ಇದನ್ನೇ ಹೇಳೋದಾ !
ಇಷ್ಟೇ ಅಲ್ಲ, 'ಚೀಟಿಂಗ್ ಸ್ಪೌಸಸ್ ಕಾಟ್ ಆನ್ ಟೇಪ್' ನಲ್ಲಿ ಗಂಡ ಹೆಂಡ್ತಿಯರು ಪರಸ್ಪರ ಹೇಗೆ ಮೋಸ ಮಾಡ್ತಾರೆ, ಬೇರೆಯವರ ಜೊತೆ ಯಾವ ಬೆಡ್ ರೂಂ ನಲ್ಲಿ ಇದ್ದರು ಎಂಬುದೊಂದು ರಿಯಾಲಿಟಿ ಷೋ ಅದರೆ, ಡೇಟಿಂಗ್ ಮಾಡುವವರ ಪೂರ್ವಾಪರಗಳನ್ನೆಲ್ಲಾ ರೆಕಾರ್ಡ್ ಮಾಡುವ 'ಬ್ಲೈಂಡ್ ಡೇಟ್' ಮತ್ತೊಂದು ಬಗೆಯದು ! ಇಬ್ಬರ ಜೊತೆ ಮಲಗಿದರೆ ಹೇಗಿರುತ್ತೆ ಅನ್ನುವುದರಿಂದ ಹಿಡಿದು 'ಬ್ಯಾಟಲ್ ಆಫ್ ದಿ ಬಾಡ್ಸ್' ನಲ್ಲಿ 'ಸೌಂದರ್ಯ' ದ ಮಾನದಂಡವೆಂಬಂತೆ ಹುಡುಗಿಯರು - ಹುಡುಗರಾದಿಯಾಗಿ ಎಲ್ಲಾ ಸ್ಪರ್ಧಿಗಳೂ ಬಟ್ಟೆ ಬಿಚ್ಚುವ ತನಕ ! ನೈಟ್ ಕ್ಲಬ್‌ನ ರಹಸ್ಯಗಳ ರಾಸಲೀಲೆಗೆ 'ನೈಟ್ ಕ್ಲಬ್ ಕನ್ಫೆಶನ್ಸ್' ಇದ್ದರೆ, 'ಶಾಕಿಂಗ್ ಬಿಹೇವಿಯರ್ ಕಾಟ್ ಆನ್ ಟೇಪ್', 'ಸೆಕ್ಸಿ ಕ್ಯಾಮ್' ರಿಯಾಲಿಟಿ ಷೋಗಳ ವಿವರಣೆ ಬೇಡವೇನೋ ! ಹೆಸರೇ ಎಲ್ಲಾ ತಿಳಿಸುತ್ತದೆಯಲ್ಲಾ!
ಸದ್ಯದ ಮಟ್ಟಿಗೆ ನಾವೇ ವಾಸಿ ! ಆದರೂ ಕೆಲವೇ ದಿನಗಳಲ್ಲಿ ನಮ್ಮಲ್ಲಿಗೂ ಬಂದರೆ ಆಶ್ಚರ್ಯವೇನಿಲ್ಲ !

ಮಾಧ್ಯಮಗಳು ನೀಡಬೇಕಾದದ್ದು ವಿನೋದವಲ್ಲ ; ವಿಕೃತ ಸಂತೋಷ ! : ವ್ಯಾಖ್ಯೆಗಳು ಬದಲಾಗುತ್ತಲಿದೆ.
********



'ಮದುವೆ ಅಂದ್ರೆ ಆಟ ಅಲ್ಲ' ಅಂತ ಗದರಿಸಿದವರ್ಯಾರು ಸ್ವಾಮೀ !
ಅಯ್ಯೋ ರಾಮಾ ! ಯಾರು ಇದಕ್ಕೆಲ್ಲಾ ಹೋಗ್ತಾರೆ ಅಂತೀರಾ?
ನಾವೇ !
ರಾಖಿ ಸಾವಂತ್ ಇಲೇಶ್‌ಗೆ ಉಂಗುರ ತೊಡಿಸಿಯಾಗಿದೆ ! ಅದಕ್ಕೂ ಮೊದಲೇ ಎನ್‌ಡಿಟಿವಿ ಇಮ್ಯಾಜಿನ್ ವಾಹಿನಿಗೆ ಕೇವಲ ೨೦ ದಿನದ ಅವಧಿಯಲ್ಲಿ ೧೮,೦೦೦ ಅರ್ಜಿ ಬಂದಿತ್ತು !
ಈ ಯಶಸ್ಸು (?) ನೋಡಿ ಅದಾಗಲೇ ರಾಹುಲ್ ಮಹಾಜನ್‌ಗೆ ಹುಡುಗಿಯರ ಕಾಲ್ ಬರಲಿಕ್ಕಾರಂಭವಾಗಿಯೂ ಆಯಿತು.
ಇನ್ನೇನು, ರಾಖಿ ಸ್ವಯಂವರದ ಫೈನಲಿಸ್ಟ್‌ಗಳಿಗೆ ಡಿಮ್ಯಾಂಡ್‌ನ ಕಾಲ !
ಮಾಲೆ ಹಿಡಿಯುವುದೊಂದು ಬಾಕಿ !
ಸರಿ ಬಿಡಿ, ಮದುವೆಯಾಗುವಷ್ಟೂ ಪುರುಸೊತ್ತಿಲ್ಲ. 'ಪತಿ ಪತ್ನಿ ಔರ್ ವೋ' ಶುರುವಾಗುವ ಹಂತದಲ್ಲಿದೆ. 'ಬೇಬಿ ಬಾರೋವರ್ಸ್' ಎಂಬ ಅಮೇರಿಕಾದ ತದ್ರೂಪು ಕೂಸು ಅದು ! ದಂಪತಿಗಳು ಮದುವೆ ನಂತರ ಎದುರಿಸುವ ಸವಾಲುಗಳ ಬಗ್ಗೆ ರಿಯಾಲಿಟಿ ಶೋ ! ಭಾಗವಹಿಸುವವರು ಯಾರು ಅಂತೀರಿ? ರಾಖಿ ಸಾವಂತ್ ಮತ್ತು ಇಲೇಶ್ !
'ಬಿಗ್ ಬ್ರದರ್ಸ್' ತಂಡದಲ್ಲಿ ಜನಾಂಗೀಯ ನಿಂದನೆ ಅಂತ ಊರೊಟ್ಟು ಮಾಡಿ ಭಾರತದಲ್ಲಿ ಗೂಡಿ ಖಳ ನಾಯಕಿ ಎಂದು ಮನೆಮಾತಾಗಿ, ಕೊನೆಗೆ ಆರಾಮವಾಗಿ ಸೆಲಬ್ರಿಟಿಗಳ ಸೆಲಬ್ರಿಟಿ ಅನ್ನಿಸಿಕೊಂಡವಳು ನಮ್ಮ ಊರಿನ ಶಿಲ್ಪಾ ಶೆಟ್ಟಿ. ಪಾಪ, ಮಾಧ್ಯಮಗಳು ಹುಯಿಲೆಬ್ಬಿಸಿಕೊಂಡದ್ದೇ ಬಂತು. ಮತ್ತೆ ನೋಡಿದರೆ ಪ್ರಕರಣ ಸುಖಾಂತ್ಯವಾಗಿ ತಣ್ಣಗೆ ಅವಳದ್ದೇ ಯೋಗ ಸಿ.ಡಿ., ಸೆಂಟು ! ಕೊನೆಗೆ ನಿಂದನೆ ಮಾಡಿದಳೆನ್ನಲಾದ ಜೇಡ್ ಗೂಡಿ ಕ್ಯಾನ್ಸರ್ ನಿಂದ ಮೃತಪಟ್ಟಿದ್ದೇ ತಡ, ಅವಳ ಸ್ಮರಣಾರ್ಥ ಹಪ್ಪಳ ಸೇರಿದಂತೆ ಇತರ ಕುರಕಲು ತಿಂಡಿಗಳು ಮತ್ತು ಊಟದೊಂದಿಗೆ ಬಳಸುವ ಕೆಲವು ಪದಾರ್ಥಗಳನ್ನು ಹೊಸ ಬ್ರ್ಯಾಂಡ್‌ನಡಿ ತರಲು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಯೋಜಿಸಿಯೂ ಆಯಿತು ! ಆಹಾ ! ಎಂತ ಸ್ಮರಣೆ !

ಏನಾದರೂ ಆಗು ಮೊದಲು ಮಾನವನಾಗು : ಅಂದು..
ಹೇಗಾದರೂ ಸರಿ ! ಮೊದಲು ಫೇಮಸ್ ಆಗು : ಇಂದು...
ಸೆಲೆಬ್ರಿಟಿತ್ವ ಉಳಿಸಿಕೊಳ್ಳುವುದು : ಮುಂದುವರಿದ ಭಾಗ...
*****

ಭಾರತದ ಪ್ರಮುಖ ರಿಯಾಲಿಟಿ ಷೋಗಳು
ಇಂಡಿಯನ್ ಐಡಲ್
ಜೋಡಿ ನಂ ೧
ಝಲಕ್ ದಿಕ್ ಲಾಜಾ
ತೋಲ್ ವೋಲ್ ಕೇ ಬೋಲ್
ನಚ್ ಬಲ್ಲಿಯೇ
ಇಂಡಿಯನ್ ಲಾಫ್ಟರ್ ಚಾಲೆಂಜ್
ವಾಯ್ಸ್ ಆಫ್ ಇಂಡಿಯಾ

ವಿಶ್ವದ ವಿವಾದಿತ ರಿಯಾಲಿಟಿ ಶೋಗಳು
ದೇರ್ ಇಸ್ ಸಂಥಿಂಗ್ ಅಬೌಟ್ ಮಿರಿಯಂ-೨೦೦೪- ಸುಂದರ ಯುವತಿಯನ್ನು ಓಲೈಸಬೇಕದದ್ದು ಸ್ಪರ್ಧೆ. ಆದರೆ ಕೊನೆಗೆ ಯುವತಿ ಓರ್ವ ಹಿಜಡಾ ಎಂದು ತಿಳಿದು ವಿವಾದವಾಗಿತ್ತು.
ಸೀರಿಯಸ್ಲೀ ಡ್ಯೂಡ್ ಐಯಾಮ್ ಗೇ - ೨೦೦೪- ಅಮೇರಿಕಾ
ಸ್ಪೇಸ್ ಕೆಡೆಟ್ಸ್- ೨೦೦೫- ಬ್ರಿಟನ್
ದ ಫಾರ್ಮ್- ೨೦೦೪- ಬ್ರಿಟನ್
ಬರ್ತ್ ನೈಟ್ ಅಲೈವ್- ೨೦೦೬- ಬ್ರಿಟನ್
ದ ಬಿಗ್ ಡೋನರ್ ಶೋ- ೨೦೦೭- ನೆದರ್‌ಲ್ಯಾಂಡ್
ಬಿಗ್ ಬ್ರದರ್ಸ್- ೨೦೦೭- ಬ್ರಿಟನ್

ವಿಶ್ವದ ಪ್ರಖ್ಯಾತ ರಿಯಾಲಿಟಿ ಶೋಗಳು
ದ ಬಿಗ್ ಲೂಸರ್
ಅಮೆರಿಕನ್ ಐಡಲ್
ಎಕ್ಸ್ ಟ್ರೀಮ್ ಮೇಕೌಟ್ ಹೋಮ್ ಎಡಿಷನ್
ಅಮೇರಿಕಸ್ ಟಫೆಸ್ಟ್ ಜಾಬ್
ಡೀಲ್ ಓರ್ ನೋಡಿಲ್
ಅಮೇರಿಕಸ್ ನೆಕ್ಸ್ಟ್ ಟಾಪ್ ಮಾಡೆಲ್
ಲಾಸ್ಟ್ ಕಾಮಿಕ್ ಸ್ಟ್ಯಾಂಡಿಂಗ್
ಕಿಚನ್ ನೈಟ್ ಮೇರ್
ಹೆಲ್ಸ್ ಕಿಚನ್

************

ಕಾಡಲ್ಲಿ ಕಳೆದುಹೋದರೆ ಹೇಗಿರುತ್ತದೆ ಅಂತ ಎಳೆಮಕ್ಕಳಿಗೂ ಗೊತ್ತಿರೋವಾಗ I am celebrity, get me out ಕಾಪಿ ಹೊಡೆದ ಕಾರ್ಯಕ್ರಮಕ್ಕೆ ಜೋತುಬಿದ್ದ ಇಮೇಜ್ ಟಿ‌ಆರ್‌ಪಿ ಇಲ್ಲದ ನಮ್ಮ ಬಾಲಿವುಡ್, ಸೀರಿಯಲ್‌ನ ಯುವಸಿಂಹಗಳು ತಾವಾಗೇ ಬಿದ್ದುಕೊಂಡು ಈಗ 'ಇಸ್ ಜಂಗಲ್ ಸೆ ಮುಜ್ಹೆ ಬಚಾವೋ ' ಅಂತಾ ಕೂಗುವುದಕ್ಕೆ ಶುರುಮಾಡಿದ್ದಾರೆ. ಹುಡುಗ-ಹುಡುಗಿಯರು ಒಟ್ಟಿಗೆ ಸ್ನಾನ ಮಾಡಬೇಕು, ಹುಳಹುಪ್ಪಟೆಗಳನ್ನು ಬಾಯಿಗೆ ಹಾಕಿಕೊಳ್ಳಬೇಕು, ವಿಷಜಂತುಗಳ ಜೊತೆ ಸರಸ ಮಾಡುವಷ್ಟು ಸಹನೆ ಇರಬೇಕು ಹೀಗೆ...! ಎಷ್ಟಾದರೂ ಭಾರತೀಯರು ಸಹನಶೀಲರಲ್ಲವೇ?
ಮತ್ತೊಂದೆಡೆ, ಸ್ಪರ್ಧಾರ್ಥಿಗಳನ್ನು ಬೀಚ್‌ಗೆ ಕಳುಹಿಸಿ ಅಲ್ಲಿನ ಜನರ ಒಳವಸ್ತ್ರಗಳನ್ನು ಶೇಖರಿಸಿ ತರುವ ಸ್ಪರ್ಧೆ- survivor ಎಂಟಿವಿಯಲ್ಲಿ 'ರೋಡೀಸ್' ಆದದ್ದು ಹೀಗೆ ! big brothers ಕಲರ್ಸ್ ಟಿವಿಯಲ್ಲಿ 'ಬಿಗ್ ಬಾಸ್' ಆದದ್ದೇ, ಕೆಲವೇ ದಿನಗಳಲ್ಲಿ ಮೊನಿಕಾ ಬೇಡಿ ಈಜುಡುಗೆ ಧರಿಸಿದ್ದು, ಮೊನಿಕಾ ಮತ್ತು ರಾಹುಲ್ ಮಹಾಜನ್‌ನ ವರ್ತನೆ ವ್ಯಾಪಕವಾಗಿ ಚರ್ಚೆಯಾಯಿತು. ಇದಲ್ಲದೆ ಅದೇ ಕಲರ್ಸ್ ಟಿವಿ 'ಬಾಲಿಕಾ ವಧು' ಎಂಬ ರಿಯಾಲಿಟಿ ಷೋ ಬಾಲ್ಯವಿವಾಹಕ್ಕೆ ಉತ್ತೇಜನ ನೀಡುವ ಮಾದರಿಯಲ್ಲಿ ರೂಪ ಪಡೆಯಿತು. 'ಪುರಾತನ ಸಂಸ್ಕೃತಿಯ ಪ್ರತಿಬಿಂಬವಂತೆ !' -ಇವರಿಗೆ ದೇಶದ ೨ ಪ್ರಮುಖ ಪಕ್ಷಗಳ ಸದಸ್ಯರೂ ಬೆಂಬಲ ಬೇರೆ ! ಸರ್ಕಾರವು ಈ ಕುರಿತು ಚರ್ಚೆಗೆ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಪೃಥ್ವಿರಾಜ್ ಚೌವಾಣ್ ಪ್ರತಿಕ್ರಿಯಿಸಿದ್ದು, ಕೆಲವೇ ಗಂಟೆಗಳಲ್ಲಿ ನೋಟೀಸು ನೀಡಿದ್ದು ಮತ್ತೆ ನಡೆದ ಬೆಳವಣಿಗೆ.
ಬಹುಷಃ ಕ್ರೈಮ್ ಮಾಡೋದು ಹೇಗೆ ಎಂದು ಸ್ಪರ್ಧೆಯಿಡುವುದು ಬಾಕಿ !
ಟಿವಿ ಭಾರತಕ್ಕೆ ಕಾಲಿಟ್ಟ ಹೊಸತರಲ್ಲಿ ನೇತಾರರು ಹುಯ್ಯಲಿಟ್ಟಿದ್ದರು - 'ನಮ್ಮ ಸಂಸ್ಕೃತಿಯನ್ನ ಕೊಲ್ಲುತ್ತದೆ'. ಕಾಲಕ್ರ್ರಮೇಣ ಜನಸಾಮಾನ್ಯರಾದಿಯಾಗಿ ಅದರ ಎಲ್ಲಾ ಮಾಯಾಜಾಲಕ್ಕೆ ಒಗ್ಗಿಕೊಂಡರು. ಈಗ ನೋಡಿದರೆ ವ್ಯಾಪಕ ರೀತಿಯಲ್ಲಿ ಮನರಂಜನೆಯ ಹೆಸರಲ್ಲಿ ಮನಬಂದಂತೆ ಬದಲಾಯಿಸುವ ವಿಕೃತಿ ನಿಧಾನವಾಗಿ ಅವರಿಸುತ್ತಿದೆ.
*********

ಸಂಗೀತ ಸ್ಪರ್ಧೆಯೆಂದರೆ ಅದೊಂದು ಯುದ್ಧವೇ ಸರಿ ! ವೇದಿಕೆಯೇ ಸಮರಾಂಗಣ. ಹಾಡಿಗಿಂತಲೂ ಹಾಡುಗಾರರ ವಸ್ತ್ರಾಲಂಕಾರ, ಮನೆಯ ಆರ್ಥಿಕ ಸ್ಥಿತಿ, ಅವರ ವೈಯಕ್ತಿಕ ಜೀವನ, ಹೆತ್ತವರ ಆತಂಕ, ಹಾರೈಕೆ, ಸ್ಪರ್ಧಿಗಳ ತುಮುಲಗಳ ಬಗೆಗೆ, ಸಂಗೀತಕ್ಕೆ, ಬೆಳಕಿನ ಅಬ್ಬರಕ್ಕೆ ತಕ್ಕಂತೆ ಕುಣಿಯುವುದರ ಮೇಲೆ ಕ್ಯಾಮೆರಾ ಕಣ್ಣು ! ಈ ರಿಯಾಲಿಟಿ ಕಾರ್ಯಕ್ರಮಗಳು ನೇರವಾಗಿ ರಿಕಾರ್ಡಿಂಗ್ ಆಗಿರುತ್ತವೆ. ಅಂತೆಯೇ ನೇರ ಸಂಕಲನ ಆಗಿರಬೇಕು ಎಂಬುದು ಸಾಮಾನ್ಯ ತಿಳಿವಳಿಕೆ.
ಆದರೆ ಈ ಷೋಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ಅಥವಾ ಅಭ್ಯರ್ಥಿಗಳು ಕ್ಯಾಮೆರಾಗಳ ಮುಂದೆ ನಿಂತಾಗ ಅವರ ವ್ಯಕ್ತಿತ್ವವನ್ನೇ ನಿರ್ವಹಿಸುವ ಸೂತ್ರಧಾರನಿರುತ್ತಾನೆ. ಅಷ್ಟೇ ಅಲ್ಲದೆ, ಸಂಕಲನ ಮಾಡುವ ಹಂತದಲ್ಲಿಯೂ ಅನೇಕ ಬದಲಾವಣೆಗಳನ್ನು ಮಾಡಲಾಗುತ್ತದೆ. ಈ ಬದಲಾವಣೆಗಳು, ನೇತ್ಯಾತ್ಮಕವಾದರೂ, ಸಹಿಸಿಕೊಳ್ಳಬೇಕು. ಬೇರೆ ಉಪಾಯವಿಲ್ಲ; ಕಾರಣ, ಅಲ್ಪ ಅವಧಿಯಲ್ಲೇ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುವ ಅವಕಾಶ, ಅಪಾರ ಹಣ ಸಂಪಾದಿಸಬಹುದು, ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಳ್ಳಬಹುದು, ಅವಕಾಶವೂ ದಂಡಿಯಾಗಿ ಮನೆ ಬಾಗಿಲಿಗೆ ಬಂದು ಬೀಳಬಹುದು ! ಹಾಗಾಗಿ, ತೀರ್ಪುಗಾರ-ಸ್ಪರ್ಧಿಗಳ ವಾಗ್ವಿವಾದ, ಪರದೆಯ ಹಿಂದಿನ ಅರಚಾಟ, ಭಾವೋತ್ಕರ್ಷಗಳೆಡೆಗೂ, ಆಕಳಿಸಿ ತೂಕಡಿಸುವವರೆಗೂ ಒಂದು ಕಣ್ಣು ಇದ್ದೇ ಇರುತ್ತದೆ. ಇದರೊಂದಿಗೆ ತೀರ್ಪುಗಾರರ ಪಕ್ಷಪಾತ ಧೋರಣೆ ಮತ್ತು ವೈಯ್ಯಕ್ತಿಕ ಇಷ್ಟಾನಿಷ್ಟಗಳೂ ಸೇರಿದರಂತೂ ಪ್ರತಿಭಾವಂತರು ಮತ್ತಷ್ಟು ಮಂಕಾಗಬೇಕಾಗುತ್ತದೆ.
ಆಶಾಭಾವನೆಯೇ ಕೊನೆಗೆ ಅಪರಾಧಿ ಸ್ಥಾನದಲ್ಲಿ ನಿಲ್ಲುವಂತೆ ಮಾಡುತ್ತಿದೆ ಎಂಬುದಕ್ಕೆ ರಿಯಾಲಿಟಿ ಶೋ ಒಳ್ಳೆಯ ಉದಾಹರಣೆ. ಒಂದು ಸುತ್ತಿನಲ್ಲಿ ಸೋತ ಸ್ಪರ್ಧಿಗಳನ್ನು ಎಲಿಮಿನೇಷನ್ ರೌಂಡ್ ಮೂಲಕ ಉಚ್ಚಾಟಿಸುವ ಪ್ರಕ್ರಿಯೆ ನಾಟಕೀಯ ಮಾತ್ರವಲ್ಲ ಒಂದು ಬಗೆಯಲ್ಲಿ ಶೊಷಣೆಯೇ ಹೌದು. ಭಾವನೆಗಳನ್ನು ಬಿಕರಿ ಮಾಡುವುದು ಎಂದರೆ ಹೀಗೆಯೇ ! ಪೋಷಕರು ಅಳುವುದು, ತೀರ್ಪುಗಾರರು ಸಂತೈಸುವುದು, ಅಪ್ಪಿ ಮುದ್ದಾಡುವುದು, ಅವರೊಂದಿಗೆ ತಾವೂ ಅಳುವುದು..ಹೀಗೆ, ಸೋಲಿನ ಭಾವನೆಗಳನ್ನು ವೈಭವೀಕರಿಸಿ, ನೋಡುಗರನ್ನು ರಂಜಿಸುವ ಮೂಲಕ, ಗೆಲುವನ್ನು ಅತಿರಂಜಿತವನ್ನಾಗಿಸುವುದಕ್ಕೆ ಏನೆಲ್ಲಾ ಕ್ರೌರ್ಯ ಮಾಡಬೇಕೋ ಅಷ್ಟೂ ಸಿದ್ಧ.. ಅನೇಕ ಬಾರಿ ಸ್ಪರ್ಧಿಗಳು ವೇದಿಕೆಯ ಮೇಲೆ ತಲೆ ಸುತ್ತಿ ಬಿದ್ದಿರುವ, ಮಾನಸಿಕವಾಗಿ ನೊಂದು ಹೋದ, ವೈಕಲ್ಯಕ್ಕೆ ತುತ್ತಾದ ಪ್ರಕರಣಗಳೂ ನಡೆದಿವೆ. ಮಕ್ಕಳ ಬಾಲ್ಯವನ್ನೇ ಬೇಟೆಯಾಡುವ ಇಂತಹ ವಿಕೃತಿಗಳು ಮಕ್ಕಳ ಭವಿಷ್ಯವನ್ನೇ ಬಲಿ ತೆಗೆದುಕೊಂಡಿವೆ ! ಉತ್ತರ ಭಾರತದ ರಿಯಾಲಿಟಿ ಷೋವಿಗೆ ಶಿಂಜಿನಿ ಎನ್ನುವ ಬಾಲಕಿಯ ಇಡೀ ಜೀವನವೇ ಬಲಿಯಾದದ್ದು ಹೀಗೆಯೇ !
ಇನ್ನೂ ಇದೆ ತಂತ್ರ ! : ಹೊಸ ಚಲನಚಿತ್ರ ಬಿಡುಗಡೆಗೆ ಬಂದಿದ್ದಲ್ಲಿ ಆ ಚಿತ್ರದ ನಟ/ನಟಿ/ನಿರ್ದೇಶಕ ಮಹಾಶಯರು ಅತಿಥಿ ಗಣ್ಯರಾಗಿ ಆಗಮನ ( ಸಂಗೀತದ ತಲೆಬುಡ ಗೊತ್ತಿಲ್ಲದಿದ್ದರೂ !) ಅಥವಾ ಈಗಾಗಲೇ ಇಮೇಜ್ ಕಡಿಮೆಯಿರುವ ಮುಖದರ್ಶನ ! ಒಟ್ಟಿನಲ್ಲಿ ಚಿತ್ರತಾರೆಯರಿಗೆ, ಚಿತ್ರಗಳಿಗೂ ರಿಯಾಲಿಟಿ ಶೋ ಗಳೊಂದು ಜಾಹೀರಾತು ತಂತ್ರಗಳಲ್ಲದೆ ಬೇರೇನಿಲ್ಲ ! ಕೊನೆಗೆ ಶ್ರೋತೃಗಳ ವೋಟುಗಳು ಬಹಳ ಮುಖ್ಯ ಎನ್ನುತ್ತಾ ಎಸ್‌ಎಂಎಸ್‌ಗಳಲ್ಲಿ ಅಂಗಾಲಾಚಿ ಭಿಕ್ಷೆ ಬೇಡುವುದು ಕುಡಾ ದುಡ್ಡು ಮಾಡುವ ಉಪಾಯಗಳಲ್ಲಿ ಬಹಳ ಮುಖ್ಯವಾದದ್ದು ! ಆದರೆ ಇದು ಉಂಟು ಮಾಡುವ ವರ್ಗ ತಾರತಮ್ಯ, ಜಾತಿ-ಮತದ ಅಧಾರದಲ್ಲಿ ವೋಟುಗಳ ಮಾರಾಟ ಮುಂದೊಂದು ದಿನಕ್ಕೆ ಬಹಳ ದೊಡ್ಡ ಕಂದರವನ್ನೇ ಸೃಜಿಸಿದರೂ ಆಶ್ಚರ್ಯವಿಲ್ಲ.
**********
ಕನ್ನಡವೇನೂ ಕಡಿಮೆಯಿಲ್ಲ. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಮುಂದಾಳತ್ವದ ಈ ಟಿ ವಿಯ 'ಎದೆ ತುಂಬಿ ಹಾಡುವೆನು' ಭಿನ್ನ ಭಿನ್ನ ರೀತಿಯಿಂದ ಚೆಂದಗೆ ಯಶಸ್ವಿಯಾಗುವಷ್ಟರಲ್ಲಿಯೇ ಚಾನಲ್ ಪ್ರಪಂಚಕ್ಕೆ ಧುಮುಕಿದ ಎಲ್ಲಾ ರಿಯಾಲಿಟಿ ಮಹಾಶಯರು ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು ಅಜ್ಜಂದಿರ ವರೆಗೂ ಹಾಡಿಸುವುದಕ್ಕೆ, ಶುರು ಮಾಡಿ ವರುಷಗಳೇ ಕಳೆದಿವೆ. ಸಂಗೀತ ಕ್ಷೇತ್ರಕ್ಕೆ ಎಂತಹ ಪ್ರೋತ್ಸಾಹ ನೋಡಿ ! ಪರಿಣಾಮ, ಎಷ್ಟು ದಿನದಲ್ಲಿ ನನ್ನ ಮಗ/ಮಗಳು ಸಂಗೀತ ಕಲಿತು ಟಿ.ವಿ.ಯಲ್ಲಿ ಹಾಡಬಹುದು?" - ನೃತ್ಯ, ಸಂಗೀತ ತರಬೇತುದಾರರಿಗೆ ಒಂದು-ಎರಡು ಹಾಡಿಗೆ ಪ್ರಸಿದ್ಧಿ ಮಾಡಿಸಿ ಪ್ರೈಜ್ ಗಿಟ್ಟಿಸಿಕೊಳ್ಳಬೇಕೆಂಬ ಒತ್ತಾಸೆಗೆ ಕುರಿಗಳಾದವರು !
ಸರಿ, ಸೋತಿದ್ದಕ್ಕೆ ಸಹಜವಾಗಿ ಅಳು ಬಂದು ಮತ್ತೆ ಸಮಾಧಾನವಾದರೂ, ಅದನ್ನೆ ತಿರುಗಿಸಿ ಮುರುಗಿಸಿ ಮತ್ತೆ ಮತ್ತೆ ಅಳಿಸಿ, ವಿಷಾದಗೀತೆಯ ಪಿಟೀಲಿಗೆ ಏನನ್ನೋಣ !
ಒಂದಷ್ಟು ಜನರನ್ನು ಕುಣಿಸಿ ತಾವೂ ಕುಣಿದು ಕೊರತೆ ಕಂಡುಹಿಡಿಯುವುದು ಒಂದಾದರೆ, ಜನರನ್ನ 'ಕುರಿಗಳು ಸಾರ್ ಕುರಿಗಳು' ಅಂತ ಕುರಿ ಮಾಡಿ, ತಾವೂ ಕೋತಿಗಳಂತೆ ಆಡಿದ್ದೇ ತಡ, ಉಳಿದೆಲ್ಲಾ ಚಾನಲ್‌ಗಳದ್ದೂ (ಅದೇ ರೀತಿಯ ಹೆಸರಷ್ಟೇ ಬೇರೆ ಕಾಣುವ) ಟೋಪಿ ಇಡುವ ಕಾಯಕ ಕೈಲಾಸ ಸ್ವಲ್ಪ ಹಳತು ! ಸ್ವಾರಸ್ಯವೆಂದರೆ, ಈಗಿನ ಸರಿಗಮಪ ಹಾಡುವ ಕಾರ್ಯಕ್ರಮದ ಶೀರ್ಷಿಕೆಯಲ್ಲಿ ಇರುವ ಪದಗಳಲ್ಲಿ 'ಸರಿಗಮಪ'ದ ಐದು ಅಕ್ಷರ ಮಾತ್ರ ಕನ್ನಡ ! ಅದು ಇಂದಿನ ಟ್ರೆಂಡ್ ! ಸೀರೆಗೂ ಸವಾಲ್ ಹಾಕೋದು ಒಂದಾದರೆ, ಝಣಝಣ ಕಾಂಚಾಣ ಉದುರಿಸುವುದು ಮತ್ತೊಂದು ! ಫ್ರಿಡ್ಜ್-ವಾಶಿಂಗ್ ಮೆಷಿನ್ ಕೊಡೋದು ಒಂದಾದರೆ, ಟೂರ್‌ಗೆ ಕರ್ಕೊಂಡು ಹೋಗೋದು ಮತ್ತೊಂದು ! ಅಷ್ಟೇಕೆ ಅಡುಗೆಯಲ್ಲೂ ಯಾರು ಬೆಸ್ಟ್ ಅತ್ತೆ ಸೊಸೆ ಎಂದು ಕಂಡು ಹಿಡಿವ ಕೈ ಚಳಕ ! ಎಲ್ಲರ ಡ್ಯಾಡಿಗಳಿಗಿಂತ ಯಾರ ಡ್ಯಾಡಿ ಬೆಸ್ಟ್ ಅನ್ನೋದಕ್ಕೆ 'ಡ್ಯಾಡಿ ನಂಬರ್ ಒನ್' !
*************
Moment of truth ನ ನಕಲು ಸ್ಟಾರ್ ಟೀವಿಯ 'ಸಚ್ ಕೆ ಸಾಮ್ನಾ' ಸತ್ಯದ ಅಗ್ನಿಪರೀಕ್ಷೆ ನಡೆಸುವುದರಲ್ಲಿ ಬಹುಷ ನಮ್ಮ ಮಂಪರು ಪರೀಕ್ಷೆ ತಜ್ಞರಿಗೇ ಸವಾಲು ಹಾಕಿ ಕೋರ್ಟ್‌ಗಳ ವಾದ ಪರಿಶೀಲನೆ- ಜಡ್ಜ್ ಮೆಂಟ್‌ಗೇ ಸಡ್ಡು ಹೊಡೆಯ ಹೊರಟಿದೆ.
ಇದರಲ್ಲಿ ಭಾಗವಹಿಸಿದವರಿಗೆ ತಮ್ಮ ವೈಯಕ್ತಿಕ ಮತ್ತು ವೃತ್ತಿ ಬದುಕಿಗೆ ಸಂಬಂಧಿಸಿದಂತೆ ೨೧ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇವರು ನೀಡುವ ಉತ್ತರಗಳನ್ನು ಪಾಲಿಗ್ರಾಫ್ ಪರೀಕ್ಷೆಯ ಉತ್ತರಕ್ಕೆ ಹೋಲಿಸಲಾಗುತ್ತದೆ. ಕಾರ್ಯಕ್ರಮದ ರೆಕಾರ್ಡಿಂಗ್‌ಗೆ ಮುಂಚಿತವಾಗಿ ಪಾಲಿಗ್ರಾಫ್ ಪರೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಪ್ರಶ್ನೆಗಳಿಗೂ ಸತ್ಯ ಉತ್ತರ ನೀಡಿದಲ್ಲಿ ಅವರು ಒಂದು ಕೋಟಿ ರೂಪಾಯಿ ಬಹುಮಾನ ಗೆಲ್ಲುತ್ತಾರೆ.
ಟಿವಿ ತಾರೆ ರಾಜೀವ್ ಖಾಂಡೇವಾಲ್ ನಡೆಸಿಕೊಡುವ ಈ ಕಾರ್ಯಕ್ರಮ ಪ್ರದರ್ಶನಗೊಂಡ ಪ್ರಥಮ ವಾರದಲ್ಲೇ ತನ್ನ ಟಿ‌ಆರ್‌ಪಿ ರೇಟನ್ನು ಹೆಚ್ಚಿಸಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕವೇ ಕ್ರಿಕೆಟಿಗ ವಿನೋದ್ ಕಾಂಬ್ಳಿ ತನ್ನ ಸ್ನೇಹಿತ ಸಚಿನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂಬ ವಿವಾದ ಹುಟ್ಟಿಕೊಂಡಿತ್ತು. ಆದರೆ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ , 'ತೆಂಡೂಲ್ಕರ್ ವಿರುದ್ಧ ನಾನು ಯಾವುದೇ ರೀತಿಯ ಹೇಳಿಕೆ ನೀಡಿಲ್ಲ. ಸಚಿನ್ ಕುಟುಂಬ ನನಗೆ ಬಾಲ್ಯದಿಂದಲೂ ಆಶ್ರಯ ನೀಡಿದೆ. ಅವರ ವಿರುದ್ಧ ನಾನು ಆರೋಪ ಮಾಡಿಲ್ಲ.ಆರೋಪಗಳು ಆಧಾರರಹಿತ' ಎಂದು ತಳ್ಳಿಹಾಕಿದ್ದರು.
ಆದರೆ, ಟೈಮ್ಸ್ ನ್ಯೂಸ್ ಚಾನೆಲ್ 'ಸಚಿನ್ ತಮಗೆ ಕಷ್ಟದ ಕಾಲದಲ್ಲಿ ಸಹಾಯ ಮಾಡಲಿಲ್ಲ' ಎನ್ನುವ ಕಾಂಬ್ಳಿಯವರ ಹೇಳಿಕೆಗಳ ವೀಡಿಯೋ ತುಣುಕುಗಳನ್ನು, ಪುನಃ ಬಿತ್ತರಿಸಿ ಮಾಡಿದ್ದು ಸಾಕ್ಷಿ ಹೇಳುವ ಕೆಲಸ !
ನೀವು ಗಂಡನ ಜೊತೆ ಮಲಗಿರುವಾಗ ಬೇರೆಯವರನ್ನ ನೆನಪಿಸಿಕೊಳ್ಳುತ್ತೀರಾ? ಅನ್ನೋ ಪ್ರಶ್ನೆ ಕುಟುಂಬ ಸಮೇತರಾಗಿ ಕೂತು ನೋಡುವ ನಮ್ಮ ಟಿ ವಿ ಪರದೆ ಮೇಲೆ ಬರುತ್ತೆ ಅಂತ ಯಾರೂ ಕಲ್ಪಿಸಿಕೊಂಡಿರಲೂ ಸಾಧ್ಯವಿಲ್ಲ.ಆದರೆ ಇವತ್ತು ಸಚ್ ಕಾ ಸಾಮ್ನಾ ನೀವು ಯಾವತ್ತಾದರೂ ವೇಶ್ಯೆಯ ಸಂಪರ್ಕ ಮಾಡಿದ್ದೀರಾ? ಮದುವೆ ಮಾಡಿಕೊಳ್ಳದೆ ಮಕ್ಕಳಾಗಿದೆಯಾ? ನಿಮ್ಮ ಗಂಡನಿಗೆ ಗೊತ್ತಾಗುವುದಿಲ್ಲ ಎನ್ನುವುದಾದರೆ ನೀವು ಇನ್ನೊಬ್ಬರ ಸಹವಾಸ ಮಾಡಲು ಸಿದ್ಧರಿದ್ದೀರಾ? ಅನ್ನೋ ಪ್ರಶ್ನೆ ಕೇಳುತ್ತಾ ಲೈ ಡಿಟೆಕ್ಟರ್ ಸುಳ್ಳಿನ ಪತ್ತೆಗೆ ಸಜ್ಜಾಗಿ ನಿಂತಿದೆ !
ಮಹಿಳೆಯೊಬ್ಬಳಿಗೆ ಆಕೆಯ ಪತಿಯ ಉಪಸ್ಥಿತಿಯಲ್ಲೇ, ನಿಮಗೆ ವಿವಾಹೇತರ ಸಂಬಂಧಗಳು ಇವೆಯೇ ಎಂದು ಪ್ರಶ್ನಿಸಲಾಗಿತ್ತು. ಪತಿಗೆ ತಿಳಿಯದೇ ಇದ್ದಲ್ಲಿ ಇನ್ನೊಬ್ಬರೊಂದಿಗೆ ಮಲಗುವಿರಾ ಎಂಬ ಪ್ರಶ್ನೆಗೆ ಆಕೆ ಇಲ್ಲ ಎಂದು ಹೇಳಿದಳು. ಆದರೆ, ಪಾಲಿಗ್ರಾಫ್ ಯಂತ್ರ ಆಕೆಯ ಉತ್ತರ ಸುಳ್ಳು ಎಂದು ತೀರ್ಪು ನೀಡಿತು. ಹಾಗಾದರೆ ಕಿರುತೆರೆಯ ಮೇಲೆ ತಮ್ಮ ಕೌಟುಂಬಿಕ, ವೈಯ್ಯಕ್ತಿಕ ಸಮಸ್ಯೆಗಳನ್ನು ಹೇಳಿಕೊಂಡು ಕಣ್ಣೀರು ಸುರಿಸುವುದು ನೋಡುಗರಿಗೆ ಒಂದು ರೀತಿಯ ವಿಚಿತ್ರ ಆನಂದವೇ !
ಸಂಸಾರದ ಗುಟ್ಟು ವ್ಯಾಧಿ ರಟ್ಟು !
"ಮನೆಮುರುಕ' ಸಚ್ ಕಾ ಸಾಮ್ನಾ ಶೋ ತನ್ನ ಮೊದಲ "ಬಲಿ' ತೆಗೆದುಕೊಂಡಿದೆ ! ಯುವಕನೊಬ್ಬ ಪತ್ನಿಯ ಮೇಲೆ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಗಸ್ಟ್ ೧೧ರ ಎಪಿಸೋಡನ್ನು ವೀಕ್ಷಿಸಿ ಅದರಿಂದ ಪ್ರಭಾವಿತನಾದ ದೆಹಲಿ ಸಮೀಪದ ಗ್ರೇಟರ್ ನೋಯ್ಡಾದ ಶಾಪಿಂಗ್ ಮಾಲ್ ಒಂದರಲ್ಲಿ ಭದ್ರತಾ ಸಲಹೆಗಾರನಾಗಿ ಕೆಲಸ ಮಾಡುತಿದ್ದ ಸುರೀಂದರ್ ತನ್ನ ಪತ್ನಿಗೂ ಅದೇ ಮಾದರಿಯ ಪ್ರಶ್ನೆಗಳನ್ನು ಕೇಳಿದ. ಆಗ "ಬೇರೊಬ್ಬನ ಜತೆ ನಾನು ವಿವಾಹಪೂರ್ವ ಲೈಂಗಿಕ ಸಂಬಂಧ ಹೊಂದಿದ್ದೆ' ಎಂದು ಪತ್ನಿ ನೀಡಿದ ಉತ್ತರದಿಂದ ಆತ ನೊಂದು ಆತ ಆತ್ಮಹತ್ಯೆ ಮಾಡಿಕೊಂಡ.
ಸಚ್ ಕಾ ಸಾಮ್ನಾ ಕಾರ್ಯಕ್ರಮವು ೧೯೯೫ರ ಕೇಬಲ್ ಟಿವಿ ನೆಟ್‌ವರ್ಕ್ ಕಾಯ್ದೆಯ ಕಾರ್ಯಕ್ರಮ ಸಂಹಿತೆಯ ವಿಧಿಗಳಾದ ೬(೧) ಎ, ಡಿ, ಐ ಮತ್ತು ಒ ವನ್ನು ಉಲ್ಲಂಘಿಸುತ್ತದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ಹಿನ್ನೆಲೆಯಲ್ಲಿ ಶೋಕಾಸ್ ನೋಟೀಸು ನೀಡಲಾಗಿದೆ. ಈ ಕಾರ್ಯಕ್ರಮವು ಭಾರತೀಯ ಸಮಾಜದ ಮೌಲ್ಯಗಳಿಗೆ ವಿರುದ್ಧವಾದುದಾಗಿದೆ ಎಂಬುದಾಗಿ ದೀಪಕ್ ಮಿಯಾನಿ ಮತ್ತು ಪ್ರಭಾತ್ ಕುಮಾರ್ ಎಂಬಿಬ್ಬರು ಅರ್ಜಿದಾರರು ದೂರಿದ್ದು, ಈ ಕಾರ್ಯಕ್ರಮದ ಪ್ರಸಾರದ ರದ್ದತಿಗೆ ಮನವಿ ಮಾಡಿದ್ದರು ಕೂಡಾ !
ಆದರೆ ನ್ಯಾಯಮೂರ್ತಿಗಳಾದ ಎ.ಪಿ. ಶಾ ಮತ್ತು ಮನಮೋಹನ್ ಅವರುಗಳನ್ನು ಒಳಗೊಂಡಿದ್ದ ವಿಭಾಗೀಯ ಪೀಠವು ರಾಷ್ಟ್ರದ ಸಂಸ್ಕೃತಿಯು ಟಿವಿ ಕಾರ್ಯಕ್ರಮದಿಂದ ಒಡೆಯುವಷ್ಟು ದುರ್ಬಲವಲ್ಲ ಎಂದು ಹೇಳಿದೆ. "ಈ ಕಾರ್ಯಕ್ರಮವನ್ನು ನಿಷೇಧಿಸಬೇಕೇ ಬೇಡವೇ ಎಂಬುದು ಸರ್ಕಾರಕ್ಕೆ ಬಿಟ್ಟ ವಿಚಾರ. ಇದು ನ್ಯಾಯಾಲಯದ ಕೆಲಸವಲ್ಲ. ಇದಕ್ಕಿಂತಲೂ ಗಂಭೀರವಾದ ಸಮಸ್ಯೆಗಳನ್ನು ದೇಶ ಎದುರಿಸುತ್ತಿದ್ದು ಅದನ್ನು ಮೊದಲು ಪರಿಹರಿಸಬೇಕಿದೆ" ಎಂಬುದು ವಿಭಾಗೀಯ ಪೀಠದ ತೀರ್ಪು !
ಕಾರ್ಯಕ್ರಮವನ್ನು ನೋಡಲಾಗದಿದ್ದರೆ ಟಿವಿ ಬಂದ್ ಮಾಡಿ ಎಂಬುದಾಗಿ ದೆಹಲಿ ಹೈಕೋರ್ಟ್ ವೀಕ್ಷಕರಿಗೆ ಸಲಹೆ ಮಾಡಿದೆ. ನೈತಿಕತೆಯನ್ನು ಕಾಪಾಡುವುದು ತನ್ನ ಪಾತ್ರವಲ್ಲ ಎಂದು ಹೇಳಿದ ನ್ಯಾಯಾಲಯ, ಈ ಕಾರ್ಯಕ್ರಮದಿಂದ ನೋವನುಭವಿಸುವವರು ಅದರ ಪ್ರಸಾರದ ವೇಳೆಗೆ ಟಿವಿ ಬಂದ್ ಮಾಡಿ ಎಂದು ಹೇಳಿದೆ. ಜೊತೆಗೆ ಈ ಕುರಿತು ಅರ್ಜಿದಾರರು ಕೇಂದ್ರ ಸರ್ಕಾರವನ್ನು ಸಂಪರ್ಕಿಸಬಹುದು ಎಂದಿದೆ.
ವಿವಾದಾತ್ಮಕ ಟಿವಿ ರಿಯಾಲಿಟಿ ಶೋ 'ಸಚ್ ಕಾ ಸಾಮ್ನಾ' ನಿರ್ಮಾಣ ಕಂಪನಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟೀಸ್ ನೀಡಲು ನಿರ್ಧರಿಸಿದೆ. ಕಾರ್ಯಕ್ರಮದ ವಿರುದ್ಧ ಆಯೋಗಕ್ಕೆ ಹಲವು ಮಹಿಳೆಯರು ದೂರು ಸಲ್ಲಿಸಿದ್ದರು. ಈ ಬಗ್ಗೆ ಮಾಹಿತಿ ಕೋರಿ ರಿಯಾಲಿಟಿಶೋ ನಿರ್ಮಾಣ ಸಂಸ್ಥೆ ಬಿಗ್ ಸಿನರ್ಜಿಗೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಆಯೋಗದ ಅಧ್ಯಕ್ಷೆ ಗಿರಿಜಾ ವ್ಯಾಸ್ ತಿಳಿಸಿದ್ದರು.

ಸಾಮಾಜಿಕ, ವೈಯಕ್ತಿಕ ಮತ್ತು ವ್ಯಕ್ತಿಗತ ಬದುಕಿನ ವ್ಯತ್ಯಾಸ ತಿಳಿಯಬಾರದು, ಬದಲಾಗಿ ಅವುಗಳಲ್ಲೆಲ್ಲಾ ಕ್ಯಾಮೆರಾ ಹಿಡಿದು ಕೈಯ್ಯಾಡಿಸಬೇಕು : ಮಾಧ್ಯಮಗಳ ಹೊಸ ನೀತಿ ಸಂಹಿತೆಯೇ ? !
*************

ಇಂದು ಟಿವಿ ಎಂದರೆ ಸಾವಿರಾರು ಕೋಟಿ ರುಪಾಯಿಗಳ ವಹಿವಾಟು. ಅದರಲ್ಲೂ ಪ್ರೈಮ್ ಟೈಂ (೭ರಿಂದ ೧೦ಗಂಟೆ) ವರೆಗಿನ ಸಮಯ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳಬೇಕಾದ ಜೊತೆಗೆ ದುಡ್ಡು ಮಾಡುವ ಸಮಯ. ಹಾಗೆ ನೋಡಿದಲ್ಲಿ ರಿಯಾಲಿಟಿ ಷೋ, ಜಾಹಿರಾತುಗಳಿಂದ ಬರುವ ಲಾಭವೇ ೬೦೦೦ ಕೋಟಿ ರುಪಾಯಿಗಳನ್ನು ಮೀರಿದೆ. ಲೆಕ್ಕಮಾಡಲು ಹೊರಟರೆ ಭಾರತದಲ್ಲಿ ಸುಮಾರು ೫೦೦ಕ್ಕಿಂತಲೂ ಹೆಚ್ಚಿನ ರಿಯಾಲಿಟಿ ಶೋಗಳಿವೆ. ಮಾತ್ರವಲ್ಲ, ಈಗಾಗಲೇ ಸರ್ಕಾರ ೪೧೦ ಹೊಸ ಚಾನಲ್‌ಗಳಿಗೆ ಒಪ್ಪಿಗೆ ಕೊಟ್ಟಿದೆ. ೭೩ ಹೊಸ ವಿದೇಶಿ ಚಾನಲ್‌ಗಳ ಪ್ರಸಾರಕ್ಕೂ ಗ್ರೀನ್ ಸಿಗ್ನಲ್ ತೋರಿಸಿಯಾಗಿದೆ. ಈಗ ಠಸ್ಸೆ ಒತ್ತುವ ಸರದಿಗೆ ಕಾದು ನಿಂತಿರುವುದು ೧೪೩ ಭಾರತೀಯ ಮತ್ತು ೨೦ ವಿದೇಶೀ ಚಾನಲ್ ! ಹಾಗಾದರೆ ಅಂದಾಜು ಮಾಡೋಣ. ಇವುಗಳಲ್ಲಿ ಇನ್ನೆಷ್ಟು ಚಾನಲ್ ಗಳಲ್ಲಿ ರಿಯಾಲಿಟಿಗಳ ಹಸಿಬಿಸಿಗಳಿರಬಹುದು ! ?
ಹೀಗೆಂದು ಬರುವ ಎಲ್ಲರೂ ಇದೇ ರೀತಿಯೇ? ಅಲ್ಲ. ಮರಳುಗಾಡಿನ ಮಧ್ಯೆ ಅಲ್ಲಲ್ಲಿ ಓಯೆಸಿಸ್‌ಗಳಿವೆ. ಬಲು ಸೊಗಸಾಗಿ ಹಾಡುವ, ನರ್ತಿಸುವ, ಕಲೆಯನ್ನೇ ಜೀವನ ಎಂದುಕೊಂಡ ಪ್ರತಿಭಾವಂತರೂ ಇದ್ದಾರೆ. ಅಂತೆಯೆ ರಿಯಾಲಿಟಿ ಷೋಗಳ ಇತ್ಯಾತ್ಮಕ ಮುಖಗಳೂ ಕಣ್ಣೆದುರಿಗಿದೆ.
ಒಮ್ಮೆ ನಮ್ಮ ಪಕ್ಕದ ಮಲಯಾಳಂ ಚಾನಲ್‌ಗಳನ್ನ ನೋಡೋಣ ! ಏಷ್ಯಾನೆಟ್ ನಲ್ಲಿ 'ಸಿಟಿಜನ್ ಜರ್ನಲಿಸ್ಟ್' ಅಂತ ರಿಯಾಲಿಟಿ ಷೋ ಇದೆ. ಇನ್ನೊಂದೆಡೆ ಮಮ್ಮುಟ್ಟಿ ಪ್ರತಿಭೆ ಹೊರಗೆಳೆದು ತರುತ್ತಿದ್ದಾರೆ. ಕ್ಯಾಮೆರಾ ಮೈಕ್ ಹಿಡಿದು ಬೀದಿ ಬೀದಿಗೆ ಹೋಗುವ ಮಂದಿ ಕಷ್ಟದ ಕಥೆ, ಸಂತೋಷದ ಸುದ್ದಿಗಳೆರಡನ್ನೂ ವೀಕ್ಷಕರಿಗೆ ದಯಪಾಲಿಸುತ್ತಾರೆ. ಅಮೃತಾಟಿವಿಯಲ್ಲಿ ಪ್ರಸಾರವಾಗುತ್ತಿರುವ ಸ್ಟಾರ್ ಸೂಪರ್ ಸಿಂಗರ್ ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕಾಗಿಯೆ ಮೀಸಲಾದ ಒಂದು ಕಾರ್ಯಕ್ರಮವಾಗಿ ಪ್ರಸಾರವಾಗುತ್ತಿರುವುದು ಸಂಗೀತ ಪ್ರೇಮಿಗಳ ಹೆಮ್ಮೆ.
ಅಂತೆಯೇ ಝೀ ಮರಾಠಿಯಲ್ಲಿ ಪ್ರಸಾರವಾಗುವ "ಐಡಿಯಾ ಸ ರೆ ಗ ಮ ಪ", ಕನ್ನಡದ 'ಎದೆ ತುಂಬಿ ಹಾಡುವೆನು', ಮೊದಲ ಆವೃತ್ತಿಯ "ಲಿಟ್ಲ್ ಚಾಂಪ್ಸ್" ! ಹಿಂದಿಯ ಫರಾ ಕಾನ್, ಅನು ಮಲ್ಲಿಕ್ ನಡೆಸಿಕೊಡುವ ರಾಷ್ಟ್ರೀಯ ಮಟ್ಟದ ಟ್ಯಾಲೆಂಟ್ ಶೋ ! ಉದಾಹರಣೆಗಳು ಇಲ್ಲದಿಲ್ಲ.
ಅಷ್ಟೇಕೆ, ತಮಿಳು ಚಾನಲ್ ಗಳಿಂದ ಪ್ರವರ್ಧಮಾನಕ್ಕೆ ಬಂದ ಬದುಕ ಸರಣಿಗಳ ಮೆಲುಕು ಒಂದು ಮಿತಿಯ ವರೆಗೆ ಓಕೆ. ಬದುಕು ಜಟಕಾ ಬಂಡಿ, ವಿಧಿ ಅದರ ಸಾಹೇಬ ಅಂತ ವೇದಾಂತ ಹೇಳುವ ಕಾಲ ಹೋಗಿ ಜೀವನ ಕಥೆ ಮಾತ್ರ ಅಲ್ಲ ಥ್ರಿಲ್, ಷಾಕ್ ಕೂಡಾ ಇರುತ್ತೆ ಅಂತ ಮತ್ತೊಂದು ಕಥೆ ಹೇಳುವ ಆದರ್ಶವೂ(?) ಜೊತೆಗಿದೆ.

**********
ಥ್ರಿಲ್ ಕೊಡುತ್ತೆ ಎಂದರೆ ಏನೂ ಮಾಡಲು ಸಿದ್ಧರಿದ್ದಾರೆ ಇಂದಿನ ಟಿವಿ ಮಂದಿ ! ಜೊತೆಗೆ ಟಿ‌ಆರ್‌ಪಿ ಕೊಡುತ್ತದೆ ಎಂದರೆ ಬಿಟ್ಟಾರೆಯೇ ! ಕೊನೆಗೆ ಧನಾರ್ಜನೆ, ಪ್ರಸಿದ್ಧಿ- ಗಳ ಭರಾಟೆಯಲ್ಲಿ ಮಾಡುವುದು ಮಾನವೀಯ ಮೌಲ್ಯಗಳ ಮಾರಾಟವಾದರೂ ಅಡ್ಡಿಯಿಲ್ಲ. ಒಂದು ರೀತಿಯ ಕಮರ್ಷಿಯಲ್ ಭಯೋತ್ಪಾದನೆ ! ; ಇದು ಖಂಡನಾರ್ಹವಷ್ಟೇ ಅಲ್ಲ ಶಿಕ್ಷಾರ್ಹವೂ ಹೌದು ಎಂದು ತಿಳಿದಿದ್ದರೂ, ನಾಗರಿಕ ಪ್ರಜ್ಞೆ ಮತ್ತು ಸಾಮಾಜಿಕ ಕಳಕಳಿಗಳು, ಸಾರ್ವಜನಿಕ ಹೊಣೆಗಾರಿಕೆ, ಸಮಷ್ಟಿ ನಿಲುವಗಳು ದಿನದಿಂದ ದಿನಕ್ಕೆ ನಲುಗುತ್ತಿವೆ. !

ಮಾಧ್ಯಮಗಳಿಗೆ ಮಾಹಿತಿ, ಶಿಕ್ಷಣ, ಮನರಂಜನೆ- ಈ ಮೂರು ಮುಖ್ಯ ವಿಭಾಗಗಳನ್ನು ಅರ್ಥ ಮಾಡಿಕೊಂಡು ವ್ಯತ್ಯಾಸ ಕಂಡುಕೊಳ್ಳಲಿಕ್ಕೆ ಬಂದರೂ ಸಾಕು, ತಾವು ನಿರ್ವಹಿಸಬೇಕಾದ ಜವಾಬ್ದಾರಿ ಅರ್ಥವಾಗುತ್ತದೆ. ಅದನ್ನು ಬಿಟ್ಟು 'ಜನರು ಚೇಂಜ್ ಕೇಳುತ್ತಾರೆ'ಎಂದು ಮನಸೋ ಇಚ್ಚೆ ಕೊಡುತ್ತ ಹೋದರೆ ಯಾವುದು ಆರೋಗ್ಯದ ಅಗತ್ಯವೋ ಅದು ಮರೆಯಾಗುತ್ತವೆ. ಬರೀ ಜಂಕ್ ಫುಡ್ ಗಳಾಗಬೇಕೆ ಮಾಧ್ಯಮ ????

*************

ಭಾರತೀಯ ನೃತ್ಯಕಲೆಗಳಲ್ಲಿ ಜೀವನದ ಅನುಸಂಧಾನ

ಭಾರತೀಯನೃತ್ಯಕಲೆಗಳ ಅವಿಚ್ಛಿನ್ನ, ಅವಿನಾಶಿ ಪರಂಪರೆ ಜಗತ್ತಿನ ಉಳಿದೆಲ್ಲಾ ನೃತ್ಯಕಲೆಗಳಿಗೊಂದು ಆದರ್ಶ. ಅದು ಶಾಸ್ತ್ರೀಯವಾಗಿರಲಿ, ಅಥವಾ ಜಾನಪದವಾಗಿರಲಿ; ಜೀವನದ ಭಾರತೀಯ ಮುಖಗಳನ್ನು ಸುಂದರವಾಗಿ ನಿರೂಪಿಸುವುದರೊಂದಿಗೆ ಭಾವಪ್ರಚೋದಿಸುವ ಈ ನೃತ್ಯ ಮಾಧ್ಯಮ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಿಗಷ್ಟೆ ಅಲ್ಲ, ಬದುಕಿನ ಹಲವು ಆಯಾಮಗಳಿಗೆ ತನ್ನನ್ನು ವಿಸ್ತರಿಸಿಕೊಂಡಿದೆ. ಭಾರತೀಯ ಶಾಸ್ತ್ರೀಯ ನೃತ್ಯದ ಪ್ರಸ್ತಾಪ ಋಗ್ವೇದದಲ್ಲಿ ಗುರುತಿಸಲಾಗಿದ್ದರೂ, ಋಗ್ವೇದಕ್ಕಿಂತಲೂ ಬಹಳಷ್ಟು ಪ್ರಾಚೀನವಾದುದು ಎಂಬುದನ್ನು ಕಂಡುಕೊಳ್ಳಬಹುದು. ಋಗ್ವೇದದಿಂದ ಪಠ್ಯವನ್ನು, ಯರ್ಜುವೇದದಿಂದ ಅಭಿನಯವನ್ನು, ಸಾಮವೇದದಿಂದ ಸಂಗೀತವನ್ನು, ಅಥರ್ವಣ ವೇದದಿಂದ ರಸವನ್ನು ತೆಗೆದು ಐದನೇಯ ವೇದವನ್ನಾಗಿ ನಾಟ್ಯವೇದವನ್ನು ರಚಿಸಲಾಯಿತು ಎಂದು ಪ್ರಾಚೀನ ಗ್ರಂಥಗಳು ಹೇಳಲ್ಪಟ್ಟಿವೆಯಾದರೂ, ಇಂತಹ ದೈವಿಕ ಸ್ಪರ್ಶ ಕೇವಲ ಪೂಜ್ಯತಾಭಾವನೆಗೆ ಮಾತ್ರ ಮೀಸಲಾಗಿರದೆ, ರಕ್ಷಣಾತ್ಮಕ ಚೌಕಟ್ಟನ್ನು, ಶಾಸ್ತ್ರೀಯ ಪರಂಪರೆಯನ್ನು ಕಾಯ್ದುಕೊಳ್ಳಲು ಮೂಡಿರಬಹುದೆಂದು ಇತಿಹಾಸತಜ್ಞರ ಅಭಿಪ್ರಾಯ. ಏನೇ ಇರಲಿ, ಭಾರತೀಯ ನೃತ್ಯಕಲೆಯು ಚಿತ್ರಕಲೆಯ ರೇಖಾವಿನ್ಯಾಸ, ವರ್ಣವೈಭವ, ಶಿಲ್ಪಕಲೆಯ ರೂಪ-ಲಾವಣ್ಯ, ನಟನ ದೇವನಾನುಕರಣ, ಸಂಗೀತ-ರಾಗ-ಲಯ-ಪದವಿನ್ಯಾಸ, ಕವಿಯ ಭಾವನಾವಿಲಾಸದ ಸಂಗಮವಷ್ಟೆ ಆಗಿರದೆ ಜೀವನದ ಜೊತೆಗಿನ ಅನುಸಂಧಾನವೂ ಹೌದು ಎಂಬುದನ್ನು ಸ್ಪಷ್ಟವಾಗಿ ನಿರೂಪಿಸುತ್ತದೆ. ಈ ಎಲ್ಲಾ ಭಾರತೀಯ ನೃತ್ಯಕಲೆಗಳಿಗೆ ಭರತಮುನಿಯ ಶಾಸ್ತ್ರವೇ ಆಧಾರವೆಂದೇ ನಂಬಲಾಗಿದ್ದರೂ, ಅದಕ್ಕೂ ಹಿಂದೆ ಶಿಲಾಲಿ, ಕೃಶಾಸ್ವರು ನಟಸೂತ್ರ ಗಳನ್ನೇ ರಚಿಸಿದ್ದರು ಎಂದು ಪಾಣಿನಿಯ ವ್ಯಾಕರಣ ತಿಳಿಸುತ್ತದೆ. ಆದರೆ ಲಭ್ಯವಿರುವ ಗ್ರಂಥಗಳ ಪೈಕಿ ಭರತನ ನಾಟ್ಯಶಾಸ್ತ್ರ ಅತೀ ಪ್ರಾಚೀನ ಮತ್ತು ಎಲ್ಲಾ ರಂಗ ಕಲೆಗಳಿಗೆ ಮಾತೃ ಗ್ರಂಥ ಎಂದೇ ನಿರ್ಧರಿಸಲ್ಪಟ್ಟಿದೆ. ಭರತ ಎನ್ನುವ ಐತಿಹಾಸಿಕ ವ್ಯಕ್ತಿ ಇದ್ದನೇ? ಇದ್ದರೆ ಯಾರು? ಎಂಬ ಜಿಜ್ಞಾಸೆ ಇಂದಿಗೂ ಸಿದ್ಧಾಂತಕ್ಕೆ ಸಿಲುಕಿಲ್ಲ. ಆದರೆ ಭರತಮುನಿಯ ಶಾಸ್ತ್ರವನ್ನು ಅವಲಂಬಿಸಿ ಬೆಳೆದು ಬಂದ ನಾಟ್ಯಸಂಪ್ರದಾಯಗಳೆಲ್ಲವೂ ಭರತನಾಟ್ಯವೇ ಆಗಿದೆ. ಹಾಗಾದರೆ ಕೇವಲ ಇಂದಿನ ಪ್ರಚಲಿತ, ಭರತನಾಟ್ಯ ಪದ್ಧತಿಯೊಂದೇ ಭರತನ ಕೊಡುಗೆ ಎನ್ನಲಾಗದು. (ಸಾದಿರ್, ದಾಸಿಆಟ್ಟಂ, ಕೇಲಿ, ನಿಲಂಬು, ದಾಸೀಕುಣಿತ ಎಂದು ಕರೆಯಲಾಗುತ್ತಿದ್ದ ನೃತ್ಯ ಪದ್ಧತಿ ಪುನರುಜ್ಜೀವನಗೊಂಡು ಭರತನಾಟ್ಯ ಎಂದು ಕರೆಸಿಕೊಂಡಿತಷ್ಟೆ ವಿನಃ; ಇಂದಿಗೂ ವಿಮರ್ಶಕರು ಭರತನೃತ್ಯ ಸಾದಿರ್ ಎಂದೇ ಕರೆಯಲು ಒತ್ತಾಯಿಸುತ್ತಿದ್ದಾರೆ, ಭರತನಾಟ್ಯವೆಂಬುದು ಶಾಸ್ತ್ರೀಯ ನೃತ್ಯದ ಒಂದು ಬಗೆ. ಅಷ್ಟೆ!)ಆದರೆ, ಇಂದಿನ ಹಲವು ಯುವ ಮನಸ್ಸುಗಳು, ಆಧುನಿಕ ಪ್ರೇರೇಪಿತ ನಿಲುವುಗಳು ಶಾಸ್ತ್ರೀಯ ನೃತ್ಯವನ್ನು ಅಸಡ್ಡೆಯಿಂದ ಕಾಣುವುದು, ಅದರಲ್ಲಿ ನವೀನವೆನಿಸುವ ಅತಿರೇಕದ ಬದಲಾವಣೆಗಳನ್ನು, ಪ್ರಯೋಗಗಳನ್ನು ಕಲ್ಪಿಸುವುದು ಶಾಸ್ತ್ರೀಯ ಲಕ್ಷಣಗಳಿಗೆ ಕೊಡಲಿ ಪೆಟ್ಟು ಕೊಡುತ್ತಿದೆ. ಈ ನಿಟ್ಟಿನಿಂದ ನಾವು ಅರ್ಥ ಮಾಡಿಕೊಳ್ಳಬೇಕಾದುದು ಒಂದೇ!... ಶಾಸ್ತ್ರೀಯವಾಗಿರುವುದರಿಂದಲೇ ಅದು ಶಾಸ್ತ್ರೀಯ ನೃತ್ಯ. ಆದರೆ ಅಷ್ಟು ಮಾತ್ರಕ್ಕೆ ಅದರ ವೈಭವೀಕರಣವೂ ಸಲ್ಲದು. ಹಾಗೆ ನೋಡಿದರೆ ಭಾರತೀಯ ನೃತ್ಯ ಪರಂಪರೆಗಳಲ್ಲಿ ಇಂದಿಗೂ ೧೫೦೦ರಷ್ಟು ಜಾನಪದ ನೃತ್ಯದ ಸಂಪತ್ತು ಇದೆ. ಅದರಲ್ಲಿನ ಧಾರ್ಮಿಕ ಅಂಶ ಕಡಿಮೆಯಾಗುತ್ತಿದ್ದರೂ, ಜಾನಪದದ ವರ್ಣವೈವಿಧ್ಯ, ಸರಳತೆ, ಸ್ಫೂರ್ತಿ, ಲಯ-ಗತಿ, ಸಾತ್ವಿಕ ಆನಂದದಿಂದಾಗಿ ತೇಜಸ್ಸು ಕಡಿಮೆಯಾಗಿಲ್ಲ. ಜನಜೀವನದ ಪ್ರಮುಖ ಅಂಗವಾಗಿ ಸಂಸ್ಕೃತಿಯ ಅವಿಭಾಜ್ಯ ಅಂಶವಾಗಿ, ಆಕರ್ಷಣೀಯವಾಗಿರುವ ಇಂತಹ ನೃತ್ಯಗಳು ವೈವಿಧ್ಯತೆ, ಭಿನ್ನತೆ, ವ್ಯತ್ಯಾಸಗಳನ್ನು ತನ್ನೊಡಲಲ್ಲಿ ಕಾಯ್ದುಕೊಂಡು ರಂಜನೀಯವಾಗಿದೆ. ಇಂತಹ ಭಿನ್ನತೆಗಳು ಭಾರತೀಯ ಸಂಸ್ಕೃತಿಯ ಏಕತೆಯ ಮೂಲರೂಪ. ಅಂತೆಯೇ ಒಂದೊಂದು ಪ್ರಾಂತ್ಯದ ಜನಜೀವನ, ಲಕ್ಷಣ, ಸ್ಥಳೀಯ ಸ್ಥಿತಿಗತಿ, ಅವಶ್ಯಕತೆಗಳ ಫಲವಾಗಿ ಆಯಾಯ ಪ್ರದೇಶದಲ್ಲಿ ಶಾಸ್ತ್ರೀಯ ನೃತ್ಯಗಳು ಮೈಗೂಡಿದವು. ಕೂಚಿಪುಡಿ, ಕಥಕ್ಕಳಿ, ಮೋಹಿನಿ ಆಟ್ಟಂ, ಮಣಿಪುರಿ, ಕಥಕ್, ಅಷ್ಟೇಕೆ ನಾಟ್ಯಶಾಸ್ತ್ರವನ್ನೇ ಅವಲಂಬಿಸಿರುವ ಕರ್ನಾಟಕದ ಯಕ್ಷಗಾನ, ಅಸ್ಸಾಮಿನ ಚೌ, ಸತ್ರಿಯಾ, ಕೊರವಂಜಿ, ಭಾಗವತಮೇಳ ನೃತ್ಯಗಳು ಶಾಸ್ತ್ರೀಯ ನೃತ್ಯಗಳೇ ಸರಿ! ಜೊತೆಗೆ ಸಾಮಾಜಿಕ, ಸಮಕಾಲೀನ ವಸ್ತು ನಿರೂಪಕಗಳು ನೃತ್ಯರೂಪಕವೆಂಬ ಆಕರ್ಷಕ ವಿಧಾನದ ಮೂಲಕ ಅಸ್ತಿತ್ವ ಪಡೆದುಕೊಂಡು ಶಾಸ್ತ್ರೀಯ ಶೈಲಿಯೆನಿಸಿದವು. ಹಾಗೆ ನೋಡಿದರೆ ಉತ್ತರ ಭಾರತಕ್ಕೆ ಪರರ ಆಕ್ರಮಣದ ಫಲವಾಗಿ ಅಲ್ಲಿನ ನೃತ್ಯಕಲೆಗಳು ಹೆಚ್ಚಾಗಿ ಪರಕೀಯರ ಪ್ರಭಾವ ಪಡೆದುಕೊಂಡಿವೆ. ದಕ್ಷಿಣ ಭಾರತದ ನೃತ್ಯಸಂಪ್ರದಾಯಗಳು ಸಾಕಷ್ಟು ಮೂಲ ಸಂಪ್ರದಾಯ ಪರಿಶುದ್ಧತೆಯನ್ನು ಉಳಿಸಿಕೊಂಡಿದೆ.ಮೋಕ್ಷಕ್ಕೆ ಸಾಧನ, ಪ್ರಾರ್ಥನಾ ಸ್ವರೂಪ ಎಂದೆನಿಸಿಕೊಂಡಿರುವ ಇಂತಹ ಶಾಸ್ತ್ರೀಯ, ಸಾಂಪ್ರದಾಯಿಕ ನೃತ್ಯಗಳು ಜೀವನ ಮೌಲ್ಯಗಳನ್ನು ಪುನರ್‌ವಿಮರ್ಶಿಸುವಂತವು. ಇಂದಿನ ಆಧುನಿಕ ಯುಗದಲ್ಲೂ ಎಲ್ಲಾ ದೃಷ್ಟಿಯಿಂದಲೂ ಜನಜೀವನಕ್ಕೆ ಅಗತ್ಯವೆನಿಸುವಂತವು, ಕೆಲವೊಂದು ನೃತ್ಯಗಳು ಆಯಾಕಾಲದ ಪ್ರಗತಿಗೆ ಸಾಕ್ಷಿಯಾಗಿ, ತನ್ನ ಬದುಕಿನ ಯುಗವನ್ನು ಬಿಂಬಿಸುತ್ತವೆ. ಉದಾ: ಏಕವ್ಯಕ್ತಿ ಯಕ್ಷಗಾನದ ಪ್ರಸ್ತುತತೆ. ಅಂತವು ಆಯಾಕಾಲದ ಅವಶ್ಯಕತೆ, ವೈವಿಧ್ಯತೆಗಳಿಗೆ ಅಗತ್ಯವೂ ಕೂಡಾ!..ಅಷ್ಟಕ್ಕೂ ಭಾರತೀಯ ಸಂಪ್ರದಾಯವೆಂಬುದು ಶಿಸ್ತಿನ ಕಟ್ಟುಪಾಡುಗಳಿಂದ ಕೂಡಿದ್ದಲ್ಲ ಸ್ವತಃ ಭರತಮುನಿಯೇ ತನ್ನ ಗ್ರಂಥದಲ್ಲಿ ಪಾಂಡಿತ್ಯ, ಅನುಭವ, ಲೋಕಜ್ಞಾನದಿಂದ ನೃತ್ಯದ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬಹುದು ಎಂದಿದ್ದಾನೆ. ಹಾಗಾಗಿ ಸ್ವಾತಂತ್ರ್ಯದ ಅಭಿವ್ಯಕ್ತಿ ಭಾರತೀಯ ಕಲೆಗಳ ಮೂಲಸ್ರೋತವೂ ಹೌದು. ಜೊತೆಗೆ ಪರಂಪರೆಯ ರಕ್ಷಣೆ, ಪ್ರಗತಿಯ ಸೂಕ್ಷ್ಮಗಳನ್ನು ಅರಿತುಕೊಳ್ಳಬೇಕಾದ್ದು ನಮ್ಮ ಕರ್ತವ್ಯವೂ ಕೂಡಾ. ಅಷ್ಟಕ್ಕೂ ಸ್ವಾತಂತ್ರ್ಯವೆಂದರೆ ಸ್ವ‌ೇಚ್ಛೆಯಲ್ಲವಲ್ಲ!ಭಾರತೀಯ ನೃತ್ಯಗಳೂ ಹಲವು ಸ್ಥಿತ್ಯಂತರಕ್ಕೆ ಒಳಪಟ್ಟಿವೆ. ಸ್ವಾತಂತ್ರ್ಯಾ ನಂತರವಂತೂ ಅಂಟಿದ್ದ ಕಳಂಕಗಳ ಬೇಡಿಯನ್ನು ಸ್ವಲ್ಪ ಸ್ವಲ್ಪವಾಗಿಯೇ ಬಿಡಿಸಿಕೊಳ್ಳುತ್ತಾ ಜನಾದರಣೆ, ಪ್ರೆತ್ಸಾಹವನ್ನು ಪಡೆದುಕೊಂಡಿವೆ. ಆದರೆ ನಾಗರೀಕತೆಯ, ಪರಕೀಯತೆಯ ಗಾಳಿಗೆ ಕಲುಷಿತಗೊಳ್ಳದಂತೆ ಪರಿಶುದ್ಧವಾಗಿ ಉಳಿಸಿಕೊಳ್ಳುವುದೂ ಸಂಸ್ಕೃತಿಯ ಬಗೆಗೆ ನಾವು ನಿರ್ವಹಿಸಬೇಕಾದ ಕರ್ತವ್ಯ.ಪ್ರಸ್ತುತ ಕಾಲದಲ್ಲಿ ನೃತ್ಯಶೈಲಿಯನ್ನು ಕರಗತ ಮಾಡಿಕೊಳ್ಳಲು ಬೇಕಾದ ಸಂಯಮ, ಶ್ರದ್ಧೆ, ನಿಷ್ಟೆ, ಏಕಾಗ್ರತೆ, ಅರ್ಪಣಾಭಾವಗಳು ಮರೆಯಾಗಿ ಅವಕಾಶವಾದಿಗಳು, ಅಪ್ರಬುದ್ಧರು ಅಟ್ಟಣಿಗೆ ಏರುತ್ತಾ ನೃತ್ಯಸಂಪ್ರದಾಯಕ್ಕೆ ಹೊಸತೆನಿಸುವ ಕಳಂಕವನ್ನು ಅಂಟಿಸುತ್ತಿದ್ದಾರೆ. ಎಲ್ಲಾ ನೃತ್ಯಶೈಲಿಗಳಲ್ಲೂ ನಿಪುಣರೆಂದು ತೋರಿಸಿಕೊಳ್ಳುವ ಆಶೆಯಲ್ಲಿ ಪರಂಪರೆಯನ್ನು ಮರೆಯುತ್ತಿರುವುದಲ್ಲದೆ, ಪೌರಾತ್ಯದ ಬೆರಕೆ, ವ್ಯಾಪಾರೀಕರಣ ನೃತ್ಯಶೈಲಿಯ ಪ್ರಮುಖ ಸಮಸ್ಯೆ ಮತ್ತು ಸವಾಲು.ಆದರೆ ಇಂತಹ ತಾಳ್ಮೆ ಎಲ್ಲದರಂತೆ ನೃತ್ಯರಂಗದಲ್ಲೂ, ಮುಂದುವರಿದರೆ ಶಾಸ್ತ್ರೀಯ-ಸಂಪ್ರದಾಯ-ಜನಪದಗಳ ಅಸ್ತಿತ್ವವಷ್ಟೆ ಅಲ್ಲ. ನಮ್ಮ ಅಸ್ತಿತ್ವವನ್ನು ಅದರೊಂದಿಗೆ ಕಳೆದುಕೊಳ್ಳಬೇಕಾದೀತು. ಕಲೆಯ ಪ್ರಗತಿ ಪರಂಪರೆಯ ಸುಭದ್ರ ಬುನಾದಿಯ ಮೇಲೆ ಭಾರತೀಯವಾಗಿ ಮುಂದುವರಿದರಷ್ಟೆ ಅದು ಅರ್ಥಪೂರ್ಣ, ಪರಿಪೂರ್ಣ, ಅವಿನಾಶಿ... ಅಲ್ಲವೇ?
(ಚೈತ್ರರಶ್ಮಿ ಪತ್ರಿಕೆಯ ೫೦ ನೆ ಸಂಚಿಕೆಯಲ್ಲಿ ಪ್ರಕಟವಾದ ಲೇಖನ )

ಉಪನ್ಯಾಸ

ನೂಪುರ ಭ್ರಮರಿಯ ಬಳಗವು ಭರತನಾಟ್ಯ, ನೃತ್ಯಶೈಲಿಗಳಿಗೆ ಸಂಬಂಧಿಸಿದಂತೆ ಅರಿವಿನ ವಿಸ್ತರಣೆಗಾಗಿ೧. ಭಾರತೀಯ ಶಾಸ್ತ್ರೀಯ ನೃತ್ಯಗಳು ಮತ್ತು ಜೀವನಾನುಸಂಧಾನ೨. ಭರತನಾಟ್ಯದ ಆಂಗಿಕಾಭಿನಯ೩. ನಾಯಿಕಾ-ನಾಯಕಾ ಭಾವ೪. ಹಸ್ತಮುದ್ರಾ ವಿನ್ಯಾಸಗಳು ಮತ್ತು ಸಂಶೋಧನೆ೫. ನೃತ್ಯ ಇತಿಹಾಸ ಮತ್ತು ಭರತನಾಟ್ಯದ ಪುನರುತ್ಥಾನ೬. ನೃತ್ಯ ಗ್ರಂಥಗಳು ಮತ್ತು ಅವುಗಳೆಡೆಗೆ ಸಮಗ್ರ ದೃಷ್ಠಿಮೇಲ್ಕಂಡ ವಿಚಾರಗಳನ್ನೂ ಒಳಗೊಂಡಂತೆ ವಿವಿಧ ವಿಷಯಗಳಲ್ಲಿ ಉಪನ್ಯಾಸಗಳನ್ನು ನೀಡುತ್ತಿದ್ದು, ಉಪನ್ಯಾಸ ಕಾರ್ಯಕ್ರಮಗಳಿಗಾಗಿ ಆಸಕ್ತರು ಪತ್ರಿಕೆಯ ಸಂಪಾದಕರನ್ನು ಸಂಪರ್ಕಿಸಬಹುದು. ದೂ : ೯೯೬೪೧೪೦೯೨೭

ಭಾರತೀಯ ನೃತ್ಯ ಕಲೆ : ಭವಿತವ್ಯಕ್ಕೊಂದು ಆಸರೆ

ದೇಶವೊಂದರ ಸಾಂಸ್ಕೃತಿಕ ಔನ್ನತ್ಯವನ್ನು, ನಾಗರೀಕತೆಯ ವ್ಯಾಪ್ತಿಯನ್ನು ಆ ದೇಶದ ಪ್ರದರ್ಶಿತ ಕಲೆಯಿಂದ ಅರಿತುಕೊಳ್ಳಬಹುದು. ಅಷ್ಟಕ್ಕೂ ದೇಶವೊಂದರ ಕಲೆಗಳು ಬೆಳೆಯುವುದೇ ಅಲ್ಲಿನ ಆಧ್ಯಾತ್ಮಿಕ, ನಾಗರೀಕ, ಸಾಂಸ್ಕೃತಿಕ ಅಗತ್ಯ ಮತ್ತು ಸತ್ಯಗಳನ್ನು ಕಂಡುಕೊಂಡು. ಹಾಗಾದ್ದರಿಂದಲೇ ಭಾರತದ ಭಾಷೆಗಳು ನಾಗರೀಕತೆಯ ಉಗಮದಿಂದ ಇಲ್ಲಿಯವರೆವಿಗೂ ಶಾಬ್ದಿಕವಾಗಿಯಷ್ಟೇ ಅಲ್ಲದೆ, ಅಶಾಬ್ದಿಕವಾಗಿಯೂ ಪ್ರಬಲವಾಗಿ ತನ್ನ ಅಸ್ತಿತ್ವವವನ್ನು ವಿವಿಧ ರೂಪಗಳಲ್ಲಿ ಉಳಿಸಿಕೊಂಡು ಬಂದಿದೆ. ಜೊತೆಗೆ ಭಾಷೆಯು ತನಗೆ ಬೇಕಾದ ಸನ್ನಿವೇಶಗಳನ್ನು, ಸಂಕೇತಗಳನ್ನು ಆವಾಹಿಸಿಕೊಂಡಿದ್ದರಿಂದಾಗಿ ಅದಕ್ಕೆ ಪೂರಕವಾದ ಅಪ್ರಜ್ಞಾಪೂರ್ವಕ ದೇಹಭಾಷೆಗಳ ಬೆಳವಣಿಗೆಯಾಯಿತು. ಅಂತಹ ಅಂಗಭಂಗಿಗಳನ್ನು ಪರಿಣಾಮಕಾರಿಯಾಗಿ ಬಿಂಬಿಸಿ ಅತ್ಯಾಕರ್ಷಕವಾಗಿ ಮನರಂಜನೆಯೊಂದಿಗೆ ಮಾಹಿತಿ, ಶಿಕ್ಷಣವನ್ನೂ ಕೊಂಡೊಯ್ಯುವ ಕಾರ್ಯ ನೃತ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಲೇ ಬಂದಿದೆ.
ನೃತ್ಯಕಲೆ ತಾಳ-ಅಭಿನಯ-ಅಂಗವಿನ್ಯಾಸಗಳ ಸಮ್ಮಿಳಿತ ಕಲೆ, ಆದ್ದರಿಂದ ಕೇವಲ ಶ್ರವ್ಯದಿಂದ ಮಾತ್ರವಲ್ಲದೆ ದೃಶ್ಯದಿಂದ ಮಾನವನ ಮನಸ್ಸಿನ ಮೇಲೆ ಆಳವಾಗಿ ಪರಿಣಾಮ ಬೀರಬಲ್ಲ ಕಲೆ ನೃತ್ಯ. ನೃತ್ಯ ಕಲೆಯು ಸಾಹಿತ್ಯಿಕವಾಗಿ, ಆಧ್ಯಾತ್ಮಿಕವಾಗಿ, ನೈತಿಕವಾಗಿ, ಸಾಂಸ್ಕೃತಿಕವಾಗಿ ಮಾತ್ರವಲ್ಲದೆ ಸಾಮಾಜಿಕವಾಗಿ ಒಂದು ಆರೋಗ್ಯಯುತ ಮನಸ್ಸುಗಳನ್ನು ಸೃಷ್ಠಿ ಮಾಡಬಲ್ಲುದು. ಜಾತಿಮತಗಳ ಭೇದವಿಲ್ಲದೆ, ಮೇಲುಕೀಳು ಭಾವನೆಯಿಲ್ಲದೆ ಈ ಕಲೆಯನ್ನು ಕಲಿಯಲು, ನೋಡಲು ಸಾಧ್ಯ. ಅದರಲ್ಲೂ ಅದರ ಇತಿಹಾಸ, ಭವ್ಯತೆ, ಶಾಸ್ತ್ರೀಯ ಚೌಕಟ್ಟು, ಜಾನಪದೀಯ ಹಿನ್ನಲೆ, ವೇಷಭೂಷಣಗಳು ಆಯಾಯ ಸಮಾಜದ ಗುಣ-ಅವಗುಣಗಳನ್ನು ತಿಳಿಸುವ ಮಾರ್ಗಸೂಚಿಯೂ ಹೌದು. ಅದರ ತಾಳ, ಗಾನ, ಅಭಿನಯ, ಲಯ, ಮಾತು ಇತ್ಯಾದಿ..,ಒಂದೇ ಸಮಯದಲ್ಲಿ ಹಲವು ಭಾವಗಳನ್ನು ವಿಷಯಗಳನ್ನು ತಿಳಿಯಪಡಿಸುವ ಸಾಧನ. ಹಾಗೆಯೇ ಸರಳ ಸುಂದರ ರೀತಿಯಲ್ಲಿ ಸಮಾಜದ ಓರೆಕೋರೆಗಳ ಬಗ್ಗೆ ತಿಳಿವಳಿಕೆಯಿತ್ತು, ತಿದ್ದುವ ಕೆಲಸ ಈ ಕಲೆಯಿಂದ ಸಾಧ್ಯ.
ಹಾಗಾಗಿ ನೃತ್ಯವು ಮಾನವನ ನೀತಿ, ರೀತಿ, ತತ್ವ, ಸರಸ-ಸಂಭಾಷಣೆ, ಪ್ರಾರ್ಥನೆ, ನಿಲುವು…ಹೀಗೆ ಹತ್ತು ಹಲವು ವಿಷಯಗಳನ್ನು ಸರಳ-ಸುಂದರ ರೀತಿಯಲ್ಲಿ ಮನಸ್ಸಿಗೆ ತಲುಪಿಸಲು ಸಾಧ್ಯವಾಗಿದೆ. ಜೊತೆಗೆ ಭಾರತದ ಉದ್ದಗಲಕ್ಕೂ ಇರುವ ಪ್ರಾಚೀನ ದೇವಾಲಯಗಳಲ್ಲಿ ನೃತ್ಯಭಂಗಿಗಳ ಶಿಲ್ಪಗಳನ್ನು ಅಸಂಖ್ಯಾತವಾಗಿ ಕಾಣಬಹುದಾಗಿದೆ. ಶಿಲ್ಪದಲ್ಲಿನ ಸೂತ್ರಗಳಿಗೆ ಸಮವಾಗಿ ನಾಟ್ಯಭಂಗಿಗಳು ಪ್ರೇರಿತವಾಗಿವೆ ಎನ್ನಲಾಗಿದೆ. ಈ ಎಲ್ಲಾ ಶಿಲ್ಪಗಳು ಮಾನವ ಜೀವನದ ಸಾಮಾನ್ಯ ವಿಷಯಗಳೊಂದಿಗೆ ಹಲವು ಭಾವಗಳನ್ನು, ಅನುಭಾವಗಳನ್ನು, ವಿಷಯಗಳನ್ನು, ಲೌಕಿಕ ರೀತಿನೀತಿಗಳನ್ನು ಪ್ರತಿಪಾದಿಸಿರುವುದನ್ನು ಕಾಣುತ್ತೇವೆ.
ಜೀವನ ಸಂಸ್ಕೃತಿಯಲ್ಲಿ ಪ್ರತೀ ಸನ್ನಿವೇಶವೂ ಒಂದು ನಾಟ್ಯದ ವಸ್ತುವಾಗಿ ಕಾಣಿಸುವುದು ನಾಟ್ಯದ ಹೆಚ್ಚುಗಾರಿಕೆ. ಸಾಹಿತ್ಯ, ಶಿಲ್ಪಕಲೆ, ಪುರಾಣ, ಸಂಗೀತ, ರಾಜಮನೆತನ, ಸಾಮಾಜಿಕ ಜೀವನ ಹೀಗೆ ಪ್ರತಿಯೊಂದರಲ್ಲೂ ನಾಟ್ಯದ ಕೊಡುಗೆ ಮಹತ್ವ ಪೂರ್ಣವಾಗಿ ಗೋಚರಿಸುತ್ತದೆ. ಆ ಮೂಲಕ ನೃತ್ಯ ತಾನೊಂದು ಭಾಷಾ ಮಾಧ್ಯಮ ಎಂಬುದನ್ನೂ ದೃಢಪಡಿಸುತ್ತದೆ.
ಕ್ರಿ.ಪೂ. ೨ನೇ ಶತಮಾನದಲ್ಲಿ ರಚಿತವಾಯಿತೆನಿಸುವ ಭರತಮುನಿಯ ನಾಟ್ಯಶಾಸ್ತ್ರದ ಆಧಾರದಲ್ಲಿ ಭಾರತದಲ್ಲಿ ಅನೇಕ ನೃತ್ಯ ಪ್ರಕಾರಗಳು ರೂಪುಗೊಂಡಿತಾದರೂ, ಅದಕ್ಕೂ ಮುಂಚೆ ಪಾಣಿನಿ, ಕೃಶಾಶ್ವರು ಬರೆದ ಸೂತ್ರಗಳಿತ್ತೆನ್ನಲಾಗಿದೆ. ಆದರೆ ಅವೆಲ್ಲವನ್ನೂ ಒಂದೇ ಸೂತ್ರದಲ್ಲಿ ಹಿಡಿದಿಡುವ ಕೆಲಸ ಭರತಮುನಿಯಿಂದಾಯಿತೆನ್ನಬಹುದು. ನಾಲ್ಕು ವೇದಗಳಿಂದ ಪಠ್ಯ, ಗಾನ, ರಸ, ಲಯ ಮುಂತಾದವುಗಳನ್ನು ಆರಿಸಿಕೊಂಡು ಐದನೇಯ ವೇದ ನಾಟ್ಯವೇದವನ್ನು ರಚಿಸಿದನೆಂಬುದು ಐತಿಹ್ಯ.
ಕ್ರಮೇಣ ನಾಟ್ಯಶಾಸ್ತ್ರವನ್ನು ಆಧರಿಸಿ ಪ್ರಾಂತೀಯ ಜನಜೀವನ- ಸಂಸ್ಕೃತಿಯ ಪ್ರಭಾವದಿಂದ, ವಿವಿಧ ರೀತಿಯಲ್ಲಿ ನೃತ್ಯ ಪ್ರಕಾರಗಳು ಸೃಜನೆಯಾದವು. ಹಾಗಾಗಿ ನಾಟ್ಯಕಲೆ ಹರಿದುಬಂದ ಕಥೆಯಲ್ಲಿ ಭರತನು ಕಾವ್ಯದೃಷ್ಟಿ, ಧರ್ಮದೃಷ್ಟಿ ರಸದೃಷ್ಟಿಗಳನ್ನು ಕೊಡುವುದಷ್ಟೇ ಅಲ್ಲದೆ ಲೌಕಿಕ ಪ್ರಜ್ಞೆಯನ್ನು ನೀಡಿದ್ದಾನೆ. ಅಷ್ಟು ಮಾತ್ರವಲ್ಲದೆ, ಭಾರತೀಯ ಪರಿಭಾಷೆಯಲ್ಲಿ ಭರತನು ನೀಡಿದ ಕೊಡುಗೆಗಳ ಪೈಕಿ ಸಾಧಾರಣೀಕರಣ ಎನ್ನುವ ಸಂವಹನ ನೀತಿ ತತ್ವವು ಪ್ರಪಂಚದ ಸಂವಹನ ಕ್ಷೇತ್ರಕ್ಕಿತ್ತ ಮಹತ್ವದಕಾಣಿಕೆ. ವೈಯಕ್ತಿಕ ಸಾಧ್ಯತೆಗಳಿಂದ ಅನಂತತೆಗೆ, ವೈವಿಧ್ಯತೆಗಳಿಂದ ಏಕತೆಗೆ ಕೊಂಡೊಯ್ಯುವಲ್ಲಿ ಈ ಸಾಧಾರಣೀಕರಣ ಬಹು ಮುಖ್ಯ ಪಾತ್ರ ವಹಿಸುತ್ತದೆ.
ಕಾಲಾನಂತರದಲ್ಲಿ ಭರತನ ನಾಟ್ಯಶಾಸ್ತ್ರವಷ್ಟೇ ಅಲ್ಲದೆ ನಂದಿಕೇಶ್ವರನ ಅಭಿನಯ ದರ್ಪಣ, ಪುಂಡರೀಕ ವಿಠಲನ ನರ್ತನ ನಿರ್ಣಯ, ಸಾರಂಗಧರನ ಸಂಗೀತ ರತ್ನಾಕರ, ಭರತಾರ್ಣವ, ಹಸ್ತ ಲಕ್ಷಣ ದೀಪಿಕ.., ಹೀಗೆ ಹತ್ತು ಹಲವು ಗ್ರಂಥಗಳು ವಿವಿಧ ಬಗೆಯ ನೃತ್ಯ ಪದ್ಧತಿಗಳಿಗೆ ಆಕರವಾದವು. ಭರತನಾಟ್ಯವು ಅಭಿನಯ ದರ್ಪಣವನ್ನು ಮುಖ್ಯವಾಗಿ ಅವಲಂಬಿಸಿದರೆ ಮೋಹಿನಿಯಾಟ್ಟಂ, ಕಥಕ್ಕಳಿಂiiಂತಹ ನೃತ್ಯ ಪ್ರಕಾರಗಳು ಅವಲಂಬಿಸಿದ್ದು ಹಸ್ತಲಕ್ಷಣ ದೀಪಿಕಾವನ್ನು.
ಆರಂಭದಲ್ಲಿ ಜನಜೀವನದ ಮಾಮೂಲಿ ನೃತ್ಯಗಳಾಗಿದ್ದು, ಕಾಲಾಂತರದಲ್ಲಿ ಪರಿಷ್ಕರಣೆಗೊಳಪಟ್ಟವುಗಳೇ ಇಂದಿನ ಎಲ್ಲಾ ಬಗೆಯ ಶಾಸ್ತೀಯ ನೃತ್ಯಗಳು. ಇವುಗಳ ಬಳಕೆ, ಮತ್ತು ಪ್ರೋತ್ಸಾಹ ವಿವಿಧ ದೇಶ-ಕಾಲದಲ್ಲಿ ನಡೆದು ಅನೇಕ ಸ್ಥಿತ್ಯಂತರಗಳಿಗೆ, ಕಾಲಕ್ರಮೇಣ ಒಂದು ಸಂಪ್ರದಾಯದ ಚೌಕಟ್ಟಿಗೆ ಒಳಪಟ್ಟು ಶಾಸ್ತ್ರೀಯ-ಸಂಪ್ರದಾಯಯನ್ನು ಪಡೆದವು. ಸಮಾಜದ ಉನ್ನತಿಗೆ, ವ್ಯಕ್ತಿತ್ವ ವಿಕಸನೆಗೆ, ಸೌಂದರ್ಯಾನುಭವಕ್ಕೆ ರೂಪುಗೊಂಡ ಇಂತಹ ಪದ್ಧತಿಗಳಲ್ಲಿ ತಮಿಳುನಾಡಿನ ಭರತನಾಟ್ಯ, ಆಂಧ್ರದ ಕೂಚುಪುಡಿ, ಒರಿಸ್ಸಾದ ಒಡಿಸ್ಸಿ, ಕೇರಳದ ಕಥಕ್ಕಳಿ ಮತ್ತು ಮೋಹಿನಿಯಾಟ್ಟಂ, ಮಣಿಪುರದ ಮಣಿಪುರಿ, ಉತ್ತರಭಾರತದ ಕಥಕ್, ಅಸ್ಸಾಂನ ಸತ್ರಿಯಾ, ಕರ್ನಾಟಕದ ಯಕ್ಷಗಾನಗಳು ಕೂಡಾ ಒಂದೊಮ್ಮೆ ಜನಪದದ ಹರಿವಿನಿಂದ ಶಾಸ್ತ್ರೀಯ ನಡೆವಳಿಕೆಗಳಿಗೆ ಚಾಚಿಕೊಂಡಿರಬಹುದಾದ ಎಲ್ಲಾ ಸಾಧ್ಯತೆಗಳನ್ನು ಪ್ರಕಟಪಡಿಸಿವೆ. ಹೀಗೆ, ಕಲಾವಿದನ ಶಕ್ತಿಯು ಆಯಾಯ ದೇಶದ ಸ್ಥಿತಿಗತಿಗಳ, ರಾಜಕೀಯ, ಆರ್ಥಿಕ, ಮತ್ತು ಸಂಸ್ಕೃತಿಯನ್ನು ಅವಲಂಬಿಸಿರುತ್ತದೆ.
ಇಂದಿನ ಶಾಸ್ತ್ರೀಯ ನೃತ್ಯಗಳ ಒಂದೊಂದು ಅಂಶವೂ ಸೂಕ್ಷ್ಮಾವಲೋಕನದಿಂದ, ನಿಯಮ ವಿಧಿಗಳಿಗೆ ಬದ್ಧವಾಗಿ, ಶಾಸ್ತ್ರೀಯ ಸೂತ್ರಗಳನ್ನು ಹೊಂದಿದ ಪರಿಷ್ಕೃತ ಪದ್ಧತಿಯನು ಒಳಗೊಂಡಿದ್ದು; ಬಹಳಷ್ಟು ಹಿಂದಿನಿಂದಲೇ ಗೌರವಕ್ಕೆ ಅರ್ಹವಾದ ಕಲೆಗಳಾಗಿದ್ದವು ಎನ್ನುವುದು ಗಮನಾರ್ಹ. ಒಂದು ಕಾಲದಲ್ಲಿ ಸಾಮಾನ್ಯ ಜನರ ಅಭಿವ್ಯಕ್ತಿಯ ಸಾಧನವಾಗಿದ್ದು, ಜನಪದವೇ ಆಗಿದ್ದಿರಬಹುದೆನ್ನಲಾದ ಇಂದಿನ ಶಾಸ್ತ್ರೀಯ ನೃತ್ಯಗಳು, ಕಾಲಾನುಕ್ರಮದಲ್ಲಿ ಹಲವು ಪರಿಷ್ಕರಣೆಗೊಳಪಟ್ಟು, ಬದಲಾವಣೆಗಳಿಗೆ ಒಗ್ಗಿಸಿಕೊಂಡು ಒಂದು ಸಿದ್ಧ ಪರಂಪರೆಯ ರೂಪಕ್ಕೆ ಬಂದಿದ್ದೇ ಅವುಗಳ ಇಂದಿನ ಅಸ್ತಿತ್ವಕ್ಕೆ ಕಾರಣ. ಹಾಗಾಗಿ ನಾಟ್ಯಶಾಸ್ತ್ರದ ಹಿನ್ನಲೆಯಲ್ಲಿ ಬೆಳೆದು ಬಂದ ಕಲೆಗಳಾದ ನೃತ್ಯ ಪದ್ಧತಿಗಳನ್ನು ಕೇವಲ ಶಾಸ್ತ್ರೀಯ ಪರಿಭಾಷೆಯಾಗಿ ನೋಡದೆ ಅದರ ವ್ಯಾಪ್ತಿಯ ಬಗ್ಗೆ, ಸಾಧಾರಣೀಕರಣ ಪ್ರಸ್ತಾಪಿಸುವ ಅಂಶಗಳಿಗೆ ಎಷ್ಟು ಪೂರಕವಾಗಿ ನಡೆದುಕೊಳ್ಳುತ್ತದೆ ಎಂಬ ಬಗ್ಗೆ ಮತ್ತು ಈಗಾಗಲೇ ಅಸ್ತಿತ್ವದಲ್ಲಿದ್ದರೂ ತೆರೆಮರೆಗೆ ಸರಿಯುತ್ತಿರುವ ಅದರ ಸಂವಹನ ಅನುಕೂಲ ಅಂಶಗಳ ಕುರಿತಾಗಿ ಮತ್ತಷ್ಟು ಅಧ್ಯಯನಗಳು ನಡೆಯಬೇಕಾಗಿವೆ. ಬದಲಾವಣೆಯ ಕಾಲಘಟ್ಟಕ್ಕೆ ಪೂರಕವಾಗಿ ನಡೆಯಬೇಕೆಂಬ ಉದ್ದೇಶಗಳನ್ನಿಟ್ಟು ನಡೆದರೆ ಕಲೆಯು ಕೇವಲ ಸಾಂಪ್ರದಾಯಿಕ, ಸಾಂಸ್ಕೃತಿಕ ಅಗತ್ಯಗಳನ್ನಷ್ಟೇ ಪೂರೈಸುವುದಕ್ಕೆ ಸೀಮಿತವಾಗದೆ ಸಾಮಾಜಿಕ ಅಗತ್ಯ ಮತ್ತು ಪ್ರಜ್ಞೆಯನ್ನು ಪೂರೈಸಿಕೊಂಡು, ಪ್ರಸ್ತುತವೆನಿಸುತ್ತದೆ.
ಕಲೆ ನಿಂತ ನೀರಲ್ಲ. ನೃತ್ಯ ಪದ್ಧತಿಗಳು ಉಗಮವಾದಾಗಿನಿಂದಲೂ ಸಾಕಷ್ಟು ಚಲನೆಗಳಿಗೆ ಸಾಕ್ಷಿಯಾಗಿದೆ. ಕಲೆಯ ಮತ್ತು ಅದರೊಂದಿಗಿನ ಜೀವನಪ್ರೀತಿಯನ್ನು ಪೋಷಿಸುವ ಮತ್ತು ನಿತ್ಯ ನವೀಕರಿಸಿಕೊಳ್ಳುವ ದೃಷ್ಟಿಯಿಂದ ಮುನ್ನಡೆದರಷ್ಟೇ ಕಾರ್ಯಗಳು ಜೀವನಮುಖಿಯೆನಿಸಿಕೊಳ್ಳುತ್ತದೆ. ಭರತನೇ ತನ್ನ ನಾಟ್ಯಶಾಸ್ತ್ರದಲ್ಲಿ ಕಾಲಾನುಕೂಲಕ್ಕೆ ಅಗತ್ಯವಿದ್ದಂತೆ ಜನಜೀವನದ ಮಾರ್ಪಾಡುಗಳಿಗೆ ಅನುಗುಣವಾಗಿ ನೃತ್ಯ ಸಂಸ್ಕೃತಿಯಲ್ಲೂ ಬದಲಾವಣೆಗಳನ್ನು ತಂದುಕೊಳ್ಳಬಹುದಾಗಿದೆ ; ತಾನು ಪ್ರಸ್ತಾಪಿಸಿರುವ ಅಂಶಗಳೇ ಸಾರ್ವಕಾಲೀನ ಮಾನದಂಡವಲ್ಲ ಎಂದಿದ್ದಾನೆ. ಆದರೆ ಶತಶತಮಾನಗಳಿಂದಲೂ ಪೂಜಾ ಮಂದಿರ, ರಾಜರ ಆಶ್ರಯಗಳಲ್ಲಿ ಬೆಳೆದು ಬಂದು ಕ್ರಮೇಣ, ಸ್ವಹಿತಾಸಕ್ತಿಗಳಿಂದಾಗಿ ಕಳೆದ ಶತಮಾನದ ಪೂರ್ವ ಮತ್ತು ಮಧ್ಯಕಾಲದಲ್ಲಿ ಸೊರಗಿ ಹೋಯಿತು. ಪರಕೀಯರ ದಾಳಿ ಆಗುವವರೆಗೂ ರಾಜಶ್ರಯದಲ್ಲಿದ್ದ ಕಲೆಗಳು ಮತ್ತಷ್ಟು ಬಿಗಡಾಯಿಸಿದವು. ದೈವಿಕಭಾವದ ಕಲೆಗೆ ಕಾಮುಕತೆಯ ಲಕ್ಷಣಗಳು ಅಂಟಿಕೊಂಡು. ಕೀಳುಮಟ್ಟದ ಜೀವನಕ್ಕೆ ಸಾಕ್ಷಿಯಾಯಿತು. ಅಸಡ್ಡೆ, ತಿರಸ್ಕಾರ, ಮರ್ಯಾದೆಗೆ ಯೋಗ್ಯವಲ್ಲ ಎಂಬ ನೀತಿ ನೃತ್ಯಕ್ಷೇತ್ರದಲ್ಲಿ ವ್ಯಾಪಕವಾಗಿ ಹಬ್ಬಿತ್ತು.
ನಂತರ ಹಲವು ಸುಧಾರಕರ ಕರಕುಶಲತೆಗೆ ಕನ್ನಡಿಯಾಗಿ ಇಂದು ನಾವೇನು ಕಾಣುತ್ತಿದ್ದೇವೆಯೋ ಈ ಭವ್ಯ ಹೊಸಿಲಿಗೆ ಬಂದು ನಿಂತಿದೆ. ಉದಾ : ದೇವದಾಸಿಯರ ಕಳಪೆ, ನಿರ್ಲಕ್ಷಿತ ಜೀವನದಡಿ ಸಾದಿರ್, ಕೂತ್ತು ಎಂಬೆಲ್ಲಾ ಹೆಸರುಗಳಿಂದ ಕಳೆಗುಂದಿ ನಲುಗಿ ಹೋಗಿದ್ದ ದಕ್ಷಿಣ ಭಾರತದ ಸಾದಿರ್, ಕೂತ್ತು, ದಾಸಿ‌ಆಟ್ಟಂ ಎಂದು ಕರೆಸಿಕೊಳ್ಳುತ್ತಿದ್ದ ಮುಖ್ಯ ನೃತ್ಯ ಪ್ರಕಾರವೊಂದಕ್ಕೆ ೧೯೫೦ರ ದಶಕಗಳಲ್ಲಿ ರುಕ್ಮಿಣೀದೇವಿ ಅರುಂಡೇಲ್, ಕೃಷ್ಣ ಅಯ್ಯರ್ ಮುಂತಾದವರು ಭರತನಾಟ್ಯವೆಂಬ ಹೆಸರನ್ನಿತ್ತು, ಮರುಜ್ಜೀವ ಕೊಟ್ಟು ಸಾಕಷ್ಟು ಪರಿಷ್ಕರಿಸಿದರು.
ಕಾಲ ಬದಲಾಗಿದೆ., ಕಾಲ-ನೆಲೆಗಳಿಂದ ಮೊದಲ್ಗೊಂಡು ವೇಷಭೂಷಣ, ಸಂಗೀತ, ಪಠ್ಯಕ್ರಮ, ನರ್ತನ ಆಶಯಗಳ ಉದ್ದಗಲಕ್ಕೂ ಸಾಕಷ್ಟು ಮಾರ್ಪಾಡುಗಳು ಶಾಸ್ತ್ರೀಯ ನೃತ್ಯಗಳಲ್ಲಿ ಆಗುತ್ತಾ ಬಂದಿವೆ. ಇತರ ಮಾಧ್ಯಮಗಳ ಪ್ರಭಾವವೂ ಸಾಕಷ್ಟು ಆಗಿದೆ. ಇತ್ತೀಚಿನ ದಶಕಗಳಲ್ಲಿ ಈ ನೃತ್ಯ ಸಂಸ್ಕೃತಿಯ ಮೂಲ ಅಂಶಗಳನ್ನು ಉಳಿಸಿಕೊಂಡಂತೆ ಸಾಕಷ್ಟು ಫ್ಯೂಶನ್‌ಗಳು ಹರಡಿದ್ದು, ಸಮಕಾಲೀನ ಸಮಾಜಕ್ಕೆ ಪೂರಕವಾಗಿ ನಡೆದುಕೊಳ್ಳಬಲ್ಲ ಎಲ್ಲಾ ಅಂಶಗಳನ್ನು ತೋರಿಸಿಕೊಟ್ಟಿದೆ. ಅಂದು ನೃತ್ಯವೆಂಬುದು ಕಳಂಕ ; ಅದೇ ಇಂದು ಪ್ರತಿಷ್ಠೆಯ ವಿಷಯ. ನೃತ್ಯ ಕ್ಷೇತ್ರದ ವ್ಯಾಪಾರೀಕರಣ ಬಡವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವೆಚ್ಚದಾಯಕವೆಂಬ ಕಾರಣಕ್ಕೆ ನೃತ್ಯಕ್ಕೆಂದು ಹುಳಿದ್ರಾಕ್ಷಿಯೇ ಹೌದು ! ಅನಾರೋಗ್ಯಕರ ಸ್ಪರ್ಧೆಯಿಂದಾಗಿ ವಿದ್ಯೆಯೆಂಬುದು ಕೇವಲ ಗಿಳಿಪಾಠವೇ ಸರಿ ! ಮಾತ್ರವಲ್ಲ, ನೃತ್ಯ ಪರೀಕ್ಷೆಗಳ ಸಾಕಷ್ಟು ಲೋಪಗಳು ಅಕಾಡೆಮಿಕ್ ಮಾನ್ಯತೆಗೊಂದು ಕಪ್ಪುಚುಕ್ಕಿ. ಹಾಗಾಗಿ ಬರಬರುತ್ತಾ ಎಲ್ಲಾರೀತಿಯಿಂದಲೂ ಯೋಗ್ಯತೆ ಪಡೆದಿರುವ ನಾಟ್ಯಾಚಾರ್ಯರು ವಿರಳವಾಗುತ್ತಿದ್ದಾರೆ. ವಿವಿಧ ಸಂಪ್ರದಾಯಗಳ ಒಳಜಗಳಗಳು, ಪ್ರದರ್ಶನ-ರಂಗಪ್ರವೇಶಗಳೇ ಅರ್ಹತೆಯ ಮಾನದಂಡಗಳೆಂಬ ಕಪೋಲ ಕಲ್ಪಿತ ನಂಬಿಕೆಗಳು ರಸಾನುಭೂತಿಯನ್ನೇ ಮರೆಸಿ ನಿರ್ವಾತ ವಾತಾವರಣವನ್ನು ಸೃಷ್ಠಿಸುತ್ತಿವೆ.
ಇಷ್ಟೆಲ್ಲಾ ನೃತ್ಯಕ್ಷೇತ್ರದ ಹಲವು ವಿರೋಧಾಭಾಸಗಳ ಮಧ್ಯೆ ಪರಂಪರೆಯ ಜೊತೆಗೆ ವಿನೂತನ ನಡೆಯನ್ನು ಮುಕ್ತವಾಗಿ ಒಪ್ಪಿ, ತಿದ್ದಿ ನಡೆಯುವ ವಿಶಾಲ ಮತ್ತು ಪ್ರತಿಭಾಶೀಲ ಮನಸ್ಸುಗಳ ಅಗತ್ಯವಿದೆ. ಒಂದಷ್ಟು ಚಲನಶೀಲತೆ, ಗುಣಮಟ್ಟದ ಬದಲಾವಣೆಗಳನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇರುವವರೆಗೆ ಕಲೆಯ ಕಡೆಗೆ ನೋಡುವ ಪ್ರತೀ ದೃಷ್ಠಿಯೂ ಹೊಸತೆನಿಸುತ್ತದೆ. ಭಾರತದ ನೃತ್ಯಪರಂಪರೆ ಇಲ್ಲಿನ ಆತ್ಮಚರಿತ್ರೆ. ಆತ್ಮದ ಉನ್ನತಿಯೇ ಕಲೆಯ ಪರಮೋದ್ದೇಶ. ಅಂತಹ ಸಧಭಿರುಚಿಯ ಪ್ರಯತ್ನಗಳು ನಮ್ಮಿಂದ ಹರಿದುಬರಲಿ.
(ಅಸೀಮಾ ಮಾರ್ಚ್ ೨೦೦೯ ಪತ್ರಿಕೆಯಲ್ಲಿ ಪ್ರಕಟವಾದ ಮುಖಪುಟ ವಿಷಯ ಲೇಖನ )
 
 

About

BELLARY BELLARY created this social network on Ning.

Create your own social network!

Groups

Events

Forum

BELLARY

ekavi 2003 2004 -2005 -2006 -2007

Started by BELLARY Jul 12.

BELLARY

EKAVI SCHOOL ADOPTION PROGRAMS -

Started by BELLARY Jul 12.

BELLARY

ekavi activities 2008

Started by BELLARY Jul 12.

BELLARY

ekavi activities 2009

Started by BELLARY Jul 12.

Badge

Loading…

RSS

ವಿದಾಯ... ಹಾಗೆ ಸಣ್ಣದೊಂದು ನೋವು

"ಶರಶ್ಚಂದ್ರ ಕಲ್ಮನೆ ಬ್ಲಾಗ್ ಬರೆಯುವುದನ್ನು ನಿಲ್ಲಿಸಿದ್ದಾನೆ" ಈ ವಿಷಯ ತಿಳಿದರೆ ಏನನ್ನಿಸುತ್ತದೆ ನಿಮಗೆ ? ತೀರ ಹತ್ತಿರದ ಗೆಳೆಯರು ಕರೆ ಮಾಡುತ್ತಾರೆ .. "ಯಾಕ್ರೀ ಶರತ್ ಏನಾಯ್ತು, ಯಾಕೆ ಬರೆಯೋದು ನಿಲ್ಲಿಸಿದ್ದು " ಎಂದು. ಆಗಾಗ ಸಮಯ ಸಿಕ್ಕಾಗ ಬ್ಲಾಗ್ ಓದುವವರು "ಏನೋ ಸಮಸ್ಯೆ ಇರಬೇಕು, ಚಿತ್ರ ಚನ್ನಾಗಿ ಬಿಡಿಸುತ್ತಿದ್ದ, ಬರಹ ಪರವಾಗಿರಲಿಲ್ಲ" ಎಂದುಕೊಂಡಾರು. ಇನ್ನು ಕೆಲವರು "ಗೊತ್ತಿತ್ತು ಇವನ ಹಣೆ ಬರಹ ಇಷ್ಟೇ ಎಂದು.. ಇವನ ಬ್ಲಾಗ್ ಕಡೆ ಕಣ್ಣು ಹಾಯಿಸುವ ಕಷ್ಟ ತಪ್ಪಿತು" ಎಂದರೂ ಎನ್ನಬಹುದು..

ಹೌದು, ಇವೆಲ್ಲದಕ್ಕೂ ಸಿದ್ದನಾಗಿದ್ದೇನೆ... ನನ್ನ ಬ್ಲಾಗ್ ಅನಿರ್ದಿಷ್ಟ ಕಾಲದವರೆಗೆ ನಿರ್ಜೀವಗೊಳ್ಳಲಿದೆ. ಕಾರಣ ಹೇಳಿಕೊಳ್ಳುವಂತದ್ದು ಏನಿಲ್ಲ. ನನ್ನ ಬರವಣಿಗೆಗಳು ನನಗೇ ಸಂತೋಷ ನೀಡುತ್ತಿಲ್ಲ. ಇದು ಪ್ರಥಮ ಕಾರಣ. ಎರಡನೆಯ ಕಾರಣವೆಂದರೆ ನನಗೆ ಈಗೀಗ ಬರೆಯುವುದಕ್ಕಿಂತ ಓದುವುದೇ ಜಾಸ್ತಿ ಸಂತಸ ನೀಡುತ್ತಿದೆ. ಮನೆಯಲ್ಲಿ ಪುಸ್ತಕಗಳ ಹೊರೆಯೇ ಬಿದ್ದಿದೆ. ಓದಬೇಕು ಎಂಬ ಹಂಬಲ ಹಠಕ್ಕೆ ಬಿದ್ದಿದೆ. ಬ್ಲಾಗ್ ಬರೆಯುವುದನ್ನು ಬಿಟ್ಟೆನೆಂದರೆ ಓದುವುದನ್ನು ಬಿಡುವೆನೆಂದಲ್ಲ..... ನಿಮ್ಮೆಲ್ಲರ ಬರಹಗಳನ್ನು ಓದಿ ಆನಂದಿಸುವೆ.

ಒಂದು ವರ್ಷದಲ್ಲಿ ಬರೆದದ್ದು ಕೇವಲ ೨೮ ಬರಹಗಳು, ಅವುಗಳಲ್ಲಿ ಹಲವು ಚಿತ್ರಗಳು. ನಾನು ಎಣಿಸಿದ್ದಕ್ಕಿಂತ ಜಾಸ್ತಿಯೇ. ಬರೆಯಲೇ ಬೇಕೆಂಬ ಒತ್ತಡದಿಂದ ಎಂದೂ ಬರೆಯಲಿಲ್ಲ. ಬರೆದದ್ದನ್ನು ಎಲ್ಲರೂ ಓದಿ ಕಾಮೆಂಟ್ ಬರೆಯಬೇಕೆಂದು ನಿರೀಕ್ಷಿಸಿಯೂ ಇರಲಿಲ್ಲ. ನನ್ನ ಖುಷಿಗೆ ಬರೆದೆ.. ನೀವೆಲ್ಲ ಓದಿದಿರಿ. ನಿಮ್ಮ ಅಭಿಪ್ರಾಯಗಳನ್ನು ತಿಳಿಸಿದಿರಿ. ನನ್ನ ಖುಷಿಯ ಭಾಗವಾದಿರಿ. ಅಷ್ಟು ಸಂತಸ ಸಾಕೆನಗೆ.

ಇಷ್ಟ ಪಟ್ಟು ಬರೆಯಲು ಪ್ರಾರಂಭಿಸಿದ ಎರಡು ಬರಹಗಳು ಕೊನೆಗಾನದೆ ಹಾಗೆ ನಿಂತಿವೆ. ತಾಳ್ಮೆಯನ್ನು ಮೈ ಮೇಲೆ ಎಳೆದುಕೊಂಡು ರಚಿಸಲು ಕುಳಿತ ಚಿತ್ರವೊಂದು ಕಪ್ಪು ಗೆರೆಗಳ ಮಧ್ಯೆ ಹಾಗೆ ಧ್ಯಾನಸ್ಥವಾಗಿದೆ. ಎಂದಾದರೂ ಇವೆಲ್ಲ ತಮ್ಮ ಕೊನೆಯ ತೀರವನ್ನು ಸೇರಿದರೆ, ನನಗೆ ಸಂತೃಪ್ತಿ ಕೊಟ್ಟರೆ ಮತ್ತೆ ಬ್ಲಾಗಿಗೆ ಜೀವ ಬಂದರೂ ಬರಬಹುದು. ಬ್ಲಾಗನ್ನು ಡಿಲೀಟ್ ಮಾಡುವುದಿಲ್ಲ. ಬರಹವನ್ನು ನಿಲ್ಲಿಸುವುದು ನನ್ನ ಉದ್ದೇಶವೂ ಅಲ್ಲ, ಅದು ನನ್ನಿಂದ ಸಾಧ್ಯವೂ ಇಲ್ಲ. ಈ ಯೋಜನೆ ನೆನ್ನೆ ಮೊನ್ನೆಯದಲ್ಲ. ಹಲವು ತಿಂಗಳುಗಳ ಮೊದಲೇ ಮೊಳಕೆಯೊಡೆದು ಮರವಾಗಿ ಬೆಳದದ್ದು.

ನಾನು ಬರೆಯಲು ಪ್ರಾರಂಭಿಸಿದಾಗಿನಿಂದ ನನ್ನನ್ನು ತಿದ್ದಿ-ತೀಡಿ, ನನ್ನ ಬರಹವನ್ನು ಓದಿ ಸಂತೋಷಪಟ್ಟು, ಚಿತ್ರಗಳಿಗೆ ಹೃದಯದಲ್ಲಿ ಜಾಗ ಒದಗಿಸಿ, ಕೇವಲ ಸಹಬ್ಲಾಗಿಗರಾಗಿ ಉಳಿಯದೆ ನನ್ನನ್ನು ಸ್ನೇಹದ ತೆಕ್ಕೆಯ ಒಳಗೆಳೆದುಕೊಂಡ ಸ್ನೇಹಿತರಿಗೆ ಹಾಗು ಬ್ಲಾಗ್ ಕಡೆ ಕಣ್ಣು ಹಾಯಿಸಿದ ಎಲ್ಲರಿಗೂ ಅನಂತಾನಂತ ವಂದನೆಗಳು. ನಿಮ್ಮ ಪ್ರೀತಿಗೆ ನಾನು ಚಿರ ಋಣಿ. ಮತ್ತೆ ಸಿಗುವೆ...


ಶರಶ್ಚಂದ್ರ ಕಲ್ಮನೆ

ಕಥೆ ಹೇಳುತ್ತಿವೆ ಸಾಲುಗಳು...

ಅಪ್ಪನೊಂದಿಗೆ ಬೈಕಿನಲ್ಲಿ ಕುಳಿತಿದ್ದ ಪುಟ್ಟನೊಬ್ಬ ಕೈಯಿಂದ ಜಾರಿ ಬೀದಿಪಾಲಾದ "ಸೂಪರ್ ಮ್ಯಾನ್" ನ ಸ್ಟಿಕ್ಕರ್ ರಸ್ತೆಯಲ್ಲಿ ಅನಾಥವಾಗುತ್ತಿರುವುದನ್ನು ಕಂಬನಿಗಣ್ಣಲ್ಲಿ ನಿರುಪಾಯನಾಗಿ ನೋಡತೊಡಗಿದ.


ಸಂಜೆ ಮಗಳ ಚೀಲ ತೆಗೆದ ತಾಯಿ, ಊಟದ ಡಬ್ಬಿಯಲ್ಲಿನ ಊಟ ಹಾಗೆ ಇದ್ದುದನ್ನು ಕಂಡು ನಖಶಿಖಾಂತ ಕೋಪಗೊಂಡಳು. ಹಸಿವಾದರೂ ಅನೇಕ ಕೆಲಸಗಳ ಮಧ್ಯೆ ಊಟ ಮಾಡಲಾಗದೆ ಮನೆಗೆ ಬಂದು ಮಲಗಿದ್ದ ಮಗಳ ಹೊಟ್ಟೆಯಲ್ಲಿ ಹಸಿವು ಅಣಕವಾಡುತ್ತಿತ್ತು.


ಹೊರಗೆ ಹುಚ್ಚು ಮಳೆ, ಉಂಡು ಬೆಚ್ಚಗೆ ಹಾಸಿಗೆಯಲಿ ಮಲಗಿಹೆನು. ಜಗತ್ತಿನಲಿ ಹಲವಾರು ಜನಕ್ಕೆ ಈ ಭಾಗ್ಯವಿಲ್ಲ. ಕೆಲವರಿಗೆ ಊಟವೆಂದರೆ ಗೊತ್ತಿಲ್ಲ. ಕೆಲವರು ಹಾಸಿಗೆಯನ್ನು ಕಂಡಿಲ್ಲ. ಕೆಲವರು ಬದುಕನ್ನು ಬದುಕಲೇ ಇಲ್ಲ.


ಬೈಕಿನಲ್ಲಿ ಶರವೇಗದಲ್ಲಿ ಸಾಗುತ್ತಿದ್ದ ಯುವಕನ ಕಂಗಳು ರಸ್ತೆ ಬದಿಯಲ್ಲಾದ ಅಪಘಾತದ ಕಡೆ ತಿರುಗಿತು. ನುಜ್ಜುಗುಜ್ಜಾದ ಬೈಕನ್ನು ನೋಡಿ ಬೆಚ್ಚಿಬಿದ್ದ ಅವನ ಕೈಗಳು ಅದುರತೊಡಗಿದವು. ಆವರಿಸುತ್ತಿದ್ದ ಭಯ ಅವನ ಬೈಕಿನ ವೇಗವನ್ನು ತಗ್ಗಿಸತೊಡಗಿತು...


ಹಳ್ಳಿಯ ಮನೆ ಬಿಟ್ಟು ಓಡಿಬಂದು ಹತ್ತಿದ ಬಸ್ಸು, ಬಣ್ಣ ಕಳೆದುಕೊಂಡ ಗಡಿಬಿಡಿಯ ಗೂಡಾದ ಸಿಟಿಗೆ ತಂದು ಎಸೆದಿದೆ. ಕೇವಲ ಒಂದು ರಾತ್ರಿ ಕಳೆಯುವುದರಲ್ಲಿ ಬದಲಾದ ಈ ಪರಿಸರವನ್ನು ನೋಡುತ್ತಿದ್ದ ಹುಡುಗನ ಕಣ್ಣಲ್ಲಿ ಆತಂಕ ಎಂಬ ಪದ ಅರ್ಥ ಪಡೆದುಕೊಳ್ಳುತ್ತಿದೆ.


ನೋಡು, ನೀನು ನನ್ನನ್ನು ಬಿಟ್ಟು ಹೋಗದೆ ಇದ್ದಿದ್ದರೆ ಈಗ ನಾನು ಕಂಬನಿ ಮಿಡಿಯುವ ಪ್ರಸಂಗವೇ ಇರುತ್ತಿರಲಿಲ್ಲ. ಗೆಳೆಯ-ಗೆಳತಿಯರು ಅವರ ಹುಡುಗಿಯ ಬಗ್ಗೆಯೋ, ಅವರ ಹುಡುಗನ ಬಗ್ಗೆಯೋ ಹೇಳಿಕೊಳ್ಳುವಾಗ ನನ್ನಲ್ಲಿ ಅನಾಥಭಾವ. ನೀನು ನನಗೆಂದು ಬಿಟ್ಟು ಹೋದದ್ದು ಒಂದು ಹಿಡಿ ನೆನಪುಗಳು... ಒಂದಿಷ್ಟು ಕಂಬನಿಗಳು... ಇಷ್ಟೇ...

ಸುರಿಯುವ ಮಳೆಯಲ್ಲಿ ಕನಸಿನ ಗೂಡು ಕಟ್ಟಿ ಕೊಟ್ಟವಳಿಗೆ ಒಂದು ಪತ್ರ



ನಾನು ನನ್ನನ್ನೇ ಯಾವಗಲೂ ಕೇಳಿಕೊಳ್ಳುತ್ತಿರುತ್ತೇನೆ, ಯಾಕೆ ಈ ಮಳೆಗಾಲ ಹೀಗೆ ಎಂದು. ಪ್ರೀತಿ ಗಿಡದ ಮೊಳಕೆ ಒಡೆಯೋದೂ, ಪ್ರೀತಿಯ ಹೆಮ್ಮರ ಕಾರಣವಿಲ್ಲದೆ ಉರುಳಿ ಬೀಳೋದು ಈ ಮಳೆಗಾಲದಲ್ಲೇ ತಾನೇ ? ನಿನ್ನನ್ನು ಅಂದು ಬಸ್ಸಿನಲ್ಲಿ ನೋಡಿದಾಗ ವಿಶೇಷವಾದದ್ದೇನು ಅನ್ನಿಸಲಿಲ್ಲ. ಚಂದವಾಗೆ ಕಂಡೆ ನೀನು, ಸುಳ್ಳಿಲ್ಲ. ಒಂದು ನಗೆ, ನನ್ನ ಮಂದಹಾಸ ಅಷ್ಟೇ. ನಂತರ ನಾನೂ ಮರೆತೆ, ನೀನು ಮರಿತಿದ್ದೆ ಎಂದೆನಿಸುತ್ತದೆ. ಕಾಕತಾಳೀಯವೋ ಏನೋ, ಮತ್ತೆ ಮರುದಿನ ಪೇಟೆಯಲ್ಲಿ ನಿನ್ನ ದರ್ಶನ, ಮತ್ತೆ ನೆನಪಾಯಿತು ನಿನ್ನೆಯ ಭೇಟಿ. ಮತ್ತೊಮ್ಮೆ ನಗುಗಳ ವಿನಿಮಯ. ನೀನು "ಹಾಯ್" ಎಂದೆ. ನಾನು ಮೌನಿ, ಸುಮ್ಮನೆ ನಕ್ಕೆ. ನಿನ್ನ ದಾರಿ ನೀ ಹಿಡಿದೆ, ನನ್ನ ಹಾದಿ ನಾನು. ಆದರೆ ಅಂದಿನ ರಾತ್ರೆ ನಿದ್ದೆ ಬರುವುದು ಸ್ವಲ್ಪ ತಡವಾಯಿತು ಎಂದು ನನ್ನ ನೆನಪು. ಆದರೂ ಕಾಕತಾಳೀಯವೇ ಇರಬಹುದು ಎಂದು ಸುಮ್ಮನಾದೆ.


ನಮ್ಮ ಭೇಟಿ ಅದಕ್ಕಿಂತ ಹೆಚ್ಚಿನದು ಎಂದು ಧೃಡಪಟ್ಟಿದ್ದು ಮೊನ್ನೆಯ ಆ ಸಂಗೀತ ಕಾರ್ಯಕ್ರಮದಲ್ಲೇ. ಮತ್ತೆ ನನ್ನ ಮುಂದಿನ ಕುರ್ಚಿಯಲ್ಲಿ ನೀನು. ನಿನ್ನ ನಗು. ನಿನ್ನ ಗುರುತಿಸಿಯೂ, ಮಾತನಾಡಿಸುವ ಅಭಿಲಾಷೆ ಇದ್ದರೂ, ಏನೆಂದು ಕರೆಯಲಿ ನಿನ್ನ, ಹೇಗೆ ಕರೆಯಲಿ ಎಂದು ಗೊತ್ತಾಗದೇ ಪೆಚ್ಚಾಗಿ ಕುಳಿತಿದ್ದೆ. ಒಳಗೆ ಹಿಂದೂಸ್ತಾನಿ, ಹೊರಗೆ 'ಧೋ' ಎಂದು ಸಾಥ್ ಕೊಡುತ್ತಿದ್ದ ಬಿರುಮಳೆ. ಕಾರ್ಯಕ್ರಮ ಮುಗಿಯಲು ಬರುತ್ತಿರಲು, ನನ್ನಲ್ಲಿ ಗೊಂದಲ ಹೆಚ್ಚುತ್ತಿರಲೂ ನೀನೊಮ್ಮೆ ತಿರುಗಿದೆ (ದೈವಲೀಲೆಯೇ ಖರೆ). ಎಷ್ಟೋ ವರ್ಷದ ಪರಿಚಯದ ಹಾಗೆ ನಾನು "ಅರರೆ ! ನೀವಿಲ್ಲಿ?" ಎಂದು ಬಡಬಡಿಸಿದೆ. ನೀನೂ ಅಷ್ಟೇ ಸಲೀಸಾಗಿ "ಓಹೋ ನೀವ್ಯಾವಾಗ ಬಂದಿದ್ದು, ಗೊತ್ತೇ ಆಗಲಿಲ್ಲ, ಬನ್ನಿ ಇಲ್ಲೇ ಮುಂದಕ್ಕೆ" ಎಂದು ಕುರ್ಚಿ ತೋರಿದೆ. ನಸುನಗುವಿನೊಂದಿಗೆ ನಿನ್ನ ಪಕ್ಕದಲ್ಲಿ ಕುಳಿತ ನನ್ನ ಮೈಯ್ಯಲ್ಲೆಲ್ಲ ಮಿಂಚಿನ ಸಂಚಾರ. ಅವ್ಯಕ್ತ ಭಯ. ಇದೆ ಮೊದಲ ಬಾರಿಗೆ ಹುಡುಗಿಯ ಪಕ್ಕ ಕುಳಿತಿದ್ದೇನೆ ಎಂಬ ಅನುಭವ. ಪರಿಚಯ ಚಿಕ್ಕದಾದರೂ ಸಲುಗೆ ಇತ್ತು. ನಿನ್ನ ನಗುವಿನಲ್ಲಿ ನೂರು ಅರ್ಥಗಳನ್ನು ಕಂಡೆ ಅಂದು.


ಸರಿಯಾಗಿ ನಿದ್ದೆ ಇಲ್ಲದೆ ಒಂದು ವಾರವಾಯಿತು ನೋಡು. ಈಗೀಗ ಕಣ್ಣು ಮುಚ್ಚಿದರೆ ಕನಸುಗಳದೇ ದರ್ಬಾರು. ದೀಪಾವಳಿಯ ಬೆಳಗಿನಂತೆ, ಕಪ್ಪನೆಯ ಆಗಸದಲ್ಲಿ ಸಿಡಿಯುವ ಸಿಡಿಮದ್ದಿನಂತೆ. ಎಲ್ಲೆಲ್ಲೂ ನಿನ್ನದೇ ಚಿತ್ತಾರ. ಹೃದಯದಲ್ಲಿ ಮಾರ್ಧನಿಸುವ ನಿನ್ನ ನಗು. ಮತ್ತೆಂದು ನಮ್ಮ ಭೇಟಿ? ಹೊರಗಂತೂ ಮಳೆಯದೇ ಆಟ. ಯಾವುದಾದರೂ ಬೆಚ್ಚನೆಯ ಜಾಗದಲ್ಲಿ ಕುಳಿತು ಇನ್ನಷ್ಟು ಮಾತುಕತೆಗಳಾದರೆ ಎಷ್ಟು ಚಂದ ? ನಮ್ಮ ಭೇಟಿಗಾಗೆ ಪೈ ಪರಿವಾರ್, ಸುಖ ಸಾಗರದ ಕುರ್ಚಿಗಳು ಖಾಲಿಯಾಗಿವೆ (ನನಗೆ ಸಾಗರದಲ್ಲಿ ಗೊತ್ತಿರೊದು ಇವೆರಡೆ ಹೊಟೆಲ್ಗಳು) ಅಥವಾ ನೀನು ಬೆಂಗಳೂರಿಗೆ ಬಂದ ಮೇಲೆ ಕಾಫಿ ಡೇ ಆದರೂ ಆಯಿತು. ಮೊಬೈಲ್ನಲ್ಲಿ ಮೆಸೆಜ್ ಒಂದು ಬಂದಾಗ, ಅದು ನಿನ್ನದೇ ಇರಬಹುದು ಎಂಬ ಆಸೆ. ಹಾಗೆ ಆ ಆಸೆಗಳು ನಿರಾಸೆಯಾಗಿದ್ದೂ ಬಹಳ ಕಡಿಮೆ. "ನೀನೆಂದರೆ ನನ್ನೊಳಗೆ ಏನೊ ಒಂದು ಸಂಚಲನ.... ನಾ ಬರೆಯದ ಕವಿತೆಗಳ..." ಈ ಹಾಡೇ ಬೇಡವೆಂದರೂ ನಾಲಿಗೆಯ ಮೇಲೆ ಆಡುತ್ತಿರುತ್ತದೆ. ಈ ಮಳೆಗಾಲ, ಅದರಲ್ಲಿ ನೆನೆದು ತೊಪ್ಪೆಯಾದ ನಾನು, ನಮ್ಮ ಭೇಟಿ, ಇವೆಲ್ಲದಕ್ಕೂ ಒಂದು ಸಾರ್ಥಕತೆ ದೊರೆಯಲಿ. ಸುರಿಯುವ ಮಳೆಯಲ್ಲಿ ಕನಸಿನ ಗೂಡನ್ನು ಕಟ್ಟಿಕೊಟ್ಟವಳೆ ನಿನ್ನ ಒಡನಾಟಕ್ಕೆ ಕುಳಿತು ಕಾಯುತ್ತಿರುವೆನು. ದಿನಾಂಕ ಹಾಗು ಸ್ಥಳವನ್ನು ನಿಗದಿ ಮಾಡುವ ಜವಾಬ್ದಾರಿಯನ್ನು ನಿನಗೆ ಬಿಟ್ಟಿದ್ದೇನೆ.



ಇತಿ, ನಿನ್ನವ


.......................

ಓಡಿ ಹೋದವನ ಒಂದು ಪತ್ರ.....



ನೀವು ಈ ಪತ್ರ ಓದುತ್ತಿರುವ ಹೊತ್ತಿಗೆ ನಾನು ಎಲ್ಲಿ ಇರುತ್ತೇನೋ ನನಗೆ ಗೊತ್ತಿಲ್ಲ. ಈ ಪತ್ರ ಬರೆಯುವ ಅಗತ್ಯತೆ ಇರಲಿಲ್ಲ. ನನ್ನ ಮನದಲ್ಲಿ ಇದ್ದುದನ್ನು ಬಾಯಿಮಾತಲ್ಲಿ ಹೇಳಲಾಗದೆ ಅಕ್ಷರಗಳ ಸಹಾಯ ಪಡೆಯುತ್ತಿದ್ದೇನೆ. ನಾನು ಹೀಗೆ ಓಡಿಹೊಗುತ್ತಿರಲು ಈಗ ಜಿನುಗುತ್ತಿರುವ ಮಳೆಯೂ ಕಾರಣವಾಗಿರಬಹುದು. ಈ ಮಳೆಯೇ ಹೀಗೆ, ಎಲೆಯ ಮೇಲಿನ ಧೂಳನ್ನೆಲ್ಲ ತೊಳೆದಂತೆ ನೆನಪಿನ ಗಂಟನ್ನು ಸಡಲಿಸುತ್ತದೆ... ಇದೊಂದು ನೆಪವಷ್ಟೇ.





ಓಡಿ ಹೋಗುತ್ತಿರಲು ಕಾರಣ ಒಂದು ಬೇಕಲ್ಲವೇ... ಹೆದರಬೇಡಿ, ವೈರಾಗ್ಯ ಅಂತೂ ಬಂದಿಲ್ಲ. ಹ್ಞಾ! ತಾತ್ಕಾಲಿಕ ವೈರಾಗ್ಯ ಇದ್ದರೂ ಇರಬಹುದು. ಬೇಸತ್ತಿದ್ದೇನೆ ಈ ಜೀವನದಿಂದ. ಅದೇ ಅರ್ಥೈಸಿಕೊಳ್ಳಲು ಆಗದ ಜನರು, ಒಗ್ಗದ ಅವರ ತೋರಿಕೆಯ ಮಾತುಗಳು. ಇಲ್ಲಿ ನಂಬಿಕೆ, ಪ್ರೀತಿ, ಗೆಳೆತನ, ಆತ್ಮೀಯತೆ ಎಲ್ಲ ತೋರಿಕೆಗೆ ಮಾತ್ರ. ಬಹುಶ ಒತ್ತಡ ಹಾಗು ಪರಿಸ್ಥಿತಿಗಳು ಜನರನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿರಬಹುದು. ಹಾಗೆ ಆಗಿದ್ದೇ ಆದರೆ ನಾವು ಮಾನವರು ಎಂದು ಹೇಳಿಕೊಳ್ಳುವುದರಲ್ಲಿ ಯಾವ ಅರ್ಥವಿದೆ ?? ನನಗೇ ಯೋಗ್ಯತೆ ಇಲ್ಲದೆ ಇರಬಹುದು ಈ ಸಮಾಜದಲ್ಲಿ ಜೀವಿಸಲು.. ನಾನು ಕಲ್ಪಿಸಿಕೊಂಡಿರುವ ಜೀವನದ ಅರ್ಥವೇ ತಪ್ಪಿದ್ದರೂ ಇರಬಹುದು. ನನಗೇ ಏಕಾಂತದ ಅಗತ್ಯವಿದೆ ಎನ್ನಿಸತೊಡಗಿದೆ. ಇದು ಇಡಿ ಜೀವನಕ್ಕೂ ಅನ್ವಯಿಸುವುದಿಲ್ಲ, ಕೇವಲ ದಿನಗಳ ಮಟ್ಟಿಗೆ. ನನ್ನನ್ನು ನಾನು ಅರಿಯಲು ಅಥವಾ ಈ ಜಗತ್ತಿಗೆ ತಕ್ಕಂತೆ ಬದಲಿಸಿಕೊಳ್ಳುವವರೆಗೆ ನಾನು ಒಂಟಿಯಾಗಿರಬೇಕಿದೆ.





ಕಣ್ಣು ಮುಚ್ಚಿಕೊಂಡು ಕರ್ಣಾಟಕದ ಭೂಪಟದ ಮೇಲೆ ಬೆರಳು ಆಡಿಸುತ್ತಿರುವೆ, ಯಾವ ಜಾಗದಲ್ಲಿ ಬೆರಳು ನಿಲ್ಲುತ್ತದೆಯೋ ಅಲ್ಲಿಗೆ ನನ್ನ ಪಯಣ. ನನಗೇ ಆ ಊರು ಸುಂದರವಾಗಿರಬೇಕೆಂದು ಏನು ಇಲ್ಲ, ಇಲ್ಲಿಂದ ಮುಕ್ತಿ ಬೇಕಾಗಿದೆ ಅಷ್ಟೇ. ಭಯ ಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಹಿಂತಿರುಗುವೆ. ನನ್ನದೇ ಆದ ಮನಸ್ಸೊಂದಿದೆ, ಅದಕ್ಕೆ ಆದ ಅಗತ್ಯತೆಗಳಿವೆ. ನಿಮ್ಮೆಲ್ಲರ ಮಾತನ್ನೂ ಕೇಳಿದಂತೆ ನನ್ನ ಮನಸ್ಸಿನ ಮಾತನ್ನೂ ಕೇಳಬೇಕಿದೆ. ಬಿಟ್ಟು ಹೋದ ನಿರೀಕ್ಷೆಗಳಿಗೆ ನಾನೇ ಜವಾಬ್ದಾರ ಎಂಬ ಅರಿವು ನನಗಿದೆ.





ನಡೆದ ದಾರಿಯ ಮೇಲೆ ಹೋದ ಹೆಜ್ಜೆಯ ಸಾಲು
ದೂರ ಬೆಟ್ಟದ ಮೇಲೆ ಬೆಳಕುಗಳ ಬೀಡು
ತುಂಬು ಹೊಳೆಯಂತೆ ಗಂಭೀರವಾಗಿ ಹರಿಯುತ್ತಲೇ ಇದೆ
ಒಳಗೆ ಎಂದೂ ಮುಗಿಯದ ಹಾಡು
ಜಿ.ಎಸ್. ಶಿವರುದ್ರಪ್ಪ

ಇತಿ,
ನಿಮ್ಮ ಪ್ರೀತಿಯ.....
 

© 2009   Created by BELLARY on Ning.   Create Your Own Social Network

Badges  |  Report an Issue  |  Privacy  |  Terms of Service